ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಹಲವು ರೈಲುಗಳ ಸಂಚಾರ ರದ್ದು

Date:

Advertisements

ಕಾರಟಗಿ ಮತ್ತು ಸಿದ್ದಾಪುರ ನಿಲ್ದಾಣಗಳಲ್ಲಿ ನಡೆಯುತ್ತಿರುವ ರೈಲ್ವೆ ಸಂಬಂಧಿತ ಕಾಮಗಾರಿಗಳಿಂದಾಗಿ ರೈಲುಗಳು ಭಾಗಶಃ ರದ್ದುಗೊಳ್ಳಲಿವೆ. ಯಶವಂತಪುರ-ಕಾರಟಗಿ ಎಕ್ಸ್‌ಪ್ರೆಸ್ (16545) ಸೇವೆ ನವೆಂಬರ್ 21ರಿಂದ 30 ರವರೆಗೆ ಗಂಗಾವತಿ ಮತ್ತು ಕಾರಟಗಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.

ನೈಋತ್ಯ ರೈಲ್ವೆಯು ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಪ್ರಯಾಣಿಸುವ ಎರಡು ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ನವೆಂಬರ್​ 20ಮತ್ತು 21ರಂದು ಪ್ರಯಾಣಿಸಬೇಕಿದ್ದ, ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ ಮತ್ತು ಕೆಎಸ್‌ಆರ್ ಬೆಂಗಳೂರು ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲನ್ನು ಕಳಪೆ ಆಕ್ಯುಪೆನ್ಸಿ ಕಾರಣದಿಂದ ರದ್ದು ಮಾಡಲಾಗಿದೆ. ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಪ್ರಯಾಣಿಸುವ ರೈಲುಗಳು ಮುಂದಿನ ಸುತ್ತೋಲೆ ಬರುವವರೆಗೂ ಹಳಿಗೆ ಇಳಿಯುವುದಿಲ್ಲ.

ಹೊಸಪೇಟೆ-ಹರಿಹರ ಪ್ಯಾಸೆಂಜರ್​​ ರೈಲುಗಳನ್ನು ಕಾರಣಾಂತರಗಳಿಂದ ನವೆಂಬರ್​ 17,18,19 ರದ್ದು ಮಾಡಲಾಗಿತ್ತು. ಇದೀಗ ರೈಲುಗಳು ಮೊದಲಿನ ವೇಳಾಪಟ್ಟಿಯಂತೆ ಮತ್ತೆ ಪ್ರಾರಂಭವಾಗಿವೆ. ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಬಾರ್ಮರ್ ಮಧ್ಯೆ ಹೆಚ್ಚು ರೈಲುಗಳನ್ನು ಓಡಿಸಲು ಇಲಾಖೆ ನಿರ್ಧರಿಸಿದೆ.

Advertisements

ರೈಲು ಸಂಖ್ಯೆ 06521 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಬಾರ್ಮರ್ ವಿಶೇಷ ಎಕ್ಸ್‌ಪ್ರೆಸ್, ನವೆಂಬರ್ 21ರಂದು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರಿನಿಂದ ಸಂಜೆ 4.30ಕ್ಕೆ ಹೊರಡಲಿದೆ. ನವೆಂಬರ್ 23ರಂದು ಮಧ್ಯಾಹ್ನ 1.45ಕ್ಕೆ ಬಾರ್ಮರ್ ತಲುಪುತ್ತದೆ. ಬಾರ್ಮರ್-ಸರ್ ಎಂ. ವಿಶ್ವೇಶ್ವರಯ್ಯ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 24ರಂದು ಬೆಳಿಗ್ಗೆ 3.45 ಕ್ಕೆ ಬಾರ್ಮರ್‌ನಿಂದ ಹೊರಟು, ನವೆಂಬರ್ 25ರ ಬೆಳಿಗ್ಗೆ 11.30ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ತಲುಪಲಿದೆ.

ಈ ರೈಲುಗಳು ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ದಾವಣಗೆರೆ, ರಾಣಿಬೆನ್ನೂರು, ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಘಟಪ್ರಭಾ, ಮೀರಜ್, ಸತಾರಾ, ಪುಣೆ, ಕಲ್ಯಾಣ್, ವಸಾಯಿ ರಸ್ತೆ, ವಾಪಿ, ಸೂರತ್‌, ವಡೋದರಾ, ಅಹಮದಾಬಾದ್, ಮಹೇಶನ, ಪಟಾನ್, ಭಿಲ್ಡಿ, ಧನೇರಾ, ರಾಣಿವಾರ, ಮರ್ವಾರ್ ಭಿನ್ಮಾಲ್, ಮೋದ್ರನ್, ಜಲೋರ್, ಮೊಕಲ್ಸರ್, ಸಂಧಾರಿ, ಬಲೋತ್ರಾ ಮತ್ತು ಬೈತು ಮಾರ್ಗವಾಗಿ ಪ್ರಯಾಣಿಸುತ್ತದೆ.

ಈ ರೈಲುಗಳು ಎರಡು ಎಸಿ ಟು-ಟೈರ್ ಕೋಚ್‌ಗಳನ್ನು ಹೊಂದಿವೆ. 15 ಎಸಿ ತ್ರೀ-ಟೈರ್ ಎಕಾನಮಿ ಕೋಚ್‌ಗಳು ಮತ್ತು ಎರಡು ಲಗೇಜ್, ಜನರೇಟರ್, ಬ್ರೇಕ್ ವ್ಯಾನ್‌ಗಳನ್ನು ಹೊಂದಿವೆ.

ಕಾರಟಗಿ ಮತ್ತು ಸಿದ್ದಾಪುರ ನಿಲ್ದಾಣಗಳಲ್ಲಿ ನಡೆಯುತ್ತಿರುವ ರೈಲ್ವೆ ಸಂಬಂಧಿತ ಕಾಮಗಾರಿಗಳಿಂದಾಗಿ ಈ ಕೆಳಗಿನ ರೈಲುಗಳು ಭಾಗಶಃ ರದ್ದುಗೊಳ್ಳಲಿವೆ. ರೈಲು ಸಂಖ್ಯೆ 16545 ಯಶವಂತಪುರ-ಕಾರಟಗಿ ಎಕ್ಸ್‌ಪ್ರೆಸ್ ಸೇವೆ ನವೆಂಬರ್ 21ರಿಂದ 30ರವರೆಗೆ ಗಂಗಾವತಿ ಮತ್ತು ಕಾರಟಗಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.

ನವೆಂಬರ್ 21 ರಿಂದ 30ರವರೆಗೆ ಎಸ್‌ಎಸ್‌ಎಸ್ ಹುಬ್ಬಳ್ಳಿ-ಕಾರಟಗಿ ಎಕ್ಸ್‌ಪ್ರೆಸ್ (17303) ಸೇವೆ, ಗಂಗಾವತಿ ಮತ್ತು ಕಾರಟಗಿ ನಿಲ್ದಾಣಗಳ ನಡುವೆ, ಎಸ್‌ಎಸ್‌ಎಸ್ ಹುಬ್ಬಳ್ಳಿ-ಕಾರಟಗಿ ಪ್ಯಾಸೆಂಜರ್ (07381) ವಿಶೇಷ ಪ್ರಯಾಣವು ನವೆಂಬರ್ 21 ರಿಂದ 30 ರವರೆಗೆ ಗಂಗಾವತಿ ಮತ್ತು ಕಾರಟಗಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿವೆ.

ರೈಲು ಸಂಖ್ಯೆ 16546 ಕಾರಟಗಿ-ಯಶವಂತಪುರ ಎಕ್ಸ್‌ಪ್ರೆಸ್ ನವೆಂಬರ್ 22ರಿಂದ ಡಿಸೆಂಬರ್ 1 ರವರೆಗೆ ಕಾರಟಗಿಯಿಂದ ಹೊರಡುವ ಬದಲು ಗಂಗಾವತಿಯಿಂದ ಹೊರಡಲಿದೆ. ಕಾರಟಗಿ-ಎಸ್‌ಎಸ್‌ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ (17304) ನವೆಂಬರ್ 22 ರಿಂದ ಡಿಸೆಂಬರ್ 1 ರವರೆಗೆ ಕಾರಟಗಿ ನಿಲ್ದಾಣದ ಬದಲಾಗಿ ಗಂಗಾವತಿಯಿಂದ ಹೊರಡಲಿದೆ. ಕಾರಟಗಿ-ಎಸ್‌ಎಸ್‌ಎಸ್ ಹುಬ್ಬಳ್ಳಿ ಪ್ಯಾಸೆಂಜರ್ ವಿಶೇಷ ರೈಲು (07382) ನವೆಂಬರ್ 21ರಿಂದ 30 ರವರೆಗೆ ಕಾರಟಗಿ ನಿಲ್ದಾಣದಬ ಬದಲು ಗಂಗಾವತಿಯಿಂದ ಹೊರಡಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X