ಹುಬ್ಬಳ್ಳಿ | ಸಂವಿಧಾನದ ಆಶಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ: ಕೆಪಿಸಿಸಿ ವಕ್ತಾರ

Date:

Advertisements

ಹುಬ್ಬಳ್ಳಿ ಮಾನವ ಹಕ್ಕುಗಳ ಘಟಕದ ವತಿಯಿಂದ ಯುಎಪಿಎ ನಂತಹ ಕಾನೂನುಗಳ ಮೂಲಕ ಅಲ್ಪಸಂಖ್ಯಾತರನ್ನು ವಿನಾಕಾರಣ ಶೋಷಿಸಲಾಗುತ್ತಿದೆ. ಕಾನೂನಿನ ದುರ್ಬಳಕೆ ಮಾಡಲಾಡುತ್ತಿದೆ. ಇಂತಹ ಸಂದರ್ಭದಲ್ಲಿ ಸಂವಿಧಾನದ ಆಶಯಗಳನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ಹೇಳಿದ್ದಾರೆ.

ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. “ಭಾರತವು ಜಾತಿ, ಮತ, ಪಂಥಗಳ ಗಡಿ ದಾಟಿ, ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿದೆ. 300 ವರ್ಷಗಳ ಕಾಲ ಆಳಿದ ಬ್ರಿಟಿಷರನ್ನು ದೇಶದಿಂದ ಓಡಿಸುವಲ್ಲಿ ಯಶಸ್ಸಾಗಿದೆ. ಕೋಮುದ್ವೇಷವ ಕಿತ್ತೊಗೆದು ಭಾವೈಕ್ಯತೆಯ ಸಾಧಿಸಿದೆ. ಇಲ್ಲಿ ಸರ್ವರೂ ಒಂದಾಗಿ ನಡೆದಿದ್ದೇವೆ” ಎಂದರು.

“ಬದಲಾದ ಕಾಲಘಟ್ಟದಲ್ಲಿ ಜಾತಿಯ ಪೆಡಂಬೂತಗಳು ದೇಶದಲ್ಲೆಡೆ ಹರಡಿ ಜಾತಿ ವೈಷಮ್ಯ ಬೆಳೆಯಲು ಕಾರಣವಾಗಿದೆ. ಸಮಾನತೆಯ ಸಾಧಿಸಿದರೂ ಕೆಲವು ಪಟ್ಟಭದ್ರರಿಂದ ಜಾತಿ ತಾರತಮ್ಯ ಉಂಟಾಗಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಭಾರತ ಸಂವಿಧಾನದ ಮೂಲ ಆಶಯವೂ ನಾಶವಾಗುವ ಸ್ಥಿತಿಗೆ ತಲುಪಿದೆ. ಹೀಗಾಗಿ, ಸಂವಿಧಾನದ ಸರ್ವ ಸಮಾನತೆಯ ಆಶಯವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ” ಎಂದು ತಿಳಿಸಿದರು.

Advertisements

ಪ್ರತಿಭಟನೆಯಲ್ಲಿ ಸುನೀಲ್ ಸಾಂಡ್ರಾ, ಗುರುನಾಥ ಉಳ್ಳಿಕಾಶಿ, ಪ್ರಕಾಶ ಕುರಹಟ್ಟಿ, ಈಶ್ವರ ಶಿರಸಂಗಿ, ಎಂ ಐ ಕಾಟೇವಾಡಿ, ಅನಿತಾ ಗುಂಜಾಳ, ಎಚ್ ಎಂ ಕೊಪ್ಪದ, ಸುರೇಶ ಸೊಪ್ಪಿನ, ಗೌತಮ ಹರಿವಾಣ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X