ದಾವಣಗೆರೆ | ನಾನು ‌ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧ, ಅವರೂ ಸ್ವತಂತ್ರವಾಗಿ ಸ್ಪರ್ಧಿಸಲಿ: ಸಂಸದ ಸಿದ್ದೇಶ್ವರ್‌ಗೆ ಮಲ್ಲಿಕಾರ್ಜುನ್ ಸವಾಲು

Date:

Advertisements

ಬಿಜೆಪಿ ಸಂಸದ‌‌ ಜಿ.ಎಂ ಸಿದ್ದೇಶ್ವರ ಅವರು ಮೋದಿ ಫೋಟೋ ಇಟ್ಟುಕೊಂಡು ಚುನಾವಣೆಯಲ್ಲಿ ಗೆಲ್ಲುತ್ತಿದ್ದಾರೆ. ಅವರು ವೈಯಕ್ತಿಕ ವರ್ಚಸ್ಸಿನಿಂದ ಚುನಾವಣೆಯಲ್ಲಿ ಸ್ಪರ್ಧಿಸಲು. ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ದನಿದ್ದೇನೆ. ಅವರೂ ಪಕ್ಷ ಬಿಟ್ಟು ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಸವಾಲು ಹಾಕಿದ್ದಾರೆ.

ತಮ್ಮ ವಿರುದ್ಧದ ಸಂಸದರ ಟೀಕೆಗೆ ಉತ್ತರ ನೀಡಿದ ಅವರು, “ನಾನು ಕಾಂಗ್ರೆಸ್ ಕಟ್ಟಾಭಿಮಾನಿ. ನಮ್ಮ ಇಡೀ ಕುಟುಂಬ ಕಾಂಗ್ರೆಸ್ ಬೆಂಬಲಿಸುತ್ತದೆ. ಯಾವುದೇ ಪಕ್ಷದ ಬೆಂಬಲ ಇಲ್ಲದೆ, ವೈಯಕ್ತಿಕವಾಗಿ ನಾನು ಲೋಕಸಭೆಗೆ ಸ್ಪರ್ಧಿಸುತ್ತೇನೆ. ನನಗೆ ಯಾರ ಆಶೀರ್ವಾದವೂ ಬೇಡ, ಜನರ ಆಶೀರ್ವಾದವೊಂದು ಇದ್ರೆ ಸಾಕು. ಅವರು ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧರಿದ್ದಾರಾ” ಎಂದು ಪ್ರಶ್ನಿಸಿದ್ದಾರೆ.

“ನಾನು ಸಿದ್ದೇಶ್ವರ ಅವರಿಂದ ಸಂಸ್ಕಾರ ಕಲಿಯಬೇಕಿಲ್ಲ. ನಮ್ಮ ಅಪ್ಪ, ಅಜ್ಜ ಹಾಗೂ ಅ‌ವ್ವ ನಮ್ಮವ್ವ ಸಂಸ್ಕಾರ ಕಲಿಸಿದ್ದಾರೆ. ಬೇಕಾದರೆ ನಾನೇ ಕಲಿಸಿಕೊಡುವೆ. ನಾನು, ನಮ್ಮ ಅಪ್ಪ ಈವರೆಗೆ ಬಡ್ಡಿ ವ್ಯವಹಾರ ಮಾಡಿಲ್ಲ. ಅವರ ಕುಟುಂಬದ ಜೊತೆ ಕೈಗಡ ವ್ಯವಹಾರವಿತ್ತು ಅಷ್ಟೇ. ಅವರು ಒಂದಕ್ಕೆ ನಾಲ್ಕು ರೂಪಾಯಿ ಬಡ್ಡಿ ವಸೂಲಿ ಮಾಡಿ ಊರು ಹಾಳುಮಾಡಿದ್ದಾರೆ‌” ಎಂದು ವಾಗ್ದಾಳಿ ನಡೆಸಿದರು.

Advertisements

“ಹಳೇ ದಾವಣಗೆರೆಯಲ್ಲಿ ಉದ್ಯಾನವನ್ನು ನೋಂದಣಿ ಮಾಡಿಕೊಟ್ಟಿರುವ ಪ್ರಕರಣ ಹೊರಬಂದಿದೆ. ಪಾಲಿಕೆ ಸದಸ್ಯರೊಬ್ಬರ ಅಕ್ಕ ಮತ್ತು ಅಪ್ಪ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. 2021ರಲ್ಲಿ ಉದ್ಯಾನದ ಜಾಗವನ್ನು ಖಾತೆ ಮಾಡಿ 2022ರಲ್ಲಿ ನೋಂದಣಿ ಮಾಡಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಸಬ್ ರಿಜಿಸ್ಟರ್ ಮೇಲೆ ಕ್ರಮ ಕೈಗೊಳ್ಳಲಾಗುವುದು.‌ ಇದಕ್ಕೆ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಕಾರಣ‌. ಗಣಿಗಾರಿಕೆಯಲ್ಲಿ ನಾವು ಏನು ಮಾಡಿಲ್ಲ ಎಂದು ಹೇಳುವ ಅವರ ಮೇಲೆ 220 ಕೋಟಿ ಅಕ್ರಮ ದಾಖಲೆ ಇದೆ. ಬೇಕಾದರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಚರ್ಚೆಗೆ ಬರಲಿ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X