ಹುಬ್ಬಳ್ಳಿ | ತೋರಣಗಲ್ಲು-ಗುಂತಕಲ್ ನಡುವೆ ರೈಲು ಸಂಚಾರ ಭಾಗಶಃ ರದ್ದು

Date:

Advertisements

ಹುಬ್ಬಳ್ಳಿ ಮತ್ತು ಗುಂತಕಲ್‌ ರೈಲಿ ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ, ಉಭಯ ನಗರಗಳ ನಡುವೆ ಪ್ರತಿದಿನ ಸಂಚರಿಸುವ ಪ್ಯಾಸೆಂಜರ್ ರೈಲನ್ನು (07337) ಸಂಚಾರವನ್ನು ಮೇ 17ರಿಂದ 23ರವರೆಗೆ ತೋರಣಗಲ್ಲು-ಗುಂತಕಲ್ ನಿಲ್ದಾಣದ ನಡುವೆ ರದ್ದುಗೊಳಿಸಲಾಗಿದೆ. ಈ ರೈಲು ಗುಂತಕಲ್ ಬದಲು ತೋರಣಗಲ್ಲಿನಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ ಎಂದು ನೈರುತ್ಯ ರೈಲ್ವೆ ಹೇಳಿದೆ.

ಗುಂತಕಲ್-ಎಸ್‌ಎಸ್‌ಎಸ್‌ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ರೈಲಿನ (07338) ಗುಂತಕಲ್-ತೋರಣಗಲ್ಲು ನಿಲ್ದಾಣದ ನಡುವಣ ಸಂಚಾರವನ್ನು ಮೇ 17ರಿಂದ 23ರವರೆಗೆ ರದ್ದುಗೊಳಿಸಲಾಗುತ್ತಿದೆ. ಈ ರೈಲು ಗುಂತಕಲ್ ಬದಲು ತೋರಣಗಲ್ಲಿನಿಂದ ಹೊರಡಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೈಸೂರು –ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್‌ಪ್ರೆಸ್ (17326) ರೈಲಿನ ಬೀರೂರು ಮತ್ತು ಬೆಳಗಾವಿ ನಡುವಣ ಸಂಚಾರವನ್ನು ಮೇ 18ರಿಂದ 24ರವರೆಗೆ ಹಾಗೂ ಬೆಳಗಾವಿ–ಮೈಸೂರು ವಿಶ್ವಮಾನವ ಡೈಲಿ ಎಕ್ಸ್‌ಪ್ರೆಸ್ (17325) ರೈಲಿನ ಬೆಳಗಾವಿ ಮತ್ತು ಬೀರೂರು ನಿಲ್ದಾಣದ ನಡುವಿನ ಸಂಚಾರವನ್ನು ಮೇ 18ರಿಂದ 24ರವರೆಗೆ ಭಾಗಶಃ ರದ್ದುಪಡಿಸಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X