ಕಲಬುರಗಿ | ಎಸ್‌ಸಿ/ಎಸ್‌ಟಿ ಗುತ್ತಿಗೆ ಮೀಸಲಾತಿ 2 ಕೋಟಿ ರೂ.ಗೆ ಹೆಚ್ಚಿಸಿ: ಮಹಾದೇವ ಸ್ವಾಮಿ

Date:

Advertisements

ರಾಜ್ಯ ಸರಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ 1ಕೋಟಿ ರೂ.ವರೆಗೆ ಮೀಸಲಾತಿ ಘೋಷಿಸಿದ್ದು, ಮೀಸಲಾತಿ ಮಿತಿಯನ್ನು  2ಕೋಟಿಗೆ ಹೆಚ್ಚಿಸಬೇಕೆಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಹಾದೇವಸ್ವಾಮಿ ಆಗ್ರಹಿಸಿದರು.

ಕಲಬುರಗಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, “ಆರ್ಥಿಕವಾಗಿ ಅತ್ಯಂತ ಸಂಕಷ್ಟ ಎದುರಿಸುತ್ತಿರುವ ಎಸ್‌ಸಿ, ಎಸ್‌ಟಿ ಗುತ್ತಿಗೆದಾರರಿಗೆ ಮೀಸಲಾತಿ ಕಲ್ಪಿಸಬೇಕೆಂಬ ನೈಜ ಕಳಕಳಿವಿದ್ದರೆ ಗುತ್ತಿಗೆದಾರರಿಗೆ ಮೀಸಲಾತಿ ಮಿತಿ 2ಕೋಟಿಗೆ ಹೆಚ್ಚಳ ಮಾಡಬೇಕೆಂದು” ಒತ್ತಾಯಿಸಿದರು.

“2013ರಲ್ಲಿ ಎಸ್ ಸಿ-ಎಸ್ ಟಿ ಗುತ್ತಿಗೆದಾರರಿಗೆ 50 ಲಕ್ಷದವರೆಗೆ ಮೀಸಲಾತಿ ಘೋಷಿಸಿ 2017ರಲ್ಲಿ ಜಾರಿಗೆ ತರಲಾಯಿತು. ನಂತರ ಗುತ್ತಿಗೆ ಮೀಸಲಾತಿಯನ್ನು 1ಕೋಟಿಗೆ ಹೆಚ್ಚಳ ಮಾಡುವುದಾಗಿ 2018ರಲ್ಲಿ ಘೋಷಿಸಿ ಅದನ್ನು 2023ರಲ್ಲಿ ಜಾರಿಗೆ ತರಲಾಗಿದೆ. ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಗುತ್ತಿಗೆದಾರರನ್ನು ನೆನಪಿಸಿಕೊಳ್ಳುವ ತಂತ್ರಗಾರಿಕೆ ಬಿಡಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಘೋಷಣೆಗಳು ಕೇವಲ ಕಾಗದದ ಮೇಲಿದ್ದರೆ ಸಾಲದು. ಅದನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸುವ ನೈತಿಕ ಜವಾಬ್ದಾರಿಯನ್ನು ಸರಕಾರ ನಿಭಾಯಿಸಬೇಕು. ಒಂದೆಡೆ, ಎಸ್‌ಸಿ, ಎಸ್‌ಟಿ ಗುತ್ತಿಗೆದಾರರಿಗೆ ಕಾಮಗಾರಿಗಳಲ್ಲಿ ಮೀಸಲಾತಿ ಘೋಷಿಸಿ, ಮತ್ತೊಂದೆಡೆ ಕಾಮಗಾರಿಗಳಲ್ಲಿ ಪ್ಯಾಕೇಜ್ ಮಾಡಲಾಗುತ್ತಿದೆ. ಹೀಗಾದರೆ ಎಸ್‌ಸಿ, ಎಸ್‌ಟಿ ಗುತ್ತಿಗೆದಾರರಿಗೆ ಮೀಸಲಾತಿಯ ಲಾಭ ಹೇಗೆ ಲಭಿಸುತ್ತದೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಂಗನವಾಡಿಗಿಲ್ಲ ಸ್ವಂತ ಕಟ್ಟಡ; ಬಯಲು ರಂಗಮಂದಿರದ ಕೊಠಡಿಯೇ ಗತಿ

ಈ ಸಂದರ್ಭದಲ್ಲಿ ಎಸ್‌ಸಿ, ಎಸ್‌ಟಿ ಗುತ್ತಿಗೆದಾರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ಜೈಕುಮಾರ್ ದೇಗಾಂವಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

Download Eedina App Android / iOS

X