ಇದ್ರೀಸ್‌ ಕುಟುಂಬಕ್ಕೆ ₹25 ಲಕ್ಷ ಪರಿಹಾರ: ಸಿಎಂ ವಿರುದ್ಧ ಪುನೀತ್‌ ಕೆರೆಹಳ್ಳಿ ವಾಗ್ದಾಳಿ, ವಿಡಿಯೋ ವೈರಲ್

Date:

Advertisements

ಇದ್ರೀಸ್‌ ಪಾಷಾ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರವನ್ನು ಸರಕಾರದಿಂದ ನೀಡಿರುವುದಕ್ಕೆ, ಇದ್ರೀಸ್‌ ಪಾಷಾ ಹತ್ಯೆಯ ಪ್ರಮುಖ ಆರೋಪಿ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಾಲಿಗೆ ಹರಿಯಬಿಟ್ಟಿರುವ ವಿಡಿಯೋ ವೈರಲ್ ಆಗಿದೆ.

ಆರು ನಿಮಿಷ ಮಾತನಾಡಿರುವ ವಿಡಿಯೋವನ್ನು ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿರುವ ಆರೋಪಿ ಪುನೀತ್‌ ಕೆರೆಹಳ್ಳಿ “ನಮ್ಮ ತೆರಿಗೆ ಹಣವನ್ನು ಯಾವ ಆಧಾರದಲ್ಲಿ, ಯಾವ ಕಾರಣಕ್ಕೆ ಇದ್ರೀಸ್‌ ಕುಟುಂಬಕ್ಕೆ ಕೊಟ್ರಿ? ನ್ಯಾಯಾಲಯ ಕೊಲೆ ಎಂದು ತೀರ್ಮಾನಿಸುವ ಮುನ್ನ ನೀವೇಕೆ 25 ಲಕ್ಷ ಕೊಟ್ರಿ? ನೀವು ಪ್ರಚೋದನೆ ಮಾಡುತ್ತಿದ್ದೀರಾ?” ಎಂದು ಸಿಎಂಗೆ ಪ್ರಶ್ನಿಸಿದ್ದಾನೆ.

“ಅಕ್ರಮವಾಗಿ 17 ಜಾನುವಾರು ಸಾಗಾಟ ಮಾಡಿದ್ದು ಅಕ್ರಮ ಅಲ್ವ? ಸಿದ್ದರಾಮಯ್ಯನವರೇ ರಾಜ್ಯದ ಮುಖ್ಯಮಂತ್ರಿಯಾಗಿ ಏನು ಮಾಡ್ತಿದ್ದೀರಾ? ಯಾಕೆ ಗೋರಕ್ಷಕರ ಹೊಟ್ಟೆ ಉರಿಸ್ತಿದ್ದೀರಾ? ಯಾಕೆ ಹಿಂದುಗಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದೀರಿ? ಯಾವ ಅಧಿಕಾರ ಇದೆ ಎಂದು ನಮ್ಮ‌ ಮೇಲೆ ನೀವು ಈ ರೀತಿ‌ ಮಾಡ್ತಿದ್ದೀರಾ?” ಎಂದು ಕಿಡಿಕಾರಿದ್ದಾರೆ.

Advertisements

“ನಮ್ಮನ್ನು ಜೈಲಿಗೆ ಹಾಕಿದ್ದೀರಾ, ನಾಳೆ ನಿರಪರಾಧಿ ಎಂದು ಸಾಬೀತಾದರೆ 25 ಲಕ್ಷ ರೂಪಾಯಿ ನಮಗೆ ಕೊಡ್ತೀರಾ? ಯಾವ ಆಧಾರದಲ್ಲಿ ಅವರಿಗೆ ಹಣ ಕೊಟ್ರಿ? ಯಾರ ಅಪ್ಪನ ಮನೆಯಿಂದ ಹಣ ಕೊಟ್ರಿ? ರಾಜ್ಯದ ಮುಖ್ಯಮಂತ್ರಿಯಾಗಿ ನೀವು ಗೋ ಹತ್ಯೆಗೆ ಪ್ರಚೋದನೆ ಕೊಡ್ತಿದ್ದೀರಾ?” ಎಂದು ವಾಗ್ದಾಳಿ ನಡೆಸಿದ್ದಾನೆ.

“ಕಾನೂನು ಮೀರಿದವರಿಗೆ ಹಣ ಕೊಡ್ತಿದ್ದೀರಿ, ನಿಮಗೆ ಗೋಮಾತೆ ಕ್ಷಮಿಸುವುದಿಲ್ಲ, ಗೋ ಮಾತೆ ನಿಮಗೆ ಶಿಕ್ಷೆ ಕೊಡ್ತಾಳೆ” ಎನ್ನವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಗೃಹಜ್ಯೋತಿ ಯೋಜನೆ; ರಾತ್ರಿ ವೇಳೆ ಸರ್ವರ್ ಸಕ್ರಿಯ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X