ಐಪಿಎಲ್ ಬೆಟ್ಟಿಂಗ್‌ | 1 ಕೋಟಿ ರೂ. ಕಳೆದುಕೊಂಡ ಪತಿ; ಪತ್ನಿ ಆತ್ಮಹತ್ಯೆ

Date:

Advertisements

ಐಪಿಎಲ್‌ ಕ್ರಿಕೆಟ್‌ ಟೂರ್ನಿ ಕಳೆದ ಕೆಲ ವರ್ಷಗಳಿಂದ ಕ್ರೀಡೆಯಾಗಿ ಮಾತ್ರವೇ ಉಳಿದಿಲ್ಲ. ಅದೊಂದು ಬೆಟ್ಟಿಂಗ್ ದಂಧೆಯ ಸರಕಾಗಿಯೂ ಮಾರ್ಪಟ್ಟಿದೆ. ಅಂತಹ ಬೆಟ್ಟಿಂಗ್ ಸರ್ಕಾರಿ ಉದ್ಯೋಗಿಯೊಬ್ಬರು ಕೋಟ್ಯಂತರ ರೂ. ಹಣ ಕಳೆದುಕೊಂಡಿದ್ದು, ಆತನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಬಸವ ಲೇಔಟ್‌ನಲ್ಲಿ ಮಾರ್ಚ್‌ 18ರಂದೇ ಘಟನೆ ನಡೆದಿದೆ. ತಡವಾಗಿ ಬೆಳಕಿಗೆ ಬಂದಿದೆ.

ಚಿತ್ರದುರ್ಗದ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್‌ ದರ್ಶನ್‌ ಬಾಬು ಎಂಬಾತ ಬೇಗನೆ ಹಣ ಗಳಿಸಬೇಕೆಂದು ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ. ಪರಿಣಾಮ, ಕೋಟ್ಯಂತರ ರೂ. ಸಾಲ ಮಾಡಿಕೊಂಡಿದ್ದಾರೆ.

Advertisements

ಆತ ಖಾಸಗಿ ಲೇವಾದೇವಿಗಾರರಿಂದ ಬರೋಬ್ಬರಿ ಸುಮಾರು 1 ಕೋಟಿ ರೂ. ಸಾಲ ಪಡೆದಿದ್ದರು. ತಾನು ಮಾಡಿರುವ ಸಾಲ ತೀರಿಸುವಂತೆ ಕುಟುಂಬಕ್ಕೂ ನಿತ್ಯ ಕಿರುಕುಳ ನೀಡುತ್ತಿದ್ದರು. ಲೇವಾದೇವಿಗಾರರ ಕಿರುಕುಳದಿಂದ ಬೇಸತ್ತ ಆತನ ಪತ್ನಿ ರಂಜಿತಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದರ್ಶನ್ ಮತ್ತು ರಂಜಿತಾ 2020ರಲ್ಲಿ ವಿವಾಹವಾಗಿದ್ದರು. ಅವರು ವಿವಾಹವಾಗಿ ಒಂದು ವರ್ಷದ ಬಳಿಕ, 2021ರಲ್ಲಿ ದರ್ಶನ್‌ಗೆ ಬೆಟ್ಟಿಂಗ್ ಚಟ ಇರುವುದಾಗಿ ರಂಜಿತಾಗೆ ಗೊತ್ತಾಗಿತ್ತು ಎಂದು ಪೋಲೀಸರು ತಿಳಿಸಿದ್ದಾರೆ.

ಗಮನಿಸಿ: ಬೇಗನೆ ಹಣ ಗಳಿಸಬೇಕೆಂದು ಲಾಟರಿ, ಬೆಟ್ಟಿಂಗ್‌, ಜೂಜಿನಂತಹ ಕೃತ್ಯಗಳಲ್ಲಿ ಭಾಗಿಯಾಗುವುದು ಕಾನೂನು ಬಾಹಿರ ಅಪರಾಧ. ಇವುಗಳಲ್ಲಿ ಭಾಗಿಯಾದರೆ, ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಮಿಗಿಲಾಗಿ, ಹಣ ಗಳಿಕೆಯ ಈ ಅಕ್ರಮ ಮಾರ್ಗಗಳು ನಮ್ಮ ಜೀವನನ್ನೇ ನಾಶ ಮಾಡುತ್ತದೆ. ಹಲವಾರು ಯುವಜನರು ಇಂತಹ ಕೃತ್ಯಗಳಲ್ಲಿ ಭಾಗಿಯಾಗಿ, ತಮ್ಮ ಬದುಕನ್ನೇ ಕಳೆದುಕೊಂಡಿದ್ದಾರೆ. ಲಾಟರಿ, ಬೆಟ್ಟಿಂಗ್, ಜೂಜಿನಿಂದ ದೂರವಿರಿ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X