ಕಾನೂನು ಬಾಹಿರವಾಗಿ ವೈದ್ಯಕೀಯ ಸೀಟು ಹಂಚಿಕೆ; ಕೆಇಎಗೆ 5 ಲಕ್ಷ ರೂ. ದಂಡ

Date:

Advertisements

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಕರ್ನಾಟಕ ಹೈಕೋರ್ಟ್ 5 ಲಕ್ಷ ರೂ.ಗಳ ದಂಡ ವಿಧಿಸಿದೆ. ರೇಡಿಯೋ ಡಯಾಗ್ನೋಸಿಸ್ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗೆ ಅಕ್ರಮವಾಗಿ ಸೀಟು ಕಾಯ್ದಿರಿಸುವುದು ಮತ್ತು ಕಾನೂನು ಬಾಹಿರವಾಗಿ ಡಾ.ಸುನೀಲ್​ ಕುಮಾರ್​ ಎಂಬುವರಿಗೆ ಸೀಟು ಹಂಚಿಕೆ ಮಾಡಿದ್ದ ಪ್ರಕರಣದಲ್ಲಿ ದಂಡ ವಿಧಿಸಲಾಗಿದೆ.

ಕೆಇಎ ಸೀಟು ಹಂಚಿಕೆಯಲ್ಲಿ ಅಕ್ರಮ ಎಸಗಿದೆ ಎಂದು ಆರೋಪಿಸಿ ಹಾಸನ ಜಿಲ್ಲೆಯ ಡಾ. ಸಿ.ಕೆ ರಜನಿ ಎಂಬವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್‌ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಮತ್ತು ಟಿ.ಜಿ ಶಿವಶಂಕರೇಗೌಡ ಅವರಿದ್ದ ನ್ಯಾಯ ಪೀಠ ಅರ್ಜಿಯ ವಿಚಾರಣೆ ನಡೆಸಿದೆ. ಕೆಇಎ ಅಕ್ರಮ ಸಾಬೀತಾಗಿದ್ದು, ಕೆಇಎಗೆ ದಂಡ ವಿಧಿಸಿದೆ.

2023ರ ಸೆಪ್ಟೆಂಬರ್ 19ರಂದು ಕೌನ್ಸಿಲಿಂಗ್‌ನಿಂದ ಹಿಂದೆ ಸರಿಯಲು ಸುನೀಲ್‌ ಕುಮಾರ್‌ಗೆ ಅನುಮತಿ ನೀಡಿದ್ದ ಕೆಇಎ 2023ರ ಅಕ್ಟೋಬರ್ 6ರವರೆಗೂ ಸೀಟು ಲಭ್ಯವಿದೆ ಎಂದು ಹೇಳಿಕೊಂಡಿತ್ತು. ಅದೇ ದಿನ ಸುನೀಲ್‌ ಕುಮಾರ್‌ಗೆ ಸೀಟು ಹಂಚಿಕೆಯನ್ನೂ ಮಾಡಿತ್ತು. ಇದು, ಸುನೀಲ್ ಅವರಿಗೆ ಅಕ್ರಮವಾಗಿ ಸೀಟು ಹಂಚಿಕೆ ಮಾಡಿರುವುದನ್ನು ಸೂಚಿಸುತ್ತದೆ ಎಂದು ಅರ್ಜಿದಾರರು ವಾದಿಸಿದ್ದರು.

Advertisements

“ರೇಡಿಯೋ ಡಯಾಗ್ನೋಸಿಸ್​ನಲ್ಲಿ ಸೀಟು ಲಭ್ಯವಿಲ್ಲವೆಂದು ತೋರಿಸಿ, ಅರ್ಜಿದಾರರಿಗೆ ಇಷ್ಟವಿಲ್ಲದೇ ಇದ್ದರೂ, ಒತ್ತಾಯವಾಗಿ ಸ್ತ್ರೀರೋಗಶಾಸ್ತ್ರದಲ್ಲಿ ಸೀಟು ಆಯ್ಕೆ ಮಾಡಿಕೊಳ್ಳುವಂತೆ ಮಾಡಲಾಗಿದೆ” ಎಂಬುದನ್ನು ಪೀಠವು ಗಮನಿಸಿದೆ.

“ಅರ್ಜಿದಾರ ಡಾ. ಸಿ.ಕೆ ರಜನಿ ಅವರಿಗೆ ರೇಡಿಯೋ ಡಯಾಗ್ನೋಸಿಸ್ ಸೀಟನ್ನು ಮರು ಹಂಚಿಕೆ ಮಾಡಬೇಕು. ವೈದ್ಯಕೀಯ ಸ್ನಾತಕೋತ್ತರ ವಿಭಾಗದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರಕ್ಕೆ ಅರ್ಜಿದಾರರು ಪಾವತಿಸಿದ್ದ ಶುಲ್ಕವನ್ನು ಎಂ.ಆರ್ ವೈದ್ಯಕೀಯ ಕಾಲೇಜಿನ ರೇಡಿಯೋ ಡಯಾಗ್ನೋಸಿಸ್ ಸೀಟಿಗೆ ಸರಿಹೊಂದಿಸಬೇಕು. ಅಲ್ಲದೆ, ದಂಡದ ಮೊತ್ತದಲ್ಲಿ 2.5 ಲಕ್ಷ ರೂಪಾಯಿಯನ್ನು ರಜನಿ ಅವರಿಗೆ ನೀಡಬೇಕು. ಉಳಿದ ಹಣವನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಹೆಸರಿನಲ್ಲಿ ಠೇವಣಿ ಇಡಬೇಕು” ಎಂದು ಕೋರ್ಟ್‌ ನಿರ್ದೇಶನ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

Download Eedina App Android / iOS

X