ಹುಬ್ಬಳ್ಳಿ | ಅಯ್ಯಪ್ಪ ಸನ್ನಿಧಿಯಲ್ಲಿ ಸಿಲೆಂಡರ್ ಸ್ಫೋಟ: 4ಕ್ಕೆ ಏರಿಕೆಯಾದ ಸಾವಿನ‌ ಸಂಖ್ಯೆ

Date:

Advertisements

ಹುಬ್ಬಳ್ಳಿಯ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಸಿಲೆಂಡರ್ ಸ್ಫೋಟ ಪ್ರಕರಣದಲ್ಲಿ ಒಟ್ಟು ಹತ್ತು ಮಂದಿ ಮಾಲಾಧಾರಿಗಳು ಗಾಯಗೊಂಡ ಹಿನ್ನೆಲೆಯಲ್ಲಿ ಇದುವರೆಗೆ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಡಿಸೆಂಬರ್ 26ಕ್ಕೆ ಇಬ್ಬರು ಸಾವನ್ನಪ್ಪಿದರು ಮತ್ತು ಡಿ. 27 ಮತ್ತಿಬ್ಬರು ಸಾವಪ್ಪಿದ್ದು ಸಾವಿನ ಸಂಖ್ಯೆ ನಾಲ್ಕು ತಲುಪಿದೆ. ಕಳೆದ ಭಾನುವಾರ ಗ್ಯಾಸ್ ಸೋರಿಕೆಯಾದ ಪರಿಣಾಮ ಸಿಲಿಂಡರ್ ಸ್ಫೋಟಗೊಂಡು 10 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಡಿ. 26ಕ್ಕೆ ನಿಜನಿಂಗಪ್ಪ ಬೇಪೂರಿ ಹಾಗೂ ಸಂಜಯ ಸವದತ್ತಿ ಎಂಬ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಡಿ. 27ಕ್ಕೆ ಬೆಳಗ್ಗೆ ರಾಜು ಮೂಗೇರ ಸಾಯಂಕಾಲ 19ವರ್ಷದ ಲಿಂಗರಾಜ ಬೀರನೂರ ಮೃತಪಟ್ಟಿದ್ದಾರೆ.

ಕಿಮ್ಸ್​ಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮಾಧ್ಯಮದವರೊಂದಿಗೆ ಮಾತನಾಡಿ, ಗಾಯಾಳುಗಳನ್ನು ಉಳಿಸಿಕೊಳ್ಳಲು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ. ನುರಿತ ವೈದ್ಯರಿಂದ ಚಿಕಿತ್ಸೆ ಕೊಡಿಸಿದ್ವಿ ಆದರೂ ಮೃತಪಟ್ಟಿದ್ದಾರೆ. ಮೃತ ಕುಟುಂಬಕ್ಕೆ ಮುಖ್ಯಮಂತ್ರಿಗಳು 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಹೆಚ್ಚಿನ ಪರಿಹಾರ ಕೊಡಿಸುವುದು ದೊಡ್ಡ ಕೆಲಸವಲ್ಲ. ಅವರನ್ನು ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದೇವೆ. ಆ ಕುಟುಂಬಕ್ಕೆ ಅನುಕೂಲವಾಗುವ ಕೆಲಸ ಮಾಡಲು ಪ್ರಯತ್ನಿಸುತ್ತೇವೆ ಎಂದರು.

Advertisements

ಇನ್ನುಳಿದ ಗಾಯಗೊಂಡ ಐದು ಮಂದಿಗೆ ಕೆಎಂಸಿ/ಆರ್​ಐನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಐದಾರು ಜನರ ಪರಿಸ್ಥಿತಿ ಚಿಂತಾಜನಕವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X