ಇಂಡಿ | ಸಹಕಾರ ಸಂಘಗಳ ಏಳಿಗೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ: ವಿಶ್ವನಾಥ ಪೂಜಾರಿ

Date:

Advertisements

ಸಹಕಾರ ಸಂಘಗಳ ಏಳಿಗೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ. ಸಾಲ ತೆಗೆದುಕೊಳ್ಳುವುದು ಅಷ್ಟೇ ಅಲ್ಲ, ಠೇವಣಿ ಇಡುವ ಮೂಲಕ ರೈತರು, ಗ್ರಾಹಕರು ಕಾಲ ಕಾಲಕ್ಕೆ ಸಂಘದ ಸಿಬ್ಬಂದಿ ಜೊತೆಗೆ ಉತ್ತಮ ಬಾಂಧವ್ಯದಿಂದ ವ್ಯವಹಾರ ಮಾಡಿದಾಗ ಮಾತ್ರ ಆರ್ಥಿಕವಾಗಿ ಬ್ಯಾಂಕಿಗೆ ಜೀವ ಬರುತ್ತದೆ ಎಂದು ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಹೇಳಿದರು.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ ಗ್ರಾಮದ ಹಲಸಂಗಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಾಕಾರಿ ಸಂಘದ ಆವರಣದಲ್ಲಿ ನಡೆದ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ ಪ್ಯಾಟಿ ಮಾತನಾಡಿ, “ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಾಕಾರಿ ಸಂಘವು 2271 ಸದಸ್ಯತ್ವದ ಸುಮಾರು ರೂ. 84,92,030 ಶೇರು ಬಂಡವಾಳ ಹೊಂದಿದೆ. ನಿಧಿಗಳಿಂದ ರೂ. 6704800, ದುಡಿಯುವ ಬಂಡವಾಳ ರೂ.85998930, ಠೇವಣಿ ರೂ. 102935542, ಸದಸ್ಯರ ಒಟ್ಟು ಸಾಲ ರೂ. 66640792 ಮತ್ತು ವಾರ್ಷಿಕ ನಿವ್ವಳ ಲಾಭ ರೂ. 671737 ಗಳಿವೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಇಂಡಿ | ಮುಂದುವರೆದ ಮಹಾಮಳೆ; ನದಿಪಾತ್ರದ ಜನರಲ್ಲಿ ಪ್ರವಾಹದ ಆತಂಕ

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಪ್ಪಾಶ್ಯಾ ಜಕ್ಕೋಂಡಿ, ಶ್ರೀಕಾಂತ ಗುಬ್ಯಾಡ, ಸಂತೋಷ ವಾಲಿಕಾರ, ಚಂದ್ರಕಾಂತ ಕುಂಬಾರ, ಬಸವರಾಜ ಬಂದಾಳೆ, ಭೀಮಾಶಂಕರ ಹೂಗಾರ, ಪುಷ್ಪಾ ಗಲಗಲಿ, ಶ್ರೀಮತಿ ಸುರೇಖಾ ಕಲಬುರ್ಗಿ, ಕಾಶಿನಾಥ ಕಟ್ಟಿಮನಿ, ಚನ್ನಬಸಯ್ಯ ಹೀರೆಮಠ, ದೇವಣ್ಣ ಗಿಡದಮನಿ, ಕ್ಷೇತ್ರ ಸಿಬ್ಬಂದಿ ಸಾಯಬಣ್ಣ ರೊಟ್ಟಿ, ಚಿಕ್ಕಪ್ಪ ಕಂಬಾರ, ರವೀಂದ್ರ ಕಂಬಾರ, ಬಂಕಟಸಿಂಗ್ ರಜಪೂತ, ಮಂಜುನಾಥ ಶಿರಹಟ್ಟಿ ,ಸೇರಿದಂತೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಾಕಾರಿ ಸಂಘದ ಶೇರುದಾರರು, ಗ್ರಾಹಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

ಹುಬ್ಬಳ್ಳಿ | ಮಹಾನಗರ ಪಾಲಿಕೆ ಕಲಾಪಕ್ಕೆ 18 ಮಾರ್ಷಲ್‌ಗಳ ನೇಮಕ

ಸಾಮಾನ್ಯವಾಗಿ ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಾರೆ. ಆ ಮಾದರಿಯಲ್ಲಿ ಇದೀಗ ಪ್ರಥಮ‌...

Download Eedina App Android / iOS

X