ಭ್ರಷ್ಟಾಚಾರ ಸಾಬೀತು ಮಾಡಿದರೆ ನನ್ನ ಆಸ್ತಿಯನ್ನೇ ಅವರಿಗೆ ಕೊಡುತ್ತೇನೆ: ಸಚಿವರಿಗೆ ಸಂಸದ ಸಿದ್ದೇಶ್ವರ ಸವಾಲು

Date:

Advertisements

ನಮ್ಮ ಕುಟುಂಬದಲ್ಲಿ ಯಾರೂ ಭ್ರಷ್ಟಾಚಾರ ಮಾಡಿಲ್ಲ, ಲಂಚ ಪಡೆದಿಲ್ಲ. ನಾನೂ ಯಾರಿಂದಲೂ ಲಂಚ ತೆಗೆದುಕೊಂಡಿಲ್ಲ. ನಾನು ಭ್ರಷ್ಟಾಚಾರ ಮಾಡಿದ್ದೇನೆಂದು ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ ಸಾಬೀತು ಮಾಡಿದರೆ, ನನ್ನ ಇಡೀ ಆಸ್ತಿಯನ್ನು ಅವರಿಗೆ ಬರೆದು ಕೊಡುತ್ತೇನೆ ಎಂದು ದಾವಣಗೆರೆಯ ಬಿಜೆಪಿ ಸಂಸದ ಜಿ.ಎಂ ಸಿದ್ದೇಶ್ವರ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, “ನಮ್ಮ ಆಸ್ತಿ ಬಗ್ಗೆ ಸಚಿವ ಮಲ್ಲಿಕಾರ್ಜುನ ಮಾತನಾಡಿದ್ದಾರೆ. ನಾವೇನು ಕಳ್ಳತನ ಮಾಡಿ, ಭ್ರಷ್ಟಾಚಾರ ಮಾಡಿ ಆಸ್ತಿ ಸಂಪಾದಿಸಿಲ್ಲ. ನಮ್ಮ ಮನೆಯಲ್ಲಿ ಆರು ಮಂದಿ ದುಡಿಯುತ್ತೇವೆ. 1993ಕ್ಕೂ ಇಂದಿಗೂ ನಮ್ಮ ಆಸ್ತಿ ಹೆಚ್ಚಳವಾಗಿದೆ. ನಮ್ಮ ಅಪ್ಪನ ಕಾಲದಿಂದಲೂ ನಾವು ಶ್ರೀಮಂತರು. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೂ ನಾವು ಸಾಲ ಕೊಟ್ಟಿದ್ದೆವು” ಎಂದು ಹೇಳಿದ್ದಾರೆ.

“1997ರಲ್ಲಿಯೇ ನಮ್ಮ ಆದಾಯ 6 ಕೋಟಿ ರೂ. ಇದೆಯೆಂದು ಘೋಷಿಸಿದ್ದೆ. ಆ ವರ್ಷ 1.85 ಕೋಟಿ ರೂ. ತೆರಿಗೆ ಕಟ್ಟಿದ್ದೆ. ನಾನು ಅಕ್ರಮ ನಡೆಸಿದ್ದೇನೆ ಎನ್ನುವವರು ತನಿಖೆ ನಡೆಸಲು, ನನ್ನದೇನೂ ಅಭ್ಯಂತರವಿಲ್ಲ. ಬಿಜೆಪಿ ಸರ್ಕಾರದಲ್ಲಿ ಮಾತ್ರವಲ್ಲ, ಮಲ್ಲಿಕಾರ್ಜುನ ಅವರು ಸಚಿವರಾಗಿದ್ದ ಅವಧಿಯಿಂದ ಈಚೆಗೆ ನಡೆದಿರುವ ಕಾಮಗಾರಿಗಳ ಬಗ್ಗೆಯೂ ತನಿಖೆಯಾಗಲಿ. ನಾನು ಭ್ರಷ್ಟಾಚಾರ ಮಾಡಿದ್ದೇನೆಂದು ಸಾಬೀತು ಮಾಡಿದರೆ, ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಹೇಳಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X