ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಹಮ್ಮಿಕೊಂಡಿದ್ದಾರೆ.
ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ನಾಡಿನ ಪ್ರಕಾಶಕರು, ಮಾರಾಟಗರಾರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು. ಅಥವಾ ವಿಧಾನ ಸಭೆ ಸಚಿವಾಲಯದ ವೆಬ್ ಸೈಟ್ www.kla.kar.nic.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹು ಎಂದು ತಿಳಿಸಿದ್ದಾರೆ.
ಮೇಳದಲ್ಲಿ ಭಾಗವಹಿಸುವ ಪ್ರಕಾಶಕರು, ಮಾರಾಟಗಾರರು ಮಳಿಗೆಯೊಂದಕ್ಕೆ ರೂ.1,000 ಗಳ ಭದ್ರತಾ ಠೇವಣಿ ಡಿ.ಡಿ ಯನ್ನು ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರ ಹೆಸರಿನಲ್ಲಿ ಸಲ್ಲಿಸುವುದು.
ಇದನ್ನು ಓದಿದ್ದೀರಾ? ಧಾರವಾಡ | ಫೆ. 7 ರಂದು ಅಂಬೇಡ್ಕರ್ ಓದು ಕಾರ್ಯಕ್ರಮ
ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ 2025 ನೇ ಫೆಬ್ರವರಿ 12 ರಂದು ಸಂಜೆ 5.00 ಗಂಟೆಯೊಳಗೆ ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರಿಗೆ ಸಲ್ಲಿಸಬಹುದು ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.