ಗುಬ್ಬಿ | ಎಂ.ಎಚ್.ಪಟ್ಟಣ ಗ್ರಾಪಂನಲ್ಲಿ ಸ್ವಾತಂತ್ರ್ಯ ದಿನಾಚರಣೆ

Date:

Advertisements

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ 79 ನೇ ಸ್ವಾಂತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಧ್ವಜಾರೋಹಣ ನೆರವೇರಿಸಿದ ಗ್ರಾಪಂ ಅಧ್ಯಕ್ಷ ಎಸ್.ಜೆ.ಯೋಗೀಶ್ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದಲ್ಲಿ ಹಂತ ಹಂತವಾಗಿ ಎಲ್ಲಾ ಕ್ಷೇತ್ರದಲ್ಲೂ ಬೆಳೆದು ಇಂದು ವಿಶ್ವಕ್ಕೆ ನಮ್ಮ ಶಕ್ತಿ ಏನೆಂಬುದು ತಿಳಿಸಿದೆ. ಮುಂದಿನ ದಿನಗಳಲ್ಲಿ ಯುವಶಕ್ತಿ ಮತ್ತಷ್ಟು ಶಕ್ತಿಯುತವಾಗಿ ಬೆಳೆದು ನಮ್ಮ ದೇಶವನ್ನು ಮೊದಲ ಸ್ಥಾನಕ್ಕೆ ತರಲು ಮುನ್ನುಗ್ಗುತ್ತಿದೆ. ಈ ಸಮಯದಲ್ಲಿ ದೇಶಾಭಿಮಾನ ಬೆಳೆಸಬೇಕಿದೆ. ನಮ್ಮ ಪೂರ್ವಜರು ಮಾಡಿದ ತ್ಯಾಗ ಬಲಿದಾನ ಬಗ್ಗೆ ತಿಳಿಸಬೇಕಿದೆ. ಈ ಕೆಲಸ ಗ್ರಾಮೀಣ ಭಾಗದಲ್ಲಿ ಮೊದಲು ಆರಂಭವಾಗಬೇಕಿದೆ. ಶಾಲೆಯಲ್ಲಿ ನಡೆಯುವ ಈ ಕಾರ್ಯಕ್ರಮ ಸಾರ್ವಜನಿಕವಾಗಿ ಪ್ರತಿ ವರ್ಷ ನಾಡಹಬ್ಬ, ರಾಷ್ಟ್ರೀಯ ಹಬ್ಬ ಆಚರಣೆ ಮಾಡಲು ಸ್ಥಳೀಯ ಪಂಚಾಯಿತಿ ಮುಂದಾಗಬೇಕು ಎಂದು ಕರೆ ನೀಡಿದರು.

ಪಿಡಿಓ ಕೆ.ಎಂ.ಶೇಖರ್ ಮಾತನಾಡಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆಯುವ ಆಚರಣೆ ಸಾರ್ವಜನಿಕವಾಗಿ ನಡೆಸಿ ಜಾಗೃತಿ ಮೂಡಿಸುವ ಕೆಲಸ ಚುನಾಯಿತ ಪ್ರತಿನಿಧಿಗಳ ಜೊತೆ ನಡೆಸುತ್ತೇವೆ. ಈ ಜೊತೆಗೆ ಸ್ವಚ್ಛತೆ, ಪರಿಸರ ಸಂರಕ್ಷಣೆ ಬಗ್ಗೆ ಅರಿವು ಸಹ ಮೂಡಿಸುತ್ತೇವೆ ಎಂದರು.

Advertisements

ಈ ಸಂದರ್ಭದಲ್ಲಿ ಬಗರ್ ಹುಕುಂ ಸಮಿತಿ ಸದಸ್ಯ ನರಸಿಂಹಯ್ಯ, ಸೊಸೈಟಿ ಕಾರ್ಯದರ್ಶಿ ಉಪೇಂದ್ರ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಶಾಲಾ ಸಿಬ್ಬಂದಿ ಹಾಗೂ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X