ಮಧುಗಿರಿ, ಕೊರಟಗೆರೆ ಗೆ ಹೇಮೆ ಹರಿಸದೆ ಅನ್ಯಾಯ: ಪರಂ ವಿರುದ್ಧ ರೈತ ಸಂಘ ಕಿಡಿ

Date:

Advertisements

ತುಮಕೂರು ಜಿಲ್ಲೆಯ ಶಿರಾ ತಾಲೂಕಿಗೆ ಹೇಮಾವತಿ ನೀರು ಹೋಗುತ್ತಿದೆ. ಆದರೆ ಮಧುಗಿರಿ, ಕೊರಟಗೆರೆ ತಾಲೂಕುಗಳಿಗೆ ಹೇಮಾವತಿ ನೀರು ಹರಿಯುತ್ತಿಲ್ಲ. ಈ ಎರಡು ತಾಲೂಕಿಗೆ ಹೇಮಾವತಿ ನೀರು ಕೊಡಲು ಅವಕಾಶವಿದ್ದರು ರಾಜ್ಯದ ಗೃಹ ಮಂತ್ರಿ ಪರಮೇಶ್ವರ್ ಅವರು ಹೇಮಾವತಿ ನೀರು ಕೊಡಿಸದೆ ಪಲಾಯನ ಮಾಡುತ್ತಿದ್ದಾರೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಆರೋಪಿಸಿದರು

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ರೈತ  ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ನೀರನ್ನು ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಕುಣಿಗಲ್ ಹೆಸರೇಳಿಕೊಂಡು ಮಾಗಡಿ, ರಾಮನಗರ, ಬೆಂಗಳೂರಿಗೆ ನಮ್ಮ ಪಾಲಿನ ನೀರನ್ನು ಕದಿಯುತ್ತಿದ್ದಾರೆ. ಈಗಿದ್ದರು ಕಾಂಗ್ರೆಸ್ ಶಾಸಕರು ಮೌನ ವಹಿಸಿದ್ದಾರೆ. ಇವರಿಗೆ ಮತದಾರರ ಭಯ ಇಲ್ಲದಂತ್ತಾಗಿದೆ. ಮತದಾರರ ಭಯವಿಲ್ಲದೆ ಈ ರೀತಿ ಮಾಡುತ್ತಿದ್ದಾರೆ ಎಂದರು

1002072904

ಐಐಟಿ ಮೂಲಕ ಈ ಯೋಜನೆ ಬಗ್ಗೆ ಪರಿಶೀಲಿಸಲು ಶಾಸಕರ ಸಭೆಯಲ್ಲಿ ತಿಳಿಸಿದ ಉಪ ಮುಖ್ಯಮಂತ್ರಿಗಳು ಸ್ಥಳಕ್ಕೆ ಬಂದು ಕೆಲಸ ಈಗಾಗಲೇ 400 ಕೋಟಿ ಬಿಡುಗಡೆಯಾಗಿದೆ. ಕೆಲಸ ಮಾಡುತ್ತೇವೆ ಎಂದು ಉದ್ಧಟತನ ಮಾತುಗಳಾಡಿರುವುದು ಸರಿಯಲ್ಲ. ಜೊತೆಯಲ್ಲಿ ಬಂದು ಮೌನ ಸಮ್ಮತಿ ನೀಡಿದ ಶಾಸಕರಿಬ್ಬರ ನಡೆಗೆ ರೈತರಲ್ಲಿ ಆಕ್ರೋಶ ಮೂಡಿದೆ. ಮತ್ತೂಮ್ಮೆ ದೊಡ್ಡ ಹೋರಾಟಕ್ಕೆ ಸಜ್ಜಾಗಿದ್ದಾರೆ ಎಂದು ಎಚ್ಚರಿಸಿದರು.

Advertisements

ಇತ್ತೀಚೆಗೆ ಗುಬ್ಬಿ ತಾಲೂಕಿನ ಸುಂಕಾಪುರದ ಬಳಿ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಪರಿಶೀಲನೆ ನಡೆಸಿದ್ದ ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಕಾಮಗಾರಿ ನಿಲ್ಲಸುವುದಿಲ್ಲ, ಈಗಾಗಲೇ ಪೖಪ್ ಖರೀದಿಗೆ 400 ಕೋಟಿ ಹಣ ಮಂಜೂರು ಮಾಡಿದ್ದೇವೆ. ಸಹೋದರಂತೆ ನೀರು ಹಂಚಿಕೆ ಮಾಡಿಕೊಳ್ಳೋಣ ಎಂದು ಹೇಳಿದ್ದರು, ಈ ಹೇಳಿಕೆಗೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು, ಹಾಗೇ ಗುಬ್ಬಿಯಲ್ಲಿ ಸಭೆಯನ್ನು ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X