ಜನರಿಗೆ ನ್ಯಾಯ ಒದಗಿಸಲು ಮನುಷ್ಯನ ಕಷ್ಟಕ್ಕೆ ಸ್ಪಂದಿಸುವ ಗುಣ ಮುಖ್ಯ; ಸಿಎಂ ಸಿದ್ದರಾಮಯ್ಯ

Date:

ʻನಮಗೆ ಉನ್ನತ ಅವಕಾಶಗಳು ಸಿಕ್ಕಾಗ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಂಡಾಗ ಮಾತ್ರ ಬದುಕು ಸಾರ್ಥಕ ಆಗುತ್ತದೆ. ಉತ್ತಮ ನ್ಯಾಯದಾನದ ಮೂಲಕ ನ್ಯಾಯಮೂರ್ತಿ ಬಿ.ವೀರಪ್ಪ ಅವರು ತಮ್ಮ ಬದುಕು ಮತ್ತು ವೃತ್ತಿಯನ್ನು ಸಾರ್ಥಕಗೊಳಿಸಿದ್ದಾರೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಬೆಂಗಳೂರು ವಕೀಲರ ಸಂಘ ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ನ್ಯಾಯಮೂರ್ತಿ ಬಿ.ವೀರಪ್ಪ‌ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬಿ.ವೀರಪ್ಪ ಅವರು ಮುಖ್ಯ ನ್ಯಾಯಮೂರ್ತಿ ಆಗುವಾಗಲೂ ನಾನು ಮುಖ್ಯಮಂತ್ರಿ ಆಗಿದ್ದೆ. ಈಗ ಇವರ ನಿವೃತ್ತಿ‌ ಸಂದರ್ಭದಲ್ಲೂ ನಾನು ಮುಖ್ಯಮಂತ್ರಿ ಆಗಿರುವುದು ಸುಸಂದರ್ಭ.

ನಮಗೆ ಉನ್ನತ ಸ್ಥಾನ ಸಿಕ್ಕಾಗ ಪ್ರಾಮಾಣಿಕವಾಗಿ ಜನಸೇವೆ ಮಾಡಿದರೆ ಆ ಸ್ಥಾನದ ಘನತೆ ಹೆಚ್ಚುತ್ತದೆ. ಸಮಾಜದ ಅರಿವಿದ್ದವರು, ಬದುಕನ್ನು ಅರ್ಥ ಮಾಡಿಕೊಂಡವರು, ಜನರ ಸಂಕಷ್ಟಗಳನ್ನು ಅನುಭವಿಸಿದ್ದವರು, ಆ ಬಗ್ಗೆ ಸಹಾನುಭೂತಿ ಹೊಂದಿದ್ದವರು ಮಾತ್ರ ಸಮಾಜಮುಖಿಯಾಗಿದ್ದು ಉನ್ನತ ಸ್ಥಾನದ ಘನತೆ ಹೆಚ್ಚಿಸಬಲ್ಲರು.

ಬಿ.ವೀರಪ್ಪ ಅವರು ದಕ್ಷತೆ, ಪ್ರಾಮಾಣಿಕತೆ ಜತೆಗೆ ವಕೀಲ ಸಮೂಹದ ಪ್ರೀತಿಯನ್ನೂ ಗಳಿಸಿದ್ದರು ಎನ್ನುವುದಕ್ಕೆ ಇಲ್ಲಿ ಸೇರಿರುವ ಅಪಾರ ವಕೀಲ ಸಮೂಹವೇ ಸಾಕ್ಷಿ.

ದುರ್ಬಲ ವರ್ಗದವರಿಗೆ ಮೇಲಿನ ನ್ಯಾಯಾಲಯಗಳಿಗೆ ಹೋಗಲು ಸಾಧ್ಯವಿಲ್ಲ. ಆದ್ದರಿಂದ ಕೆಳ ಹಂತದಲ್ಲೇ ದುರ್ಬಲ ವರ್ಗಗಳಿಗೆ ನ್ಯಾಯ ಸಿಗುವಂತಾಗಬೇಕು. ಬಿ.ವೀರಪ್ಪ ಅವರು ಈ ದೃಷ್ಟಿಯಲ್ಲಿ ಮೌಲ್ಯಯುತವಾದ ತೀರ್ಪುಗಳನ್ನು ನೀಡಿದ್ದಾರೆ. ಇವು ಕಿರಿಯ ವಕೀಲರಿಗೆ ಮಾದರಿ ಆಗಿವೆ ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...