ಮೈಸೂರು | ರೈತ ಕುಟುಂಬಗಳಿಗೆ ಅನ್ಯಾಯ; ಅಹೋರಾತ್ರಿ ಧರಣಿ

Date:

Advertisements

ಮೈಸೂರು ಜಿಲ್ಲೆ,ವರುಣಾ ಕ್ಷೇತ್ರದ ಕೆಂಪಿಸಿದ್ದನ ಹುಂಡಿ ಗ್ರಾಮದಲ್ಲಿ ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗೆ ಅನ್ಯಾಯವಾಗಿದ್ದು, ಅಡಕನಹಳ್ಳಿ ಕೈಗಾರಿಕಾ ಪ್ರದೇಶದ ನೀರು ಸರಬರಾಜು ಕೇಂದ್ರದ ಮುಂದೆ 64 ದಿನದಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ರೈತರ ಭೂಮಿಯನ್ನು ಕಸಿದುಕೊಂಡ ಕೆಐಎಡಿಬಿ ಉದ್ಯೋಗವನ್ನು ಕೊಡಿಸಲು ವಿಫಲವಾದ ಕಾರಣ ಎಲ್ಲಾ ಕೈಗಾರಿಕೆಗಳಿಗೂ ನೀರು ಸರಬರಾಜು ಮಾಡುವುದನ್ನು ನಿಲ್ಲಿಸಲಾಗಿತ್ತು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಕೆಐಎಡಿಬಿ ಅಧಿಕಾರಿಗಳು ಯು ಬಿ ಕಾರ್ಖಾನೆಯಲ್ಲಿ 5 ಸದಸ್ಯರಿಗೆ ಮತ್ತು ಏಷಿಯನ್ ಪೈಂಟ್ ಕಾರ್ಖಾನೆಯಲ್ಲಿ 18 ಸದಸ್ಯರಿಗೆ ಉದ್ಯೋಗ ನೀಡುವ ಭರವಸೆ ನೀಡಿದರು.

ಆದರೆ, ಏಷಿಯನ್ ಪೇಂಟ್ ಕಾರ್ಖಾನೆಯಲ್ಲಿ 18 ಸದಸ್ಯರ ಪೈಕಿ ಐದು ಸದಸ್ಯರನ್ನು ಕಾರಣವಿಲ್ಲದೆ ಕೈ ಬಿಡಲಾಗಿದೆ. ಇದನ್ನು ರೈತರು ಒಂದು ವಾರದಿಂದ ಕೇಳಿದರು ಅಧಿಕಾರಿಗಳು ಉತ್ತರ ಕೊಡದ ಕಾರಣ ಹಾಗೂ ಬೆಳಿಗ್ಗೆಯಿಂದ ಸಂಜೆವರೆಗೂ ಕಾಯುತ್ತಾ ಕುಳಿತರು ಉತ್ತರ ದೊರೆಯದ ಕಾರಣ ಕೆಐಎಡಿಬಿ ಮೈಸೂರು ವಲಯ ಕಛೇರಿಯ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಕೊಡಗು | ಶಿವಕುಮಾರ ಸ್ವಾಮೀಜಿ 118 ನೇ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ

ಎಐಕೆಕೆಎಂಎಸ್ ನ ಬಸವರಾಜು ಹೆಚ್ ಎಂ, ರೈತರಾದ ರವಿ ಕುಮಾರ್, ಉಮೇಶ್, ಮಂಜು, ವಸಂತ್ ಕುಮಾರ್, ಸೌಭಾಗ್ಯ, ವಸಂತ, ಶಿವಮ್ಮ ಮುಂತಾದವರು ಧರಣಿಯಲ್ಲಿ ಇದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X