ಮುದ್ದೇಬಿಹಾಳ ತಾಲೂಕು ಸಮ್ಮೇಳನ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಆಹ್ವಾನ; ಕಸಾಪ ನೆಡೆಗೆ ಸಾಹಿತಿಗಳ ವಿರೋಧ

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಫೆಬ್ರವರಿ 15ರಿಂದ ನಡೆಯುವ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗುವವರು ತಮ್ಮ ಸ್ವ-ವಿವರ ಸಹಿತ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದ್ದು, ಸಾಹಿತ್ಯ ಲೋಕಕ್ಕೆ ಸಲ್ಲದ ಇಂತಹ ಹೇಳಿಕೆಯನ್ನು ಪ್ರಜ್ಞಾವಂತ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ‌ ವಿಶ್ರಾಂತ ಪ್ರಾಧ್ಯಾಪಕ ಚಂದ್ರಗೌಡ ಕುಲಕರ್ಣಿ ಕರೆ ನೀಡಿದರು.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆಗೆ ತಿಳಿಸಿರುವ ಅವರು, “ಒಂದು ತಾಲೂಕಿನಲ್ಲಿ ಸಾಹಿತ್ಯಿಕ ಸಾಧನೆ ಮಾಡಿದ ಎಂಟರಿಂದ ಹತ್ತು ಮಂದಿ ಸಾಹಿತಿಗಳನ್ನು ಗುರುತಿಸಿ ಸೂಕ್ತವಾದವರನ್ನು ಆಯ್ಕೆ ಮಾಡುವುದು ಕರ್ನಾಟಕ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಜವಾಬ್ದಾರಿ. ಜಿಲ್ಲಾ ಅಧ್ಯಕ್ಷರೂ ಕೂಡಾ ಈ ಆಯ್ಕೆಯ ಜವಾಬ್ದಾರಿಯುತ ವ್ಯಕ್ತಿಗಳಾಗಿರುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ಸಾಹಿತ್ಯ ಸೇವೆಯ ಘನ ಉದ್ದೇಶದಿಂದ ಹುಟ್ಟಿದ ಈ ಸಂಸ್ಥೆ ಈವರೆಗೆ ನಡೆದುಬಂದ ಅರ್ಥವತ್ತಾತ್ ಪರಂಪರೆಯನ್ನು ಮುಂದುವರೆಸಬೇಕು. ತಾಲೂಕಿನ ಅಧ್ಯಕ್ಷರಾದಿಯಾಗಿ ಎಲ್ಲ ಪದಾಧಿಕಾರಿಗಳು ಜವಾಬ್ದಾರಿ ಹೊತ್ತು ಮುನ್ನಡೆಸಬೇಕು. ಆ ಪರಂಪರೆಯನ್ನು ಮುರಿದು ಅಧ್ಯಕ್ಷರಾಗಲು ಅರ್ಜಿ ಸಲ್ಲಿಸಲು ಸೂಚಿಸಿದರೆ, ಕೋರಿದರೆ ಗೌರವಯುತ ಸಾಹಿತಿಗಳಾರೂ ಸ್ಪಂದಿಸಲಾರರು” ಎಂದು ಆಕ್ಷೇಪ ವ್ಯಕ್ತಪಡಿಸಿದರು.

“ತಾಲೂಕು, ಜಿಲ್ಲೆ ಮತ್ತು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆ ಆ ಸಾಹಿತಿಗೆ ಗೊತ್ತಾಗದ ರೀತಿಯಲ್ಲಿ ನಡೆಯಬೇಕೇ ಹೊರತು ಅವರಿಂದ ಅರ್ಜಿ ಪಡೆದು ನಡೆಯುವಂಥದ್ದಲ್ಲ. ಈ ಹಿಂದೆ ಮುದ್ದೇಬಿಹಾಳ ತಾಲೂಕು ಸಮ್ಮೇಳನಗಳು ನಾಲ್ಕು ನಡೆದಿವೆ. ಆಗ ಯಾರಿಂದಲೂ ಅರ್ಜಿ ಕರೆದಿರಲಿಲ್ಲ. ಪರಿಷತ್ತಿನ ಪದಾಧಿಕಾರಿಗಳು, ತಾಲೂಕಿನ ಹಿರಿಯರು, ಸ್ಥಳೀಯ ಪಕ್ಷಾತೀತವಾದ ರಾಜಕಾರಣಿಗಳು ಒಮ್ಮತದಿಂದ ಆರಿಸಿ, ಆಯ್ಕೆಯಾದ ಸಾಹಿತಿಯವರನ್ನು ಮನೆವರೆಗೆ ಹೋಗಿ ಅಹ್ವಾನ ನೀಡಿದ ಉದಾಹರಣೆಗಳು ಇದೇ ತಾಲೂಕಿನಲ್ಲಿವೆ. ಈಗ ತಾಲೂಕಿನ ಐದನೆಯ ಸಮ್ಮೇಳನಕ್ಕೆ ಅರ್ಜಿ ಹಾಕುವ ಪ್ರಸಂಗ ಬಂದಿದೆಯೆಂದರೆ ಇದರಂತಹ ಅವಮಾನದ ಕೆಲಸ ಮತ್ತೊಂದಿಲ್ಲ. ದಯವಿಟ್ಟು ತಾಲೂಕು ಮತ್ತು ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಸ್ಥಳೀಯ ಶಾಸಕರು, ಸಂಸ್ಕೃತಿ ಪ್ರೇಮಿಗಳು ಕೆಟ್ಟ ಪರಂಪರೆಗೆ ಅವಕಾಶ ಕೊಡದೆ ಮೊದಲಿನ ಪರಂಪರೆಯನ್ನು ಮುಂದುವರೆಸಬೇಕು” ಎಂದು ಪ್ರಗತಿಪರ ಚಿಂತಕ ಅಬ್ದುಲ್ ರೆಹಮಾನ್ ಬಿದರಕುಂದಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಘಟಪ್ರಭಾ ನದಿಯಲ್ಲಿ ಅಕ್ರಮ ಮರಳುಗಾರಿಕೆ; ಸೂಕ್ತ ಕ್ರಮಕ್ಕೆ ರೈತ ಸಂಘ ಮನವಿ

“ಮುದ್ದೇಬಿಹಾಳ ಕಸಾಪ ಎರಡು ಜಿಲ್ಲಾ ಸಾಹಿತ್ಯ ಸಮ್ಮೇಳನ, ನಾಲ್ಕು ತಾಲೂಕು ಸಮ್ಮೇಳನ ನಡೆಸಿದ ಒಳ್ಳೆಯ ಹೆಸರನ್ನು ಪಡೆದಿದೆ. ಇದನ್ನು ಅರ್ಥಮಾಡಿಕೊಂಡು ಈಗ ತಾಲೂಕು ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡುವುದು ಸೂಕ್ತ. ಸಾಹಿತ್ಯಾಭಿಮಾನಿಗಳು ಸೂಕ್ತ ಈತಿಯಲ್ಲಿ ಆಯ್ಕೆಯಾಗುವಂತೆ ಪದಾಧಿಕಾರಿಗಳ ಮೇಲೆ ಒತ್ತಡ ಹೇರಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

ಚಿಕ್ಕಮಗಳೂರು | ನೂರಾರು ವರ್ಷ ಕೃಷಿ ಮಾಡಿದ್ದೇವೆ; ಕಾಯ್ದೆಯಿಂದ ಒಕ್ಕಲೆಬ್ಬಿಸಬೇಡಿ: ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿರಂಗನ್ ವರದಿ...