ಮಂಡ್ಯ | ಅನುಮಾನಾಸ್ಪದವಾಗಿ ಪತ್ನಿ ಸಾವಿನ ಬಳಿಕ ಪತಿಯೂ ಆತ್ಮಹತ್ಯೆ; ಅನಾಥವಾದ ಪುಟ್ಟ ಮಗು!

Date:

Advertisements

ಪತ್ನಿಯ ಆತ್ಮಹತ್ಯೆ ಹಾಗೂ ಆಕೆಯ ಅನುಮಾನಾಸ್ಪದ ಸಾವಿನ ಪರಿಸ್ಥಿತಿಯನ್ನು ಎದುರಿಸಲಾಗದೆ ಪತಿಯೂ ಸಾವಿಗೆ ಶರಣಾದ ಘಟನೆ ಮಂಡ್ಯ ಜಿಲ್ಲೆಯ ಕೆ‌.ಆರ್.ಪೇಟೆ ತಾಲೂಕಿನ ಗದ್ದೆ ಹೊಸೂರು ಗ್ರಾಮದಲ್ಲಿ ನಡೆದಿದೆ.

ಸ್ವಾತಿ (21) ಎಂಬ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಗದ್ದೆ ಹೊಸೂರು ಗ್ರಾಮದ ಮೋಹನ್ (26) ಪತ್ನಿಯ ಸಾವಿಗೆ ಹೆದರಿ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮೋಹನ್ ತನ್ನ ಪತ್ನಿಯ ಸಾವಿನಿಂದಾಗಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ವಾತಿ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಖಚಿತವಾಗಿಲ್ಲ. ಇದು ಪತಿಯ ಮನೆಯವರೇ ಮಾಡಿದ ಕೊಲೆ ಎಂದು ಸ್ವಾತಿ ಪೋಷಕರು ಆರೋಪಿಸಿದ್ದಾರೆ.

Advertisements
ಮಂಡ್ಯ 16

ಸ್ವಾತಿ ಮಂಗಳವಾರ ರಾತ್ರಿ ಮೋಹನ್ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆಯ ನಂತರ ಪತಿ ಮೋಹನ್ ಮತ್ತು ಆತನ ಪೋಷಕರು ಮನೆಯಿಂದ ಪರಾರಿಯಾಗಿದ್ದಾರೆ. ಪತಿ ಮತ್ತು ಆತನ ಕುಟುಂಬದವರು ಸೇರಿ ಕೊಲೆ ಮಾಡಿದ್ದಾರೆ ಎಂದು ಮೃತ ಗೃಹಿಣಿಯ ಪೋಷಕರು ಆರೋಪಿಸಿದ್ದು, ರಾತ್ರಿ ವೇಳೆ ಗೃಹಿಣಿ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ.

ಬುಧವಾರ ಬೆಳಗ್ಗೆ ಗ್ರಾಮದ ಕೆರೆಯಲ್ಲಿ ಗಂಡ ಮೋಹನ್ ಶವ ಪತ್ತೆಯಾಗಿದೆ. ಕಿಕ್ಕೇರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಅನಾಥವಾದ ಒಂದೂವರೆ ವರ್ಷದ ಮಗು!

ಇನ್ನು ಮೋಹನ್- ಸ್ವಾತಿ ದಂಪತಿಗೆ ಒಂದೂವರೆ ವರ್ಷದ ಮಗು ಇದ್ದು, ತಂದೆ-ತಾಯಿ ದಾರುಣ ಅಂತ್ಯದಿಂದ ಮಗು ಅನಾಥವಾಗಿದೆ.

ಇದನ್ನು ಓದಿದ್ದೀರಾ? ಚಿಂತಾಮಣಿ | ನಿರ್ಮಾಣ ಹಂತದ ಗೋಡೆ ಕುಸಿತ; ದಂಪತಿಯ ಸ್ಥಿತಿ ಗಂಭೀರ

ಕೆರೆಯಲ್ಲಿದ್ದ ಮೋಹನ್ ಮೃತದೇಹವನ್ನು ಪೊಲೀಸರು ಗ್ರಾಮಸ್ಥರ ಸಹಾಯದೊಂದಿಗೆ ಹೊರತೆಗೆದು ಮರಣೋತ್ತರ ಪರೀಕ್ಷೆಗೆ‌ ರವಾನಿಸಿದರು. ಮಂಡ್ಯ ಜಿಲ್ಲೆಯ ಕೆ‌.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X