ರಾಜ್ಯದಲ್ಲಿ 350 ಆನೆಗಳು ಹೆಚ್ಚಳ: ಅರಣ್ಯ ಸಚಿವ ಈಶ್ವರ ಖಂಡ್ರೆ

Date:

  • 2017ರಲ್ಲಿ ರಾಜ್ಯದಲ್ಲಿ ಸುಮಾರು 6049 ಆನೆಗಳಿದ್ದವು ಎಂದ ಸಚಿವ
  • ಆಗಸ್ಟ್ 12 ರಿಂದ ವಿಶ್ವ ಆನೆ ದಿನವನ್ನಾಗಿ ಆಚರಣೆ ಮಾಡಲು ನಿರ್ಧಾರ

ರಾಜ್ಯದ ಆನೆಗಳ ಸಂಖ್ಯೆಯಲ್ಲಿ ಸುಮಾರು 350 ಆನೆಗಳು ಹೆಚ್ಚಳವಾಗಿವೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

- Advertisement -

ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಆನೆಗಳ ಗಣತಿಯ ವರದಿ ಬಿಡುಗಡೆ ಮಾಡಿದ ಬಳಿಕ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

2017ರಲ್ಲಿ ರಾಜ್ಯದಲ್ಲಿ ಸುಮಾರು 6,049 ಆನೆಗಳಿದ್ದವು, ಈ ಬಾರಿ ಗಣತಿಯ ವೇಳೆ 6,395 ಆನೆಗಳಿವೆ ಎಂದು ಅಂದಾಜು ಮಾಡಲಾಗಿದೆ. ಆ ಮೂಲಕ ಆನೆಗಳ ಸಂಖ್ಯೆಯಲ್ಲಿ ಸುಮಾರು 350ರಷ್ಟು ಹೆಚ್ಚಳವಾಗಿದೆ ಎಂದರು.

ಆನೆಗಳು ಬಲಿಷ್ಠ ವನ್ಯಜೀವಿಯಾದರೂ ಭಾರತ ಸೇರಿದಂತೆ ವಿಶ್ವಾದ್ಯಂತ ಅಪಾಯದಲ್ಲಿವೆ. ಅವಸಾನದ ಅಂಚಿನಲ್ಲಿರುವ ಆನೆಗಳನ್ನು ಸಂರಕ್ಷಿಸುವ ಸಲುವಾಗಿ, ಆನೆಗಳಿಗೂ ನೆಮ್ಮದಿಯಿಂದ ಬದುಕಲು ಅವುಗಳ ಆವಾಸಸ್ಥಾನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು 2012 ಆಗಸ್ಟ್ 12 ರಿಂದ ವಿಶ್ವ ಆನೆ ದಿನವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಆನೆಗಳ ದಿನದಂದು ದೇಶದಲ್ಲಿ ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ ಅಥವಾ ಇಳಿಮುಖವಾಗಿದೆಯೇ ಎಂದು ತಿಳಿಯಲು ಆನೆಗಳ ಗಣತಿಯನ್ನು ಪ್ರತೀ ಐದು ವರ್ಷಗಳಿಗೊಮ್ಮೆ ಮಾಡಲಾಗುತ್ತದೆ. ಈ ಹಿಂದೆ ಆನೆ ಗಣತಿ 2017 ರಲ್ಲಿ ನಡೆದಿತ್ತು. ಬಳಿಕ 2022ರಲ್ಲಿ ಆನೆ ಗಣತಿಯನ್ನು ಅಖಿಲ ಭಾರತ ಹುಲಿ ಗಣತಿಯ ಭಾಗವಾಗಿ ಮಾಡಲು ಪ್ರಯತ್ನಿಸಲಾಯಿತು. ಆದರೆ ಈ ಸಮೀಕ್ಷೆಯು ಮಾದರಿ ಬ್ಲಾಕ್‌ ಎಣಿಕೆ (Sample Block Count) ಮತ್ತು ಆನೆಗಳ ಸಂಖ್ಯೆ ಸ್ವರೂಪದ (Population Structure) ಮೌಲ್ಯ ಮಾಪನವನ್ನು ಒಳಗೊಂಡಿರಲಿಲ್ಲ. ಈ ವಿಧಾನ ಆನೆಗಳ ಗಣತಿ ಮತ್ತು ಸಂಖ್ಯಾ ಸ್ವರೂಪ ಅಂದರೆ ಲಿಂಗ ಮತ್ತು ವಯಸ್ಸಿನ ವರ್ಗೀಕರಣ ಮಾಡಲು ಬಹಳ ಮುಖ್ಯವಾಗಿರುತ್ತದೆ ಎಂದು ಸಚಿವರು ತಿಳಿಸಿದರು.

ಕರ್ನಾಟಕ, ಕೇರಳ ಮತ್ತು ತಮಿಳುನಾಡು ಈ ಮೂರು ರಾಜ್ಯಗಳ ಮುಂದಾಳತ್ವದೊಂದಿಗೆ 2023ರ ಮೇ-17 ರಿಂದ ಮೇ-19 ರವರೆಗೆ ಏಕಕಾಲದಲ್ಲಿ ಆನೆಗಳ ಗಣತಿ ನಡೆಸಲಾಯಿತು. ಅದೇ ದಿನಾಂಕದಂದು ಆಂಧ್ರ ಪ್ರದೇಶದಲ್ಲೂ ಸಹ ಇದೇ ರೀತಿಯ ಗಣತಿ ಕಾರ್ಯವನ್ನು ನಡೆಸಲಾಯಿತು ಎಂದು ವಿವರಿಸಿದರು.

ಈ ಗಣತಿಯ ಸ್ವರೂಪ, ಕ್ಷೇತ್ರ ಸಿಬ್ಬಂದಿಗೆ ತರಬೇತಿ, ಗಣತಿ ಫಲಿತಾಂಶಗಳ ವಿಶ್ಲೇಷಣೆ ಹಾಗೂ ವರದಿ ತಯಾರಿಕೆಯಲ್ಲಿ ಪ್ರೊ. ಆರ್‌. ಸುಕುಮಾರ್‌ ನೇತೃತ್ವದ ಭಾರತೀಯ ವಿಜ್ಞಾನ ಸಂಸ್ಥೆಯ (IISC) ತಾಂತ್ರಿಕ ನೆರವಿನೊಂದಿಗೆ ಕರ್ನಾಟಕ ಅರಣ್ಯ ಇಲಾಖೆಯು ಆನೆಗಳ ಗಣತಿಯನ್ನು ನಡೆಸಲಾಗಿದೆ.

ರಾಜ್ಯದ 32 ವಿಭಾಗಗಳಿಂದ 3,400 ಕ್ಕೂ ಹೆಚ್ಚು ಸಿಬ್ಬಂದಿ ಈ ಆನೆಗಳ ಗಣತಿ ಕಾರ್ಯದಲ್ಲಿ ಭಾಗವಹಿಸಿದ್ದರು. ಆನೆ ಗಣತಿಯನ್ನು ನೇರ ಎಣಿಕೆ ಅಥವಾ ಬ್ಲಾಕ್‌ ಎಣಿಕೆ, ಟ್ರಾಂಜೆಕ್ಟ್‌ ಸಮೀಕ್ಷೆ ಅಥವಾ ಲದ್ದಿ ಎಣಿಕೆ ಹಾಗೂ ವಾಟರ್‌ ಹೋಲ್‌ ಎಣಿಕೆ ಎಂಬ ಮೂರು ವಿಧಾನಗಳಲ್ಲಿ ನಡೆಸಲಾಯಿತು ಎಂದು ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದರು.

ರಾಜ್ಯದ 32 ವಿಭಾಗಗಳಲ್ಲಿ ಆನೆಗಳ ಗಣತಿ ಕಾರ್ಯವನ್ನು ನಡೆಸಲಾಗಿದ್ದು, ಈ ಸಮೀಕ್ಷೆಯಲ್ಲಿ 23 ವಿಭಾಗಗಳಲ್ಲಿ ಆನೆಗಳು ಕಂಡುಬಂದಿವೆ. ಸಮೀಕ್ಷೆಯ ದಿನದಂದು ನೇರವಾಗಿ ಎಣಿಸಿದ ಒಟ್ಟು ಆನೆಗಳ ಸಂಖ್ಯೆ-2219 ಆಗಿತ್ತು. ಈ 23 ವಿಭಾಗಗಳಲ್ಲಿ ಇರುವ 18,975 ಚದರ ಕಿ.ಮೀ ಪ್ರದೇಶದ ಪೈಕಿ 6,104 ಚದರ ಕಿ.ಮೀ ಪ್ರದೇಶದಲ್ಲಿ ಈ ಸಮೀಕ್ಷೆಯನ್ನು ನಡೆಸಲಾಯಿತು. ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರದೇಶವನ್ನು ಸಮೀಕ್ಷೆಗೆ ಒಳಪಡಿಸಿರುವುದರಿಂದ ಈ ಸಮೀಕ್ಷೆ ಮತ್ತು ವರದಿಯು ಹೆಚ್ಚು ನಿಖರ ಮತ್ತು ವಿಶ್ವಾಸಾರ್ಹವಾಗಿದೆ ಎಂದು ಅರಣ್ಯ ಸಚಿವರು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...