ಹುಬ್ಬಳ್ಳಿ | ಬಿಸಿಲಿನ ಝಳಕ್ಕೆ ತಂಪೆರೆದ ಮಳೆ

Date:

Advertisements

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಹುಬ್ಬಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಹಲವು ದಿನಗಳಿಂದ ಬಿಸಿಲಿನ ಝಳದಿಂದ ಬೇಸತ್ತಿದ್ದ ಜನತೆಗೆ ತಂಪಿನ ವಾತಾವರಣದ ಅನುಭವ ನೀಡಿದೆ.

ಹುಬ್ಬಳ್ಳಿ ನಗರದಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಮಿಂಚಿನ ಸಹಿತ ಉತ್ತಮ ಮಳೆಯಾಗಿದೆ. ಸೋಮವಾರ ಸಂಜೆಯೂ ಒಂದಿಷ್ಟು ಮಳೆಯಾಗಿ ಇಳೆ ತಂಪಾಗಿತ್ತು. ಚಂಡಮಾರುತದ ಪರಿಣಾಮದಿಂದ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ಮಳೆ ನೀರು ಹೊಕ್ಕಿದೆ. ಗ್ರಾಮೀಣ ಭಾಗದಲ್ಲಿ ಉಳುಮೆಗೆ ಅನುಕೂಲವನ್ನೂ ಮಾಡಿಕೊಟ್ಟಿದೆ.

“ಜೂನ್ ಮೊದಲ ವಾರ ಮುಂಗಾರು ಆರಂಭವಾಗುವ ಹಿನ್ನಲೆಯಲ್ಲಿ ಭೂಮಿ ಹದಗೊಳಿಸಲು ಮಳೆಯ ಅವಶ್ಯಕತೆ ಇತ್ತು. ಈಗ ಸುರಿದ ಮಳೆಯಿಂದಾಗಿ ರೈತರು ಮುಂಗಾರು ಬಿತ್ತನೆಯ ತಯಾರಿಯಲ್ಲಿದ್ದಾರೆ.

Advertisements
ಭಾರೀ ಮಳೆ
ರಸ್ತೆ ದಾಟಲು ಪರದಾಡುತ್ತಿರುವ ವಾಹನ ಸವಾರರು

ಅಲ್ಲಲ್ಲಿ ರಸ್ತೆ, ಚರಂಡಿ ಕಾಮಗಾರಿ ನಡೆಯುತ್ತಿವೆ. ಈಗ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ನೀರು ಸಂಪೂರ್ಣ ರಸ್ತೆಯನ್ನು ಆವರಿಸಿದೆ. ಇದರಿಂದ ಜನರ ಓಡಾಟಕ್ಕೂ ತೊಂದರೆಯಾಗಿದೆ. ಯಾವುದು ರಸ್ತೆ, ಯಾವುದು ಗುಂಡಿ ಎಂಬುದು ತಿಳಿಯದೆ ದ್ವಿಚಕ್ರ ವಾಹನ ಸವಾರರು ರಸ್ತೆ ದಾಟಲು ಪರದಾಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅರ್ಧ ಗಂಟೆ ಸುರಿದ ಮಳೆಗೆ ಕೆರೆಯಂತಾದ ರಸ್ತೆಗಳು

ಹುಬ್ಬಳ್ಳಿ ನಗರದಲ್ಲಿ ಮಳೆ ನೀರು ಚರಂಡಿಯಲ್ಲಿ ಸರಾಗವಾಗಿ ಹರಿಯದ ಪರಿಣಾಮ ರಸ್ತೆ ಮೇಲೆಯೇ ನೀರು ಹರಿಯುತ್ತಿದ್ದು, ಹಲವಾರು ಬೈಕ್‌ಗಳು ಮಳೆ ನೀರಿನಿಂದ ಆವೃತವಾಗಿವೆ. ಇನ್ನು ಮಾರುಕಟ್ಟೆ ಪ್ರದೇಶದಲ್ಲಿನ ಪರಿಸ್ಥಿತಿಯಂತೂ ಹೇಳತೀರದು. ಮಳೆಯಾಗುವ ಸೂಚನೆ ಇದ್ದರೂ ನಿರೀಕ್ಷೆಗೆ ಮೀರಿ ಮಳೆಯಾಗಿದೆ.

ಹುಬ್ಬಳ್ಳಿ ನಗರದ ಲ್ಯಾಮಿಂಗ್ಟನ್ ಶಾಲೆಯಲ್ಲಿ ಚುನಾವಣಾ ಮಸ್ಟರಿಂಗ್ ಕೇಂದ್ರವಿದ್ದು, ಮಳೆಯಿಂದಾಗಿ ಮಸ್ಟರಿಂಗ್ ಕಾರ್ಯವು ಅಸ್ತವ್ಯಸ್ತವಾಗಿದೆ. ಊಟದ ಸಮಯಕ್ಕೆ ಮಳೆ ಸುರಿದ ಪರಿಣಾಮ ಇಡೀ ಶಾಮಿಯಾನ ಸೋರಲಾರಂಭಿಸಿದೆ. ಇನ್ನು ಮತಯಂತ್ರ ಸೇರಿದಂತೆ ಇತರೆ ಸಾಮಾಗ್ರಿಗಳನ್ನು ತೆಗೆದುಕೊಂಡು ವಾಹನದ ಬಳಿ ಹೋಗಲಾರದಂತಹ ಸ್ಥಿತಿ ನಿರ್ಮಾಣವಾಗಿದ್ದು, ಚುನಾವಣಾ ಸಿಬ್ಬಂದಿ ಪರದಾಡುವಂತಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X