ಧಾರವಾಡ | ವಿಶ್ವ ಶಾಂತಿಗಾಗಿ ಅಂತಾರಾಷ್ಟ್ರೀಯ ಸಂಘರ್ಷ ದಿನ ಆಚರಣೆ: ಎಐಯುಟಿಯುಸಿ

Date:

ಜಗತ್ತಿನೆಲ್ಲೆಡೆ ಬಂಡವಾಳಶಾಹಿ ಪರ ಸರ್ಕಾರಗಳು ಜನಸಾಮಾನ್ಯರ, ಕಾರ್ಮಿಕರ ಬೇಡಿಕೆಗಳನ್ನು ಕಡೆಗಣಿಸಿ ಮಿಲಿಟರಿ ವೆಚ್ಚಗಳನ್ನು ಹೆಚ್ಚಿಸುತ್ತಿರುವುದು ಆಘಾತಕಾರಿಯಾಗಿದೆ. ವಿಶ್ವಶಾಂತಿಯು ಗಂಭೀರ ಅಪಾಯದಲ್ಲಿದೆ. ಮತ್ತೊಂದೆಡೆ ಜಾಗತಿಕವಾಗಿ ಎಲ್ಲಾ ದೇಶಗಳಲ್ಲೂ ಬೆಲೆ ಏರಿಕೆ, ಹಣದುಬ್ಬರ ತೀವ್ರವಾಗಿ ಹೆಚ್ಚಿತ್ತಿದೆ ಎಂದು ಎಐಯುಟಿಯುಸಿ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ ಕಳವಳ ವ್ಯಕ್ತಪಡಿಸಿದರು.

- Advertisement -

ವರ್ಲ್ಡ್ ಫೆಡರೇಶನ್ ಆಫ್ ಟ್ರೇಡ್ ಯೂನಿಯನ್ ಕರೆಯ ಮೇರೆಗೆ ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಯ ಧಾರವಾಡ ಜಿಲ್ಲಾ ಸಮಿತಿಯಿಂದ ನಗರದ ಸಿಬಿಟಿಯಲ್ಲಿ ವಿಶ್ವ ಶಾಂತಿಗಾಗಿ ಆಗ್ರಹಿಸಿ ಅಂತರಾಷ್ಟ್ರೀಯ ಸಂಘರ್ಷ ದಿನ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಸೆಪ್ಟೆಂಬರ್ 1, 1939 ವಿಶ್ವಯುದ್ಧ-2 ಪ್ರಾರಂಭವಾದ ಕರಾಳ ದಿನ. ಇದೇ ದಿನ ನಾಜಿ ಜರ್ಮನಿಯು ಪೋಲೆಂಡ್ ದೇಶದ ಮೇಲೆ ದಾಳಿ ನಡೆಸಿದ ಬಳಿಕ ಮಹಾಯುದ್ಧ ಪ್ರಾರಂಭವಾಗಿದ್ದು.ಈ ಮಹಾಯುದ್ಧದಲ್ಲಿ ಸಾಮ್ರಾಜ್ಯಶಾಹಿ,ಫ್ಯಾಸಿಸ್ಟ್-ನಾಜಿಗಳ ಯುದ್ಧದಾಹಕ್ಕೆ, ಲಕ್ಷಾಂತರ ಮುಗ್ಧ ಜನ,ದುಡಿಯುವ ಜನತೆ ಬಲಿಯಾಗಬೇಕಾಯಿತು.ಈ ಕರಾಳ ಘಟನೆಯ ನೆನಪಿನಲ್ಲಿ ಇಂದು ಡಬ್ಲುಎಫ್‌ಟಿಯು ಅಂತರರಾಷ್ಟ್ರಿಯ ಸಂಘರ್ಷ ದಿನವನ್ನಾಗಿ ವಿಶ್ವದಾದ್ಯಂತ ಆಚರಿಸಲು ಕರೆ ನೀಡಿದೆ. ಇಂದು ಅಮೇರಿಕದಂತಹ ವಿವಿಧ ಲಾಭ ಪಿಪಾಸು ಸಾಮ್ರಾಜ್ಯಶಾಹಿ-ಬಂಡವಾಳಶಾಹಿ ದೇಶಗಳ ಮಧ್ಯೆ ರಾಜಕೀಯ, ಆರ್ಥಿಕ ಮತ್ತು ಮಿಲಿಟರಿ ಘರ್ಷಣೆಗಳು ತೀವ್ರವಾಗಿ ಹೆಚ್ಚುತ್ತಿವೆ. ವಿವಿಧ ದೇಶಗಳ ಆರ್ಥಿಕತೆಯ ಮೇಲೆ ಹಿಡಿತ ಸಾಧಿಸಿ, ಲಾಭಕ್ಕಾಗಿ ಅಲ್ಲಿಯ ಜನಗಳನ್ನು ಕೊಳ್ಳೆಹೊಡೆಯಲು,ಶೋಷಣೆಗೀಡು ಮಾಡಲು ಹುನ್ನಾರ ಮಾಡುತ್ತಿವೆ. ಇವೆಲ್ಲದರ ಪರಿಣಾಮವಾಗಿ ಯುದ್ದೋನ್ಮಾದಗಳು ಹೆಚ್ಚುತ್ತಿವೆ” ಎಂದು ಆತಂಕ ವ್ಯಕ್ತಪಡಿಸಿದರು.

“ಶಿಕ್ಷಣ, ಆರೋಗ್ಯ, ಸಾಮಾಜಿಕ ಭದ್ರತೆಯ ಕೊರತೆ ತೀವ್ರವಾಗಿ ಕಾಡುತ್ತಿದೆ. ಆದರೆ ಜನಸಂಖ್ಯೆಯ ಶೇ.99ರಷ್ಟಿರುವ ಜನಸಾಮಾನ್ಯರಿಗೆ- ದುಡಿಯುವ ವರ್ಗಕ್ಕೆ ಬೇಕಾಗಿರುವುದು ಆರೋಗ್ಯ, ಶಿಕ್ಷಣ, ಉದ್ಯೋಗ, ಶೋಷಣೆರಹಿತ, ಶಾಂತಿಯುತ, ನೆಮ್ಮದಿಯ ಬದುಕು. ಇದಕ್ಕಾಗಿ ಎಲ್ಲ ದುಡಿಯುವ ಜನತೆ ಒಂದಾಗಿ ಹೋರಾಟಕ್ಕಿಳಿಯುವುದೊಂದೇ ದಾರಿ. ಆದ್ದರಿಂದ ವಿವಿಧ ದೇಶಗಳ ಮಧ್ಯೆ ಸಾಮ್ರಾಜ್ಯಶಾಹಿ ಯುದ್ಧಗಳು ಮತ್ತು ಅವುಗಳ ಹುನ್ನಾರವನ್ನು ಬಯಲಿಗೆಳೆದು ವಿಶ್ವದಾದ್ಯಂತ ಶೋಷಿತ ಜನಸಾಮಾನ್ಯರ ಪರ ಶಿಕ್ಷಣ, ಆರೋಗ್ಯ, ಸಾಮಾಜಿಕ ಭದ್ರತೆಗಳಿಗೆ ಹೆಚ್ಚಿನ ಅನುದಾನ ನೀಡಿ, ಶಸ್ತ್ರಾಸ್ತ್ರಗಳ-ನಾಟೋ ಹಾಗೂ ಸಾಮ್ರಾಜ್ಯಶಾಹಿ ಹಸ್ತಕ್ಷೇಪಗಳನ್ನು ಕೈಬಿಡಬೇಕೆಂದು” ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಸಮಿತಿ ಸದಸ್ಯ ರಿಯಾಜ್ ತಡಕೋಡ, ಮುಕ್ತುಮ್ ಶಾಪುರ, ಹನುಮಂತ ಹಾವೇರಿಪೇಟ್,ಅಬ್ದುಲ್ ಅಜೀಜ್ ದರೋಗಾ ಮುಂತಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...