ಹುಬ್ಬಳ್ಳಿ | ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ: ಓರ್ವ ಯುವಕ ಸಾವು

Date:

Advertisements

ಗುಂಪು ಹಲ್ಲೆಯಲ್ಲಿ ಓರ್ವ ಯುವಕನಿಗೆ ಚಾಕುವಿನಿಂದ ಇರಿದ ಪರಿಣಾಮ 19 ವರ್ಷದ ಸಮೀರ್ ಶೇಖ್ ಎಂಬ ಯುವಕನು ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಕಳೆದ ಸೋಮವಾರ ಮಕ್ಕಳ ಜಗಳ ತಾರಕಕ್ಕೇರಿದ ಪರಿಣಾಮ ಸಮೀರ್ ಮತ್ತು ಆತನ ಚಿಕ್ಕಪ್ಪ ಜಾವೀದ್ ಮೇಲೆ ಸ್ಥಳೀಯ ಯುವಕರು ಮುಗಿಬಿದ್ದು, ಚಾಕುವಿನಿಂದ ಇರಿದಿರುವ ಘಟನೆ ಹಳೆ ಹುಬ್ಬಳ್ಳಿಯ ಗೋಡ್ಕೆ ಪ್ಲಾಟ್ ನಲ್ಲಿ ನಡೆದಿದ್ದು, ಹಲ್ಲೆಗೊಳಗಾಗಿದ್ದ ಜಾವೀದ್ ಮತ್ತು ಸಮೀರ್ ಇಬ್ಬರನ್ನೂ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಜ. 1ರಂದು ಸಮೀರ್ ಸಾವೀಗಿಡಾಗಿದ್ದಾನೆ.

ಓಣಿಯಲ್ಲಿ ಸಣ್ಣ ಮಕ್ಕಳು ಜಗಳವಾಡಿದ್ದು, ಸಮೀರ್ ಜಗಳವಾಡುತ್ತಾನೆ. ಮನೆಯ ಮಹಿಳೆಯರೊಂದಿಗೆ ಜಗಳ ತೆಗೆಯಲು ಬಂದಿದ್ದೀರಿ ಎಂದು ಯುವಕರೆಲ್ಲ ಸೇರಿ ಸಮೀರ್ ಮತ್ತು ಜಾವೀದ್ ಇಬ್ಬರನ್ನು ಬೆನ್ನುಹತ್ತಿ ಚಾಕುವಿನಿಂದ ಇರಿದಿದ್ದಾರೆ. ಸಮೀರ್ ಸಾವಿಗೀಡಾಗಿದ್ದು, ಆತನ ಚಿಕ್ಕಪ್ಪ ಜಾವೀದ್ ಸದ್ಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹಳೆಹುಬ್ಬಳ್ಳಿ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದರು.

Advertisements

ಈ ಮೊದಲು ಎರಡು ಕುಟುಂಬಗಳ ನಡುವೆ ಹಳೆ ವೈಷಮ್ಯವಿದ್ದು, ಆ ಕ್ಷುಲ್ಲಕ ಕಾರಣವಾನ್ನಿಟ್ಟುಕೊಂಡು ಸಮೀರ್ ಮೇಲೆ ಮುಗಿಬಿದ್ದು, ಕೊಲೆ ಮಾಡಿದ್ದಾರೆ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ.

ಈ ವರದಿ ಓದಿದ್ದೀರಾ? ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ, ನವಜಾತ ಶಿಶು ಸಾವು

ಹಲ್ಲೆ ಮಾಡಿದ ಗುಂಪಿನಲ್ಲಿ 15ಜನರಿದ್ದು, ಆರೋಪಿಗಳ ಪೈಕಿ ಇದುವರೆಗೂ 7 ಜನರನ್ನು ಬಂಧಿಸಲಾಗಿದ್ದು, ಈ ಕುರಿತ ಆರೋಪಿ ಮುಜಾಮಿಲ್ ಎಂಬಾತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ. ಮತ್ತು ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X