ಹುಬ್ಬಳ್ಳಿ | ಯುವಕನ ಕೊಲೆ ಪ್ರಕರಣ; ಕಾಲಿಗೆ ಗುಂಡಿಕ್ಕಿ ಆರೋಪಿಗಳ ಬಂಧನ

Date:

Advertisements

ಹುಬ್ಬಳ್ಳಿಯ ಗೋಪನಕೊಪ್ಪ ಜಂಕ್ಷನ್‌ನಲ್ಲಿ ಶುಕ್ರವಾರ ರಾತ್ರಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳ ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ.

ನಗರದ ಗೋಪನಕೊಪ್ಪದ ಸಂತೋಷನಗರ ರಸ್ತೆ ನಿವಾಸಿ ಶಿವರಾಜ್ ಕಮ್ಮಾರ(23) ಕೊಲೆಯಾದ ಯುವಕ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ತಂಡವೊಂದು ಶಿವರಾಜ್‌ನನ್ನು ಶುಕ್ರವಾರ ರಾತ್ರಿ ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆಮಾಡಿ ಪರಾರಿಯಾಗಿದ್ದರು.

ಈ ಕೊಲೆ ಪ್ರಕರಣದ ಆರೋಪಿಗಳಾದ ಸುದೀಪ್ ರಾಯಾಪುರ, ಕಿರಣ್ ಜಟ್ಟಪ್ಪನವರ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಇನ್ನುಳಿದ ಆರೋಪಿಗಳನ್ನು ಬಂಧಿಸುವುದಕ್ಕಾಗಿ ಸುದೀಪ್ ಮತ್ತು ಕಿರಣ್‌ ನೆಲೆಸಿದ್ದ ಸ್ಥಳಕ್ಕೆ ಅಶೋಕ ನಗರ ಠಾಣೆಯ ಪೊಲೀಸರು ಇಂದು ಮುಂಜಾನೆ ಕರೆದೊಯ್ದ ವೇಳೆ ಅವರು ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದರೆನ್ನಲಾಗಿದೆ. ಈ ವೇಳೆ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಬ್ಬೂರು ಗ್ರಾಮಸ್ಥರ ಕೆರೆ ತುಂಬಿಸುವ ಕಾರ್ಯ ಶ್ಲಾಘನೀಯ: ಶಿವಮೂರ್ತಿ ಶಿವಾಚಾರ್ಯ ಶ್ರೀ

ಆರೋಪಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಕೂಡಾ ಗಾಯಗೊಂಡಿದ್ದಾರೆ.

ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಭೇಟಿ ನೀಡಿ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

Download Eedina App Android / iOS

X