ಹೆಬ್ಬಾಳ್ಕರ್, ಮೋಟಮ್ಮ, ಮಮತಾ ಕುರಿತು ಅವಹೇಳನ; ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ ದಾಖಲು

Date:

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಮೋಟಮ್ಮ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ ದಾಖಲಾಗಿದೆ. ಭಟ್‌ ವಿರುದ್ಧ ಉತ್ತರ ಕನ್ನಡ ಕಾಂಗ್ರೆಸ್‌ ಮುಖಂಡ, ವಕೀಲ ಮಂಜುನಾಥ ನಾಯಕ್ ಅವರು ಶಿರಸಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಕಲಿಸಿದ್ದಾರೆ.

- Advertisement -

ಆಗಸ್ಟ್‌ 20ರಂದು ಫೇಸ್‌ಬುಕ್‌ನಲ್ಲಿ ವಿಶ್ವೇಶ್ವರ ಭಟ್ ಮಹಿಳಾ ವಿರೋಧಿ ಮತ್ತು ಅವಹೇಳನಕಾರಿ ಪೋಸ್ಟ್‌ ಹಾಕಿದ್ದರು. ಪೋಸ್ಟ್‌ನಲ್ಲಿ ಹಾಲಿವುಡ್‌ ನಟಿ ಮರ್ಲಿನ್‌ ಮೆನ್ರೋ ಹೇಳಿಯೊಂದನ್ನು ಉಲ್ಲೇಖಿಸಿ , “ಹೆಣ್ಣು ಮಕ್ಕಳು ಯಾವ ಡ್ರೆಸ್ಸನ್ನೂ ಬಹಳ ದಿನಗಳ ಕಾಲ ಇಷ್ಟಪಡುವುದಿಲ್ಲ. ಅಂದರೆ ಟೈಟ್ ಡ್ರೆಸ್ಸನ್ನು ಯಾವತ್ತೂ ಧರಿಸುವುದಿಲ್ಲ. ಆಗೊಮ್ಮೆ ಈಗೊಮ್ಮೆ ಧರಿಸಿದಾಗ ಮನೆಯಲ್ಲಿ ಸದನ ಸದೃಶ ವಾತಾವರಣ ನಿರ್ಮಿಸಬಾರದು. ಕೆಲ ದಿನಗಳ ಬಳಿಕ ಮಗಳಿಗೆ ನೀವು ಅಂಥ ಡ್ರೆಸ್ ಧರಿಸು ಅಂದರೂ ಧರಿಸುವುದಿಲ್ಲ. ಅಷ್ಟಕ್ಕೂ ಆ ವಯಸ್ಸಿನ ಮಕ್ಕಳು ಟೈಟ್ ಡ್ರೆಸ್ ಧರಿಸಿದರೇ ಚೆಂದ. ಇನ್ನು ಲಕ್ಷ್ಮೀ ಹೆಬ್ಬಾಳ‌, ಮೋಟಮ್ಮ, ಮಮತಾ ಬ್ಯಾನರ್ಜಿ ಅಂಥ ಡ್ರೆಸ್ ಧರಿಸಿದರೆ ಬರಿಗಣ್ಣಿನಿಂದ ನೋಡಲು ಸಾಧ್ಯವಾ? ಒಮ್ಮೆ ಯೋಚಿಸಿ” ಎಂದು ಬರೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...
ಭಟ್ಟ1

“ಭಟ್‌ ಅವರ ಅಸಹ್ಯ ಹೇಳಿಕೆಗಳು ಬಾಲಿಷವಾಗಿದ್ದು, ಮಹಿಳೆಯರಿಗೆ ಅಪಮಾನ, ಅಪಹಾಸ್ಯ ಮಾಡಿವೆ. ಆತ ಮಹಿಳೆಯರ ದೇಹ, ಉಡುಗೆ-ತೊಡುಗೆಗಳ ಬಗ್ಗೆ ವ್ಯಂಗ್ಯ ಮಾಡಿದ್ದು, ಅವರ ಘಟನೆಗೆ ಧಕ್ಕೆ ತರುವಂತಿವೆ. ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ಹರಡುತ್ತದೆ. ಹಾಗಾಗಿ, ಭಟಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಮಂಜನಾಥ್ ನಾಯಕ್ ದೂರಿನಲ್ಲಿ ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿದ್ಯಾರ್ಥಿನಿಯರು ಆರೋಗ್ಯ ಕಾಳಜಿ ಮಾಡಬೇಕು: ಪ್ರೊ. ವಿಜಯಾ ಬಿ ಕೊರಿಶೆಟ್ಟಿ

ವಿದ್ಯಾರ್ಥಿನಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕಣ್ಣಿನ ಆರೋಗ್ಯವನ್ನು...

ಕುಮಟಾ | ನಿಲ್ಲಿಸಿದ್ದ ಲಾರಿ ಏಕಾಏಕಿ ಚಲಿಸಿ ಏಳನೀರು ವ್ಯಾಪಾರಿ ಸಾವು: ಮತ್ತೊಬ್ಬರಿಗೆ ಗಾಯ

ಕುಮಟಾ ಪಟ್ಟಣದ ಎಪಿಎಂಸಿ (APMC) ರಾಷ್ಟ್ರೀಯ ಹೆದ್ದಾರಿ ಬದಿ ಸಂಭವಿಸಿದ ಭೀಕರ...

ವಿಜಯಪುರ | ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ರಾಕೇಶ್ ಕುಮಟಗಿ ನೇಮಕ

ನ್ಯಾಯ, ಸಮಾನತೆ ಹಾಗೂ ಸಂವಿಧಾನದ ಆಶಯಗಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಭೀಮ್ ಆರ್ಮಿ ಭಾರತ್...