ಬೀದರ್‌ | ʼನಿಗರಾಣಿʼ ವಿನೂತನ ಯೋಜನೆ ಜಾರಿ: ಎಸ್‌ಪಿ ಚನ್ನಬಸವಣ್ಣ

Date:

Advertisements

ಬೀಗ ಹಾಕಿದ ಮನೆಗಳ ಮೇಲೆ ಗಸ್ತು ಸಿಬ್ಬಂದಿ ನಿಗಾ ಇಡಲು ಬೀದರ ಜಿಲ್ಲಾ ಪೊಲೀಸ್ ವತಿಯಿಂದ ವಿನೂತನವಾದ ‘ನಿಮ್ಮ ಮನೆ ನಮ್ಮ ನಿಗರಾಣಿ’ ಯೋಜನೆಯನ್ನು  ಜಿಲ್ಲೆಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಮನೆ ಕಳ್ಳತನ ಪ್ರಕರಣಗಳು ಈ ಯೋಜನೆಯಿಂದ ಜಿಲ್ಲೆಯಲ್ಲಿ ಕಡಿಮೆಯಾಗಲಿವೆ. ರಾಜ್ಯದಲ್ಲಿ ವಿನೂತನ ಯೋಜನೆ ಇದಾಗಿದ್ದು ಇದನ್ನು ಮೊದಲಿಗೆ ತಾಲೂಕು ಕೇಂದ್ರಗಳಲ್ಲಿ ಜಾರಿಗೆ ತರಲಾಗುತ್ತಿದೆ. ಸಾರ್ವಜನಿಕರಿಗಾಗಿ ವ್ಯಾಟ್ಸಪ್ ನಂಬರ್ ಶೇರ್ ಮಾಡಲಾಗುವುದು” ಎಂದರು.

“ಮನೆ ಬೀಗ ಹಾಕಿ ಹೊರಗಡೆ ಹೋದಲ್ಲಿ 8277975068 ನಂಬರ್‌ಗೆ ವ್ಯಾಟ್ಸಪ್ ಗೆ ತಮ್ಮ ಹೆಸರು, ಮೊಬೈಲ್ ನಂಬರ್ ಠಾಣೆಯ ವ್ಯಾಪ್ತಿ, ಯಾವ ದಿನಾಂಕದಿಂದ ಎಲ್ಲಿಯವರೆಗೆ ತಾವು ಮನೆಯಲ್ಲಿ ಇರುವುದಿಲ್ಲ ಎಂಬ ಮಾಹಿತಿ ನೀಡಿದರೆ ನಿಮ್ಮ ಮನೆಗಳ ಮೇಲೆ ನಮ್ಮ ಪೊಲೀಸ್ ಸಿಬ್ಬಂದಿಗಳು ನಿಗರಾಣಿ ಮಾಡುವರು ಎಂದು ಹೇಳಿದರು. ಗ್ರಾಮ ಮಟ್ಟದಲ್ಲಿ ಸಾರ್ವಜನಿಕರಿಂದ ನೆರೆಮನೆ ನಿಗರಾಣಿ ಮಾಡಲು ಸಾರ್ವಜನಿಕರಲ್ಲಿ ಮನವಿ ಮಾಡಲಾಗುತ್ತಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಪೊರೇಟ್‌ಗೆ ರೆಡ್ ಕಾರ್ಪೆಟ್, ರೈತರಿಗೆ ಮುಳ್ಳಿನ ಬೇಲಿ- ಇದು ಮೋದಿ ಶೈಲಿ

ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಅಧಿಕ್ಷಕ ಮಹೇಶ ಮೇಘಣ್ಣವರ, ಡಿವೈಎಸ್ಪಿಗಳಾದ ಶಿವನಗೌಡ ಪಾಟೀಲ, ಜೆ.ಎಸ್.ನ್ಯಾಮೇಗೌಡ, ಸಿಪಿಐ ಹನುಮರೆಡ್ಡಿ, ಪಿಎಸ್‌ಐ ಸೇರಿದಂತೆ ಇತರರು
ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X