ಹುಬ್ಬಳ್ಳಿ | ಸ್ಮಶಾನ ಭೂಮಿಯಲ್ಲಿ‌ ಇಂದಿರಾ ಕ್ಯಾಂಟೀನ್: ಸ್ಥಳಾಂತರಕ್ಕೆ ಪಾಲಿಕೆ ಆಯುಕ್ತರ ಆದೇಶ

Date:

Advertisements

ಹುಬ್ಬಳ್ಳಿಯ ಸ್ಮಶಾನ ಭೂಮಿಯಲ್ಲಿ‌ ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿ ಸ್ಥಗಿತಗೊಳಿಸಿ, ಬೇರೆ ಕಡೆಗೆ ಸ್ಥಳಾಂತರಿಸಲು ಹುಬ್ಬಳ್ಳಿ ಧಾರವಾಡ ಆಯುಕ್ತ ಈಶ್ವರ ಉಳ್ಳಾಗಡ್ಡಿ ಆದೇಶ ಹೊರಡಿಸಿದ್ದಾರೆ.

ನಗರದ ಮಂಟೂರ್ ರಸ್ತೆಯಲ್ಲಿರುವ ಹರಿಶ್ಚಂದ್ರ ರುದ್ರಭೂಮಿ ಜಾಗೆಯಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿ ಶುರುವಾಗಿ ಮುಗಿಯುವ ಹಂತದಲ್ಲಿತ್ತು. ಆ ಸಮಯದಲ್ಲಿ ರುದ್ರಭೂಮಿ ಅಭಿವೃದ್ಧಿ ಸಮಿತಿ, ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದೂಪರ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಇಂದಿರಾ ಕ್ಯಾಂಟೀನ್ ತೆರವುಗೊಳಿಸುವಂತೆ ಮನವಿ‌ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪಾಲಿಕೆ ಆಯುಕ್ತರು ಇಂದಿರಾ ಕ್ಯಾಂಟೀನ್ ಸ್ತಳಾಂತರ ಮಾಡುವಂತೆ ಪ್ರಕಟಣೆ ಹೊರಡಿಸಿದ್ದಾರೆ.

ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಡ ಹಾಗೂ ಕೂಲಿ ಕಾರ್ಮಿಕರಿಗೆ ಅತೀ ಕನಿಷ್ಠ ಬೆಲೆಗೆ ಊಟ ಹಾಗೂ ಉಪಹಾರವನ್ನು ನೀಡಲು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಇಂದಿರಾ ಕ್ಯಾಂಟಿನ್‌ ಅನ್ನು ಸ್ಥಾಪಿಸಲು ಯೋಜನೆಯನ್ನು ರೂಪಿಸಲಾಗಿದೆ. ಅದರಂತೆ ಹೊಸದಾಗಿ ಎರಡು ಇಂದಿರಾ ಕ್ಯಾಂಟಿನ್‌ಗಳನ್ನು ನಿರ್ಮಿಸಲು 2ನೇ ಜನೆವರಿ 2024ರಂದು ಸರ್ಕಾರದ ಅನುಮೋದನೆ ಪಡೆಯಲಾಗಿತ್ತು.

Advertisements

ಆ ಹಿನ್ನೆಲೆಯಲ್ಲಿ ಹರಿಶ್ಚಂದ್ರ ಕಾಲನಿ, ಮಂಟೂರ ರಸ್ತೆ, ಹುಬ್ಬಳ್ಳಿಯಲ್ಲಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಇಂದಿರಾ ಕ್ಯಾಂಟಿನ್‌ನ್ನು ಸ್ಥಳಾಂತರಿಸಲು ಒತ್ತಾಯಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಸೂಚನೆಯ ಮೇರೆಗೆ ಸ್ಮಶಾನ ಭೂಮಿಯಲ್ಲಿ‌ ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡದ ಕಾಮಗಾರಿ ಸ್ಥಗಿತಗೊಳಿಸಿ, ಬೇರೆಕಡೆಗೆ ಸರ್ಕಾರಿ ಜಾಗೆ ಗುರುತಿಸಿ ಸ್ಥಳಾಂತರ ಮಾಡಲು ಸರ್ಕಾರದ ಅನುಮೋದನೆ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಇಂದಿರಾ ಕ್ಯಾಂಟೀನ್ ತೆರವುಗೊಳಿಸಲು ಆಗ್ರಹಿಸಿ ಪ್ರತಿಭಟಿಸಿದ್ದ ಸಂಘ ಸಂಸ್ಥೆ ಮತ್ತು ರುದ್ರಭೂಮಿ ಅಭಿವೃದ್ಧಿ ಸಮಿತಿ, ಪ್ರಕಟಣೆಯಲ್ಲಿ ಹಿಂದೂಪರ ಸಂಘಟನೆಗಳು‌, ಪಾಲಿಕೆ ಆಯುಕ್ತರಿಗೆ, ಪ್ರತಿಭಟನೆಯಲ್ಲಿ ಕೈಜೋಡಿಸಿದ ವಿವಿಧ ಸಂಘಟಕರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X