ಹುಬ್ಬಳ್ಳಿ | ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದು: ಬಸವರಾಜ ಹೊರಟ್ಟಿ

Date:

ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದು ಅನ್ನೋ ಪರಿಸ್ಥಿತಿ ಉಂಟಾಗಿದೆ. ಪ್ರಜಾಪ್ರಭುತ್ವಕ್ಕೆ ಕರ್ನಾಟಕ ಹೆಸರಾದಂತ ರಾಜ್ಯ. ಹಾಗಾಗಿ ಈ ಬಾರಿಯಾದರೂ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಚುನಾವಣೆ ನಡೆಯುತ್ತದೆಂದು ಹೇಳಬಹುದು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

- Advertisement -

ಹುಬ್ಬಳ್ಳಿಯಲ್ಲಿ ಕುಟುಂಬದೊಂದಿಗೆ ಬಂದು ಮತ ಚಲಾಯಿಸುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಲ್ಲೆಡೆ ಭ್ರಷ್ಟಾಚಾರ ಅತಿರೇಕಕ್ಕೇರಿದೆ. ಪ್ರಜಾಪ್ರಭುತ್ವದಲ್ಲಿ ಇಂತಹ ಅನೈತಿಕ ಕೆಲಸಗಳು ನಡೆಯುವುದು ಒಳ್ಳೆಯದಲ್ಲ. ಕಳೆದ ಒಂದು ತಿಂಗಳಿಂದ ಭ್ರಷ್ಟಾಚಾರ ಇನ್ನೂ ಮಿತಿಮೀರಿದೆ. ಕಾನೂನು ಮಾಡುವವರು ಮತ್ತು ರಾಜ್ಯ ಆಳುವಂತಹವರು ಎಂಥವರಿರಬೇಕು ಎಂಬುದನ್ನು ಜನ ನಿರ್ಧಾರ ಮಾಡುತ್ತಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಒಂದು ವೋಟಿಗೆ ₹5000 ಕೊಟ್ಟಿದ್ದಾರೆಂದು ಯಾರೋ ಹೇಳುತ್ತಿದ್ದರು. ಲೆಕ್ಕ ತೆಗೆದರೆ ದಿನಕ್ಕೆ ಒಂದೂವರೆ ರೂ. ಆಯ್ತು ಅಷ್ಟೇ. ಇದಕ್ಕಿಂತ ಮರ್ಯಾದೆ ಹೋಗುವಂತದ್ದು ಇನ್ನೇನು ಬೇಕು. ಸರಿಯಾಗಿ ಕೆಲಸ ಮಾಡಿದರೆ ಹಣ ಹಂಚುವ ಅಗತ್ಯವಿಲ್ಲ. ಯಾರಮೇಲೆ ಯಾರೂ ಡಿಪೆಂಡ್‌ ಆಗಬಾರದು. ಈ ಬಾರಿ ಪ್ರಜಾಪ್ರಭುತ್ವದಲ್ಲಿ ಉತ್ತಮರನ್ನು ಆಯ್ಕೆ ಮಾಡಬೇಕು” ಎಂದು ಕರೆ ನೀಡಿದರು.

ಮತದಾನ ಮಾಡಿದ ಬಸವರಾಜ ಹೊರಟ್ಟಿ ಕುಟುಂಬ

“ಯಾವುದೇ ಅಭ್ಯರ್ಥಿಗಳು ಜನರಿಗೆ ಹಣದ ಆಮಿಷವೊಡ್ಡಿದ್ದರೂ ಕೂಡ ಮತದಾರರು ಈ ಬಾರಿ ಯೋಗ್ಯರಿಗೆ ಮತ ನೀಡುತ್ತಾರೆಂದು ನಾನು ನಂಬಿದ್ದೇನೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‌

“ಪಕ್ಷದ ಅಮಲು, ಭ್ರಷ್ಟಾಚಾರ ಎನ್ನುವಂಥದ್ದು ಪರಾಕಾಷ್ಟೆಗೆ ಹೋಗುತ್ತಿದೆ. ಹಾಗೆ ಹೋಗಬಾರದು. ಸರ್ಕಾರ ಎಲ್ಲ ರೀತಿಯಿಂದಲೂ ಕ್ರಮ ಕೈಗೊಳ್ಳಬೇಕು. ಆದರೆ, ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ. ಆದರೂ, ಇದನ್ನು ಬಿಡಿಸುವುದು ಸುಲಭವೇನಲ್ಲ ಅನಿಸುತ್ತದೆ. ಭ್ರಷ್ಟಾಚಾರದಲ್ಲಿ ಸಿಕ್ಕವರನ್ನು ಗೊತ್ತುಮಾಡಿ, ಕಠಿಣ ಶಿಕ್ಷೆ ವಿಧಿಸಿ, ಸಾರ್ವಜನಿಕರಿಗೆ ತಿಳಿಸಬೇಕು. ಇಲ್ಲವಾದಲ್ಲಿ ಯಾರೇನು ಅಕ್ರಮ ಮಾಡುತ್ತಾರೆಂಬುದು ಸಾರ್ವಜನಿಕವಾಗಿ ಗೊತ್ತಾಗುವುದಿಲ್ಲ” ಎಂದರು.

“ಕೆಲವು ದಿನಗಳಲ್ಲಿ ಐಟಿ ದಾಳಿ ಆಯ್ತು, ಯಾರ ಮೇಲೆ ಆಯ್ತು, ಆ ಹಣ ಎಲ್ಲಿಂದ ಬಂತು, ಏನಾಯ್ತು ಎಂಬುದನ್ನು ಪತ್ತೆಹಚ್ಚಿ, ಅವರನ್ನು ಅವರ ಅಕ್ರಮಗಳನ್ನು ಸಾಮಾನ್ಯ ಜನರಿಗೂ ಪರಿಚಯಿಸಬೇಕು” ಎಂದು ತಿಳಿಸಿದರು.

“1980ರ ಕಾಲದಲ್ಲಿ ನಾನು ರಾಜಕೀಯಕ್ಕೆ ಕಾಲಿಟ್ಟಾಗ ಯಾವುದೇ ದ್ವೇಷದ ರಾಜಕಾರಣ ಇರಲಿಲ್ಲ. ಹೆಗಲ ಮೇಲೆ ಕೈ ಹಾಕ್ಕೊಂಡು ಸ್ನೇಹಿತರಂತೆ ಇರುತ್ತಿದ್ದೆವು. ಅವತ್ತಿನ ರಾಜಕಾರಣ ಬೇರೆ, ಇಂದಿನ ರಾಜಕಾರಣ ಬೇರೆ. ಒಟ್ಟಾರೆ ರಾಜಕಾರಣ ಕುಲಗೆಟ್ಟಿದೆ. ಅದನ್ನು ಸುಧಾರಣೆ ಮಾಡುವಂಥದ್ದೆಲ್ಲ ಮಾಧ್ಯಮದವರ ಕೈಯಲ್ಲೇ ಇದೆ” ಎಂದರು.

“ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸುವ, ಚಿಂತಿಸುವ ಬದಲಾಗಿ ವೈಯಕ್ತಿಕವಾಗಿ ಒಬ್ಬರನ್ನೊಬ್ಬರು ಟೀಕೆ ಮಾಡುತ್ತಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಬದಲಾಗಿ ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸಬೇಕು” ಎಂದು ತಿಳಿಸಿದರು.

“ಭಾರತದ ಪ್ರಜಾಪ್ರಭುತ್ವ ಇಡೀ ಜಗತ್ತಿನಲ್ಲಿಯೇ ಮಹತ್ವದ್ದಾಗಿದೆ. ಹಾಗಾಗಿ ಪ್ರಜಾಪ್ರಭುತ್ವ ಉಳಿಸಿ, ಬೆಳೆಸಲು ಎಲ್ಲರೂ ಪ್ರಾಮಾಣಿಕ ಕೆಲಸ ಮಾಡಬೇಕು” ಎಂದು ಸಂದೇಶ ನೀಡಿದರು.  

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...