ಸಿಎಂ ಸಿದ್ಧರಾಮಯ್ಯ ಬೆಂಬಲಿಸಿ ಅಹಿಂದ ಸಂಘಟನೆಯಿಂದ ಇಂದು ‘ಶಿಕಾರಿಪುರ’ ಬಂದ್‌ಗೆ ಕರೆ

Date:

Advertisements

ಬಿಜೆಪಿ ಮತ್ತು ಜೆಡಿಎಸ್ ನಾಯಕರ ಕುತಂತ್ರದಿಂದ ಸಿದ್ದರಾಮಯ್ಯನವರ ತೇಜೋವಧೆ ನಡೆಯುತ್ತಿದೆ. ಇದನ್ನು ಖಂಡಿಸಿ ಸೆ.26ರಂದು(ಇಂದು) ಶಿಕಾರಿಪುರ ಪಟ್ಟಣವನ್ನು ಸಂಪೂರ್ಣವಾಗಿ ಬಂದ್ ಮಾಡಲು ತಾಲೂಕು ಅಹಿಂದ ಸಂಘಟನೆ ಕರೆ ನೀಡಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಶಿಕಾರಿಪುರ ತಾಲೂಕು ಅಹಿಂದ ಒಕ್ಕೂಟದ ಯುವ ಘಟಕದ ಅಧ್ಯಕ್ಷ ಮಾಲತೇಶ್, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜಕಾರಣದಲ್ಲಿ ಬಿಳಿ ಹಾಳೆಯಂತಿರುವ ಸಿದ್ದರಾಮಯ್ಯನವರಿಗೆ ಕಳಂಕ ಅಂಟಿಸಲು ಕುತಂತ್ರ ನಡೆಸಿದ್ದಾರೆ. ಈ ಉದ್ದೇಶಕ್ಕಾಗಿ ಮುಡಾ ಹಗರಣ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬಂದ್ 4

ಬಿಜೆಪಿ, ಜೆಡಿಎಸ್ ನಾಯಕರ ಕುತಂತ್ರವನ್ನು ಖಂಡಿಸಿ ಬಂದ್‌ಗೆ ಕರೆ ನೀಡಲಾಗಿದೆ. ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ವ್ಯಾಪಾರಸ್ಥರು ಅಂಗಡಿ ಮುಂಗಟ್ಟು ಬಂದ್‌ ಮಾಡಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಸಂಜೆ ಆರು ಗಂಟೆಯವರೆಗೆ ಈ ಬಂದ್ ಇರಲಿದೆ ಎಂದು ತಿಳಿಸಿದ್ದಾರೆ.

Advertisements

ಕರ್ನಾಟಕ ರಾಜ್ಯದ ಜನತೆಗೆ ಐದು ಗ್ಯಾರಂಟಿಗಳನ್ನು ನೀಡಿರುವಂತಹ ಸಿದ್ದರಾಮಯ್ಯ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆಸಲಾಗುತ್ತಿದೆ. ಇದನ್ನು ಜನತೆ ವಿರೋಧಿಸಬೇಕು. ಬಂದ್‌ಗೆ ಎಲ್ಲರೂ ಸಹಕರಿಸಬೇಕು ಎಂದು ಇಂದು ಬೆಳಗ್ಗಿನಿಂದಲೇ ಮೈಕ್ ಮೂಲಕ ಘೋಷಣೆ ಮಾಡಲಾಗಿತ್ತು. ಶಾಲಾ-ಕಾಲೇಜುಗಳು ಎಂದಿನಂತೆ ನಡೆಯುತ್ತಿದೆ.

ಇದನ್ನು ಓದಿದ್ದೀರಾ? ಬಾಗಲಕೋಟೆ | ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಬಂದ್‌ ಕರೆಗೆ ಸ್ವಯಂಪ್ರೇರಿತವಾಗಿ ಸಾರ್ವಜನಿಕರು ಸ್ಪಂದಿಸಿದ್ದು, ಶಿಕಾರಿಪುರ ಪಟ್ಟಣದಲ್ಲಿ ಅಂಗಡಿ ಮುಂಗಟ್ಟು, ವ್ಯಾಪಾರ ವಹಿವಾಟುಗಳು ಬಂದ್ ಆಗಿದೆ. ಸಾರಿಗೆ ಕೂಡ ಬಂದ್ ಆಗಿದೆ. ಸ್ವಂತ ವಾಹನ ಇರುವವರು ಓಡಾಡುತ್ತಿದ್ದಾರೆ. ಆದರೂ, ಶಿಕಾರಿಪುರ ಪಟ್ಟಣ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.

ಪ್ರತಿಭಟನೆ

ಅಲ್ಲದೇ, ತಾಲೂಕು ಅಹಿಂದ ಸಂಘಟನೆಯ ವತಿಯಿಂದ ಬಿಜೆಪಿ-ಜೆಡಿಎಸ್‌ ವಿರುದ್ಧ ಪ್ರತಿಭಟನೆ ಕೂಡ ಹಮ್ಮಿಕೊಳ್ಳಲಾಗಿದೆ.

ನಗರದ ಕನಕ ಪಾರ್ಕ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆದಿದ್ದು, ಸಂಗೊಳ್ಳಿ ರಾಯಣ್ಣನ ಪ್ರತಿಮೆ ಮಾಲಾರ್ಪಣೆ ಮಾಡಲಾಯಿತು. ನಂತರ ಖಾಸಗಿ ಬಸ್ ನಿಲ್ದಾಣದವರೆಗೆ ಬೃಹತ್ ಮೆರವಣಿಗೆ ಕೂಡ ಹಮ್ಮಿಕೊಳ್ಳಲಾಯಿತು.

ಪ್ರತಿಭಟನೆಯಲ್ಲಿ ಅಹಿಂದ ಯುವ ಘಟಕದ ಅಧ್ಯಕ್ಷ ನಗರದ ಮಾಲತೇಶ್, ಪುರಸಭಾ ಸದಸ್ಯ ಉಳ್ಳಿ ದರ್ಶನ್, ಭಂಡಾರಿ ಮಾಲತೇಶ್, ತಾಲೂಕು ಅಹಿಂದ ಸಂಘಟನೆ ಅಧ್ಯಕ್ಷ ಕಾಗಿನಲ್ಲಿ ರಂಗಪ್ಪ, ಕಸಬಾ ಸೊಸೈಟಿ ನಿರ್ದೇಶಕ ನಗರದ ರವಿ ಕಿರಣ್, ಡಿ.ಆರ್.ಗಿರೀಶ್, ಅಹಿಂದ ಮುಖಂಡರಾದ ನಗರದ ರವೀಂದ್ರ ಕಿಟ್ಟಿ, ಬನ್ನೂರು ಸುನಿಲ್ ಮತ್ತಿತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X