ಆಗಸ್ಟ್‌ 1ರಿಂದ ‘ಅನ್ನ ಭಾಗ್ಯ’ ಯೋಜನೆ ಜಾರಿ ಎಂದ ಆಹಾರ ಸಚಿವ ಮುನಿಯಪ್ಪ

Date:

Advertisements
  • ಯೋಜನೆ ವಿಳಂಬಕ್ಕೆ ಕೇಂದ್ರ ಸರ್ಕಾರದ ನೀತಿ ಕಾರಣ: ಆರೋಪ
  • ಛತ್ತಿಸ್‌ಗಢ, ಪಂಜಾಬ್‌ ಸರ್ಕಾರ ಅಕ್ಕಿ ಕೊಡಲು ಮುಂದೆ ಬಂದಿವೆ

ರಾಜ್ಯ ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆ ಮತ್ತೊಂದು ತಿಂಗಳು ವಿಳಂಬವಾಗಲಿದೆ. ಈ ಬಗ್ಗೆ ಸ್ವತಃ ಆಹಾರ ಸಚಿವ ಕೆ ಎಚ್‌ ಮುನಿಯಪ್ಪ ಸ್ಪಷ್ಟನೆ ನೀಡಿದ್ದು, ಜುಲೈ 1ರ ಬದಲು ಆಗಸ್ಟ್‌ 1ರಿಂದ ‘ಅನ್ನ ಭಾಗ್ಯ’ ಜಾರಿಯಾಗಲಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಜುಲೈ 1ರಿಂದ ಅನ್ನ ಭಾಗ್ಯ ಯೋಜನೆ ಪ್ರಾರಂಭಿಸುವುದಾಗಿ ಹೇಳಿದ್ದೆವು. ಆದರೆ, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಭಾರತೀಯ ಆಹಾರ ನಿಗಮ (ಎಫ್‌ಸಿಐ) ರಾಜ್ಯಕ್ಕೆ ಅಗತ್ಯವಿರುವ ಅಕ್ಕಿ ಪೂರೈಕೆ ಮಾಡಲು ಹಿಂದೆ ಸರಿದಿದೆ. ಈ ಕಾರಣದಿಂದ ವಿಳಂಬವಾಗಿದೆ” ಎಂದರು.

“ಬೇರೆ ರಾಜ್ಯಗಳಿಂದ ಅಕ್ಕಿ ಪಡೆಯಲು ಪ್ರಯತ್ನಿಸುತ್ತಿದ್ದೇವೆ. ಈಗಾಗಲೇ ಛತ್ತಿಸ್‌ಗಢ ಮತ್ತು ಪಂಜಾಬ್‌ ಸರ್ಕಾರ ಅಕ್ಕಿ ಕೊಡಲು ಮುಂದೆ ಬಂದಿವೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ” ಎಂದು ಹೇಳಿದರು.

Advertisements

“ಅನ್ನ ಭಾಗ್ಯ ಯೋಜನೆ ಜಾರಿಯಲ್ಲಿ ಅನೇಕ ತೊಡಕುಗಳು ಉಂಟಾಗಿವೆ. ಅಕ್ಕಿ ಕೊಡುವುದಾಗಿ ಎಫ್‌ಸಿಐ ಹೇಳಿ ಈಗ ಹಿಂದೆ ಸರಿದಿದೆ. ಇದರಿಂದ ನಾವು ಬೇರೆ ರಾಜ್ಯಗಳತ್ತ ಮುಖ ಮಾಡಬೇಕಿದೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಸ್ಟಾಕ್‌ ಇಲ್ಲ. ಇನ್ನೂ ಕೆಲವು ರಾಜ್ಯಗಳಲ್ಲಿ ನಮ್ಮ ಅಗತ್ಯಕ್ಕೆ ತಕ್ಕಂತೆ ಅಕ್ಕಿ ಸಿಗುತ್ತಿಲ್ಲ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಹ್ಯಾಕ್ ವಿಚಾರ | ಕಾಂಗ್ರೆಸ್‌ನವರು ಹುಚ್ಚುಚ್ಚು ಹೇಳಿಕೆ ನೀಡುತ್ತಿದ್ದಾರೆ: ಸಿ.ಟಿ ರವಿ

ಛತ್ತೀಸ್ ಗಢ ಸರ್ಕಾರ ಕೇವಲ ಒಂದು ತಿಂಗಳಿಗೆ ಆಗುವಷ್ಟು ಅಕ್ಕಿ ಕೊಡಲು ಮುಂದೆ ಬಂದಿದೆ. ಅದು ಕೂಡ 1.4 ಮಟ್ರಿಕ್‌ ಟನ್‌ ಮಾತ್ರ. ಇದೂ ಕೂಡ ಸಾಲುವುದಿಲ್ಲ. ಬೇರೆ ಬೇರೆ ರಾಜ್ಯಗಳ ಆಹಾರ ಸಚಿವರ ಜೊತೆಗೆ ವಿವಿಧ ಮಟ್ಟದ ಸಭೆಗಳು ಜರುಗಿವೆ. ಈ ಸಭೆಗಳು ಫಲಪ್ರದವಾಗಿ, ನಮ್ಮಿಂದ ಅವರಿಗೆ ಹಣ ಸಂದಾಯವಾಗಿ, ಅಕ್ಕಿ ಬರಲು ವಿಳಂಬವಾಗಲಿದೆ. ಹೀಗಾಗಿ ನಾವು ಆಗಸ್ಟ್‌ 1ರಿಂದ ಅನ್ನ ಭಾಗ್ಯ ಜಾರಿ ಮಾಡುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X