ಹುಣಸೂರು | ತಂಬಾಕು ಬೆಳೆಗಾರರ ಸಭೆ; ಉತ್ತಮ ಬೆಲೆಗೆ ಆಗ್ರಹ

Date:

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು ಕಟ್ಟೆಮಳಲವಾಡಿ ಮಾರುಕಟ್ಟೆಯಲ್ಲಿ ತಂಬಾಕು ಬೆಳೆಗಾರರ ಸಭೆ ನಡೆದು, ಉತ್ತಮ ಬೆಲೆ ನೀಡುವಂತೆ, ಸಂಬಂಧಪಟ್ಟವರ ಭೇಟಿಗೆ ನಿಯೋಗದ ಅನುವ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಆಗ್ರಹಿಸಿದ್ದಾರೆ.

- Advertisement -

ಕಳೆದ ತಿಂಗಳು ಪಿರಿಯಾಪಟ್ಟಣದ ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆಯಲ್ಲಿ, ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ, ಕರ್ನಾಟಕದ ತಂಬಾಕಿಗೆ ಉತ್ತಮವಾದ ಬೆಲೆ ಸಿಗದ ಕಾರಣ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲು ಮೈಸೂರು ಮತ್ತು ಕೊಡಗು ಜಿಲ್ಲೆಯ ಸಂಸತ್ ಸದಸ್ಯ ಯದುವೀರ್ ಕೃಷ್ಣರಾಜ ಒಡೆಯರ್, ತಂಬಾಕು ಮಂಡಳಿಯ ನಿರ್ದೇಶಕ ಶ್ರೀನಿವಾಸ್, ಮಂಡಳಿಯ ಅಧಿಕಾರಿಗಳು ಹಾಗೂ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಸೇರಿದಂತೆ ಎಲ್ಲಾ ಪ್ಲಾಟ್ ಫಾರಂನ ರೈತ ಮುಖಂಡರುಗಳು ಭಾಗವಹಿಸಿ ಚರ್ಚಿಸಿ, ಮುಂದಿನ ದಿನಗಳಲ್ಲಿ ಉತ್ತಮ ಬೆಲೆ ಕೊಡುವುದಾಗಿ ಭರವಸೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಆದರೆ, ಇದುವರೆಗೆ ಉತ್ತಮ ಬೆಲೆ ಸಿಗದ ಕಾರಣ ಎಲ್ಲಾ ಪ್ಲಾಟ್ ಫಾರಂನ ಮುಖಂಡರುಗಳು ಹಾಗೂ ನೂತನ ಕ್ರಾಪ್ ಸದಸ್ಯರುಗಳು ಸೇರಿ ಚರ್ಚಿಸಿ ತಂಬಾಕಿಗೆ, ಉತ್ತಮ ಬೆಲೆ ಸಿಗಲು ಹೋರಾಟವನ್ನು ರೂಪಿಸಲು ನಿರ್ಣಯ ಕೈಗೊಳ್ಳಲಾಯಿತು. ಈ ನಿರ್ಣಯ ಪತ್ರವನ್ನು ಮೈಸೂರು ಪ್ರಾದೇಶಿಕ ವ್ಯವಸ್ಥಾಪಕ ವೇಣುಗೋಪಾಲ್ ಅವರ ಮೂಲಕ ನಿರ್ದೇಶಕರಿಗೆ ಹಾಗೂ ಇಡಿ ಅವರಿಗೆ ರವಾನಿಸುವಂತೆ ಮನವಿ ಪತ್ರ ಸಲ್ಲಿಸಿದರು.

ದಿನಾಂಕ-25-12-2025ರ ಒಳಗಾಗಿ ತಂಬಾಕಿಗೆ ಉತ್ತಮವಾದ ಬೆಲೆ ಸಿಗದಿದ್ದರೆ, ಅಂದು ಎಲ್ಲಾ ತಂಬಾಕು ಹರಾಜು ಮಾರುಕಟ್ಟೆ ಬಂದ್ ಮಾಡಬೇಕೆಂದು ತಾಕಿತು ಮಾಡಿದರು. ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟ ಸಂಸದರು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಉತ್ತಮ ಬೆಲೆ ಕೊಡಿಸಲು ಒತ್ತಡ ಹೇರಿ, ಕರ್ನಾಟಕ ತಂಬಾಕು ಬೆಳೆಗಾರರಿಗೆ ಉತ್ತಮ ಬೆಲೆ ಕೊಡಿಸಲು ಮುಂದಾಗಬೇಕೆಂದು ಸಭೆಯಲ್ಲಿ ನಿರ್ಣಯಿಸಿದರು. ಒಂದು ವೇಳೆ ಸಮಯಕ್ಕೆ ಸ್ಪಂದನೆ ಸಿಗದೆ ಹೋದಲ್ಲಿ, ತಂಬಾಕು ಬೆಳೆಗಾರರ ದಿನಾಂಕ-26-12-2025ರಂದು ಸಂಸದರ ಕಚೇರಿಗಳ ಮುಂದೆ ನ್ಯಾಯಕ್ಕಾಗಿ ಹೋರಾಟ ರೂಪಿಸುವುದಾಗಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಪತ್ರ ಬರಹಗಾರರ ಪ್ರತಿಭಟನೆ; ಪ್ರತ್ಯೇಕ ಲಾಗಿನ್ ನೀಡಿ ಸಮಸ್ಯೆ ಪರಿಹರಿಸಿ

ಸಭೆಯಲ್ಲಿ ಜಿಲ್ಲಾಧ್ಯಕ್ಷ ಹೊಸೂರ್ ಕುಮಾರ್, ಉಪಾಧ್ಯಕ್ಷ ಪ್ರಕಾಶ್ ರಾಜೇ ಅರಸ್, ಮೊತ್ತ ಬಸವರಾಜು, ಮೊದೂರು ಶಿವಣ್ಣ, ಉಂಡವಾಡಿ ಚಂದ್ರೇಗೌಡ, ಕಟ್ಟೆ ಮಳಲವಾಡಿ ಅಶೋಕ, ಶ್ರೀಧರ, ತಾಲ್ಲೂಕು ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ, ಮಹಾದೇವು, ಅಗ್ರಹಾರ ರಾಮೇಗೌಡ, ಸತೀಶ್, ಅತ್ತಿಕುಪ್ಪೆ ರಾಮಕೃಷ್ಣ, ಶಿರೂರು ಬಸವರಾಜೇಗೌಡ, ಪಿರಿಯಾಪಟ್ಟಣ ಚೆಲುವಯ್ಯ, ಬೀಜಗನಹಳ್ಳಿ ನಾಗರಾಜಪ್ಪ, ನಿಲುವಾಗಿಲು ಪ್ರಭಾಕರ್, ಸೋಮಶೇಖರ್, ಮಹೇಂದ್ರ, ನಿಂಗೇಗೌಡ, ಕರುಣಾಕರ ಸೇರಿದಂತೆ ಇನ್ನಿತರ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...