ಗದಗ | ರೈತ ಸಂಘಟನೆಗಳು ಅನ್ನದಾತರಿಗೆ ನ್ಯಾಯ ದೊರಕಿಸಿಕೊಡಲು ಶ್ರಮಿಸಬೇಕು: ಬೈರೇಗೌಡ

Date:

Advertisements

ನಲವತ್ತು ನಾಲ್ಕು ವರ್ಷಗಳ ಹಿಂದೆ ರೈತರ ಮೇಲೆ ನಡೆದ ದೌರ್ಜನ್ಯ ಹಿನ್ನೆಲೆಯಿಂದ ಈ ರೈತ ಸಂಘಟನೆ ಹುಟ್ಟಿಕೊಂಡಿತು. ರೈತ ಸಂಘಟಕರೆಲ್ಲ ನಾನು ಎಂಬ ಅಹಂಕಾರ ಬಿಟ್ಟು ನಾವು ಎಂಬ ಭಾವನೆ ಎಲ್ಲ ಧರ್ಮದ ಜಾತಿಗಳನ್ನು ದೂರವಿಟ್ಟು ನೊಂದ ರೈತರ ಅನ್ನದಾತರಿಗೆ ನ್ಯಾಯ ದೊರಕಿಸಿಕೊಡಲು ಶ್ರಮಿಸಬೇಕು ಎಂದು ರೈತ ಮುಖಂಡ ಬೈರೇಗೌಡ ಅಭಿಪ್ರಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುರಣಗಿ ಗ್ರಾಮ ಘಟಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ರೈತರು ಬಹಳ ಕಷ್ಟದಲ್ಲಿ ಜೀವನ ಸಾಗಿಸಸುತ್ತಿದ್ದಾರೆ. ರೈತ ಸಂಘಟನೆಗಳು ನಿರಂತರ ಹೋರಾಟದಿಂದ ನ್ಯಾಯ ದೊರಕಿಸಿಕೊಡಬೇಕು. ಕೊಳವೆ ಬಾವಿಗೆ ನೀರಾವರಿ ಇರುವಂತ ರೈತರಿಗೆ ಆಧಾರ್ ಲಿಂಕ್ ಮಾಡುವಂತೆ ಸರಕಾರದ ನಿರ್ಧಾರ ಮಾಡಿದೆ. ಇದನ್ನು ನಾವು ವಿರೋಧಿಸಬೇಕು ಎಂದರು.

Advertisements
WhatsApp Image 2024 08 30 at 2.19.30 PM

ಹಾವೇರಿ ಜಿಲ್ಲಾಧ್ಯಕ್ಷ ಹನುಮಂತಪ್ಪ ಹುಚ್ಚಣ್ಣವರ್ ಮಾತನಾಡಿ, “ರೈತರು ಈ ವರ್ಷ ಸ್ಪಿಂಕ್ಲರ್ ಗೆ ಅರ್ಜಿ ಹಾಕಿದ್ರೆ ಒಂದು ವರ್ಷದ ನಂತರ ಅಥವಾ ಎರಡು ವರ್ಷದ ನಂತರ ಕೃಷಿ ಇಲಾಖೆ ರೈತರಿಗೆ ಒದಗಿಸುತ್ತಿದೆ. ಗದಗ ಜಿಲ್ಲಾ ರೈತರಿಗೆ ಎಷ್ಟು ಅನ್ಯಾಯ ಆಗುತ್ತಿದೆ ಎಂಬುದನ್ನು ಕಾಣುವಾಗ ಕಂಡು ಬೇಸರವಾಗುತ್ತಿದೆ. ಹಾವೇರಿ ಜಿಲ್ಲೆಯ ರೈತರಿಗೆ ತ್ವರಿತವಾಗಿ ಎಲ್ಲಾ ಇಲಾಖೆಯಿಂದ ನೆರವು ಸಿಗುತ್ತದೆ. ಗದಗ ಜಿಲ್ಲೆಯ ರೈತರಿಗೆ ಬಹಳ ಅನ್ಯಾಯ ಆಗುತ್ತಿದೆ. ನೊಂದಿರುವ ರೈತರಿಗೆ ನ್ಯಾಯ ದೊರಕಿಸಿಕೊಡೋಣ” ಎಂದರು.

ರಾಜ್ಯ ಹಸಿರು ಸೇನೆ ರಾಜ್ಯ ಅಧ್ಯಕ್ಷ ಚಂದ್ರಶೇಖರ ಕೋಡಿಹಳ್ಳಿ ಮಾತನಾಡಿದರು. ಹೂವಿನ ಶಿಗ್ಲಿಯ ವಿರಕ್ತಮಠದ ಶ್ರೀ ಮನಿಪ್ರ ಚನ್ನವೀರಮಹಾಸ್ವಾಮಿಗಳು ಉದ್ಘಾಟಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಟಿ ಡಿ ಬಸವರಾಜ ಮತ್ತು ಸೂರಣಗಿ ಗ್ರಾಮ ಘಟಕ ಅಧ್ಯಕ್ಷ ಬಸವ ವಿ ಮಾದಾಪೂರಮಠ, ಗ್ರಾಮ ಘಟಕ ಉಪಾಧ್ಯಕ್ಷ ಚಂದ್ರಶೇಖರ್ ಚ ಶಿರನಹಳ್ಳಿ ಸೂರಣಗಿ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.

ವರದಿ: ಕೇಶವ ಕಟ್ಟಿಮನಿ. ಸಿಟಿಝನ್ ಜರ್ನಲಿಸ್ಟ್, ಲಕ್ಷ್ಮೇಶ್ವರ

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X