ಹುಣಸಗಿ| ಪೊಲೀಸರ ದಾಳಿಯಿಂದ ತಪ್ಪಿಸಿಕೊಳ್ಳಲು ಹೋದ ಯುವಕ ಹೃದಯಾಘಾತದಿಂದ ಸಾವು

Date:

Advertisements

ಜೂಜಾಟ ಅಡ್ಡ ಮೇಲೆ ಪೊಲೀಸರ ದಾಳಿ ನಡೆಸಿದ ವೇಳೆ ಅವರಿಂದ ತಪ್ಪಿಸಿಕೊಳ್ಳಲು ಓಡಿ ಹೋದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹುಣಸಿಗಿ ತಾಲೂಕಿನ ವಜ್ಜಲ ಗ್ರಾಮದಲ್ಲಿ ನಡೆದಿದೆ.

ಮಹಾಂತೇಶ ಮಲ್ಲಣ್ಣ ಮಡಿವಾಳರ (35) ಮೃತರು. ಜೂಜಾಟ ಆಡುತ್ತಿದ್ದ ಬಗ್ಗೆ ಹುಣಸಗಿ ಠಾಣೆಯ ಪಿಎಸ್‌ಐ ರಾಹುಲ ಪಾವಡೆ ನೇತ್ರತ್ವದಲ್ಲಿ ಗ್ರಾಮದ ಕೊಂಡಮ್ಮಾಯಿ ದೇವಸ್ಥಾನದ ಬಳಿ ಜೂಜಾಟ ಅಡ್ಡ ಮೇಲೆ ಕಾರ್ಯಾಚರಣೆ ನಡೆಸಿದಾಗ ಅವರಿಂದ ತಪ್ಪಿಸಿಕೊಳ್ಳಲು ಓಡಿ ಹೋದಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ವಿಷಯ ತಿಳಿದು ಮೃತರ ಕುಟುಂಬಸ್ಥರು, ಸಂಬಂಧಿಕರು ಪೊಲೀಸ್‌ ಠಾಣೆಯ ಎದುರು ಕೆಲ ಹೊತ್ತು ಪ್ರತಿಭಟನೆ’ ನಡೆಸಿದರು. ಹುಣಸಗಿ ಸಿಪಿಐ ರವಿಕುಮಾರ ಮನವರಿಕೆ ಮಾಡಿದರೂ ಕುಟುಂಬಸ್ಥರು ಪ್ರತಿಭಟನೆ ಕೈಬಿಡಲಿಲ್ಲ. ಬಳಿಕ ಸ್ಥಳಕ್ಕೆ ಡಿವೈಎಸ್‌ಪಿ ಜಾವೇದ್ ಇನಾಮದಾರ ಆಗಮಿಸಿ ತಿಳಿ ಹೇಳಿದ ಬಳಿಕ ಪ್ರತಿಭಟನೆ ಕೈ ಬಿಡಬಿಟ್ಟರು.

ಇದನ್ನೂ ಓದಿ : ಬೀದರ್‌ | ʼಕೈಗೆ ಬಂದ ತುತ್ತುʼ ಕಸಿದ ಅತಿವೃಷ್ಟಿ : ಬೆಳೆ ಪರಿಹಾರದ ನಿರೀಕ್ಷೆಯಲ್ಲಿ ರೈತರು!

ಮೃತನ ಪತ್ನಿ ವಿಜಯಲಕ್ಷ್ಮಿ ನೀಡಿದ ದೂರಿನಂತೆ ಹುಣಸಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐದು ಜನ ಬಂಧಿತ ಆರೋಪಿಗಳಿಂದ 77,210 ನಗದು ಹಣ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X