ಚಿಕ್ಕಬಳ್ಳಾಪುರ | ಅಕ್ರಮ ಟೋಲ್‌ ವಸೂಲಿಗೆ ಬೇಸತ್ತ ಜನ, ಇಶಾ ಫೌಂಡೇಶನ್‌ ವಿರುದ್ಧ ಪ್ರತಿಭಟನೆ

Date:

ಇಶಾ ಫೌಂಡೇಶನ್‌ನಿಂದ ಸರಕಾರಿ ಜಮೀನು ಒತ್ತುವರಿ ಮಾಡಲಾಗಿದೆ, ಸರಕಾರಿ ಜಾಗಕ್ಕೆ ಅಕ್ರಮವಾಗಿ ಟೋಲ್‌ ವಸೂಲಿ ಮಾಡಲಾಗುತ್ತಿದೆ, ಇಶಾಗೆ ಬರುವ ಪ್ರವಾಸಿಗರಿಂದ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಶನಿವಾರ ಆವಲಗುರ್ಕಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರು. ‌

- Advertisement -

ಶನಿವಾರ ಬೆಳಗ್ಗೆ ಇಶಾ ಫೌಂಡೇಶನ್‌ ಬಳಿ ಜಮಾಯಿಸಿದ 500ಕ್ಕೂ ಅಧಿಕ ಮಂದಿ ರೈತ ಸಂಘ ಮತ್ತು ದಲಿತ ಮುಖಂಡರು ಸ್ಥಳೀಯ ರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಇಶಾ ಫೌಂಡೇಶನ್‌ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಈ ವೇಳೆ ಮಾತನಾಡಿದ ಸ್ಥಳೀಯ ಮುಖಂಡರು, ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಬಳಿ ಇಶಾ ಫೌಂಡೇಶನ್‌ ಸಂಸ್ಥೆಯಿಂದ ಸರಕಾರಿ ಭೂಮಿ ಒತ್ತುವರಿ ಮಾಡಲಾಗಿದೆ. ಸರ್ವೆ ನಂಬರ್‌ 174, 175 ಮತ್ತು 137ರಲ್ಲಿ ಸಾಕಷ್ಟು ಭೂಮಿಯನ್ನು ಒತ್ತುವರಿ ಮಾಡಿ ರಸ್ತೆ ನಿರ್ಮಿಸಲಾಗಿದೆ. ಅಲ್ಲದೆ ಟೋಲ್‌ ನಿರ್ಮಿಸಿ ಇಲ್ಲಿಗೆ ಬರುವ ವಾಹನಗಳಿಂದ ಟೋಲ್‌ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ : ಇಶಾ ಫೌಂಡೇಶನ್ ಅಕ್ರಮಗಳ ತನಿಖೆಗೆ ಹೈಕೋರ್ಟ್‌ ಆದೇಶ

ಒತ್ತುವರಿ ಮಾಡಿರುವ ಸರಕಾರಿ ಭೂಮಿಯನ್ನು ವಶಕ್ಕೆ ಪಡೆಯಬೇಕು. ಸರಕಾರಿ ಜಾಗಕ್ಕೆ ಟೋಲ್ ವಸೂಲಿ ಮಾಡುವುದನ್ನು ಕೂಡಲೇ ನಿಲ್ಲಿಸಬೇಕು. ರಾತ್ರಿ ವೇಳೆ ಇಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಂದ ಸ್ಥಳೀಯ ರೈತರು ಬೇಸತ್ತು ಹೋಗಿದ್ದು, ಎಲ್ಲಾ ಅಕ್ರಮಗಳಿಗೂ ಶೀಘ್ರ ಬ್ರೇಕ್‌ ಹಾಕಬೇಕು ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ಚಿಕ್ಕಬಳ್ಳಾಪುರ ತಹಶೀಲ್ದಾರ್‌ ಅನಿಲ್, ಅರಣ್ಯ ಭೂಮಿ ಒತ್ತುವರಿಯನ್ನು ತೆರವುಗೊಳಿಸುವಂತೆ ಇಶಾ ಫೌಂಡೇಶನ್‌ ಅವರಿಗೆ ನೋಟೀಸ್‌ ನೀಡಲಾಗಿದೆ. ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...