ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಮತ್ತು ಯುವ ಘಟಕದ ಅಧ್ಯಕ್ಷರಾಗಿ ನಿಖಿಲ್ ಕುಮಾರಸ್ವಾಮಿ ಅವರೇ ಮುಂದುವರಿಯಲಿದ್ದಾರೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಘೋಷಿಸಿದರು.
ಶುಕ್ರವಾರ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, “ಸೋಲಿನ ನೈತಿಕ ಹೊಣೆಹೊತ್ತು ಇಬ್ಬರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಆದರೆ, ಅವರ ರಾಜೀನಾಮೆಯನ್ನು ಪಕ್ಷ ಅಂಗೀಕರಿಸಿಲ್ಲ. ಅವರೇ ತಮ್ಮ ಸ್ಥಾನಗಳಲ್ಲಿ ಮುಂದುವರಿಯಲಿದ್ದಾರೆ” ಎಂದು ಸ್ಪಷ್ಟಪಡಿಸಿದರು.
ನೀವೇನಾದರೂ ಜೆಡಿಎಸ್ ಒಂದು ರಾಜಕೀಯ ಪಕ್ಷ ಅಂತ ತಿಳಿದುಕೊಂಡಿದ್ದರೆ ಅದು ಖಂಡಿತಾ ತಪ್ಪು. ಅದೊಂದು ಡ್ರಾಮಾ ಕಂಪನಿ.