ಬೆಂಗಳೂರು | ಐಎಂಎ ಬಹುಕೋಟಿ ಹಗರಣ: ಅಂತೂ ಸಂತ್ರಸ್ತ ಗ್ರಾಹಕರ ಕೈಸೇರಿದ ಹಣ

Date:

Advertisements

ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಐಎಂಎ ಬಹುಕೋಟಿ ಹಗರಣ ಪ್ರಕರಣದಲ್ಲಿ ಹಣ ಕಳೆದುಕೊಂಡಿದ್ದ ಸಂತ್ರಸ್ತ ಗ್ರಾಹಕರಿಗೆ ಅಂತೂ ಹಣ ಕೈಸೇರಿದೆ. ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿಖಾನ್ ಒಡೆತನದ ಆಸ್ತಿಗಳನ್ನು 2023ರ ಫೆಬ್ರವರಿಯಲ್ಲಿ ‘ಕಾಂಪಿಟೆಂಟ್ ಅಥಾರಿಟಿ’ ಇ-ಹರಾಜು ಪ್ರಕ್ರಿಯೆ ನಡೆಸಿತ್ತು. ಅದರಿಂದ ಬಂದ ಹಣವನ್ನು ಸಂತ್ರಸ್ತ ಗ್ರಾಹಕರ ಖಾತೆಗೆ ಹಂತ-ಹಂತವಾಗಿ ಜಮೆ ಮಾಡುತ್ತಿದೆ.

ಮನ್ಸೂರ್ ಅಲಿಖಾನ್ ಒಡೆತನದ ಐಎಂಎ ಜುವೆಲ್ಲರಿಯಲ್ಲಿದ್ದ ವಜ್ರ, ಚಿನ್ನ, ಬೆಳ್ಳಿಯನ್ನು ಜಪ್ತಿ ಮಾಡಿದ್ದ ಸರ್ಕಾರವು ಕಾಂಪಿಟೆಂಟ್ ಅಥಾರಿಟಿ ಮೂಲಕ ಇ-ಹರಾಜು ಮಾಡಿತ್ತು. ಅದರಿಂದ ಬಂದ ಒಟ್ಟು 68 ಕೋಟಿ ರೂ. ಹಣವನ್ನು ಸಂತ್ರಸ್ತ ಗ್ರಾಹಕರಿಗೆ ಹಂಚಿಕೆ ಮಾಡುತ್ತಿದೆ.

ಮರಳಿ ಹಣ ಪಡೆದ ಸಂತ್ರಸ್ತ ಗ್ರಾಹಕರ ಮೊಗದಲ್ಲಿ ಸಂತೋಷ ಕಾಣಿಸುತ್ತಿದೆ. “ನಮ್ಮ ಹಣವನ್ನು ಮರಳಿ ನೀಡುತ್ತಿರುವ ಸರ್ಕಾರಕ್ಕೆ ಧನ್ಯವಾದಗಳು. ಉಳಿದ ಹಣವನ್ನೂ ತ್ವರಿತವಾಗಿ ನೀಡಲಿ” ಎಂದು ಗ್ರಾಹಕರು ಮನವಿ ಮಾಡಿದ್ದಾರೆ.

Advertisements

ಬೆಂಗಳೂರು ಐಎಂಎ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂದು ಜನರಲ್ಲಿ ಆಸೆ ತೋರಿಸಿ, ಹಲವರನ್ನು ಹೂಡಿಕೆಗೆ ಪ್ರೇರೇಪಿಸಲಾಗಿತ್ತು. ಹಲವರು ಅದನ್ನು ನಂಬಿ ಹೂಡಿಕೆ ಮಾಡಿದ್ದರು. ಬರೋಬ್ಬರಿ ಒಟ್ಟು 4,000 ಕೋಟಿ ರೂ. ಹಣವನ್ನು ಹೂಡಿಕೆ ಮೂಲಕ ಸಂಗ್ರಹಿಸಿದ್ದ ಐಎಂಎ ಕಂಪನಿ, ಗ್ರಾಹಕರಿಗೆ ವಂಚಿಸಿತ್ತು.

ವಂಚನೆ ಬೆಳಕಿಗೆ ಬಂದ ಬಳಿಕ ಗ್ರಾಹಕರು ಬೆಂಗಳೂರಿನ ಐಎಂಎ ಕಂಪನಿ ಎದುರು ಪ್ರತಿಭಟನೆಗಳನ್ನು ನಡೆಸಿದ್ದರು. ಆರೋಪಿ ಮನ್ಸೂರ್ ಅಲಿಖಾನ್ ಅವರನ್ನು ಪೊಲೀಸರು ಬಂಧಿಸಿದ್ದರು.

ವಂಚನೆಯ 4,000 ಕೋಟಿ ರೂ. ಹಣದಲ್ಲಿ ಸದ್ಯ ಆಭರಣಗಳ ಹರಾಜಿನಿಂದ 68 ಕೋಟಿ ರೂ. ಸಂಗ್ರಹಿಸಲಾಗಿದ್ದು, ಗ್ರಾಹಕರಿಗೆ ಸ್ವಲ್ವ ಪ್ರಮಾಣದ ಹಣವನ್ನು ವಿತರಣೆ ಮಾಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X