ಮಂಡ್ಯ ಜಿಲ್ಲೆಯ ಮದ್ದೂರು ಗಣಪತಿ ವಿಸರ್ಜನೆ ವೇಳೆ ನಡೆದ ಗಲಾಟೆ ಮುಸ್ಲಿಮರ ಕಡೆಯಿಂದಲೇ ಪೂರ್ಣ ಪ್ರಮಾಣದಲ್ಲಿ ಆಗಿದೆ. ಆದ್ದರಿಂದ ಹಿಂದೂಗಳನ್ನು ಬಂಧಿಸಿಲ್ಲ, ಯಾರ ವಿರುದ್ಧವೂ ಪ್ರಕರಣ ದಾಖಲಿಸಿಲ್ಲ. 21 ಮಂದಿ ತಪ್ಪಿತಸ್ಥರನ್ನು ಬಂಧಿಸಲಾಗಿದೆ. ಘಟನೆ ಬಗ್ಗೆ ಕ್ರಮ ಕೈಗೊಂಡರೂ ಬಿಜೆಪಿಯವರು ಸಭೆ ನಡೆಸಿದರೆ ಅರ್ಥವಿದೆಯೇ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಪ್ರಶ್ನಿಸಿದರು.
ಚಿಕ್ಕಮಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆಯೆಂದು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿರುವ ರಾಜ್ಯ ಬಿಜೆಪಿ ಮುಖಂಡರಿಗೆ ನಾಚಿಕೆಯಾಗಬೇಕು. ಕಾಂಗ್ರೆಸ್ ಅಧಿಕಾರದಲ್ಲೇ ಗಲಭೆಯಾಗುತ್ತದೆ ಎಂಬುದು ಸುಳ್ಳು. ಬಿಜೆಪಿಯವರ ಆಡಳಿತದಲ್ಲಿ ಈ ರೀತಿ ಘಟನೆಗಳು ನಡೆದಿಲ್ಲವೇ? ಒಮ್ಮೆ ಹಿಂದೆ ತಿರುಗಿ ನೋಡಲಿ” ಎಂದು ಕಿಡಿಕಾರಿದರು.
ಈ ಸುದ್ದಿ ಓದಿದ್ದೀರಾ? ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ: ಸಿ ಟಿ ರವಿ ವಿರುದ್ಧ ಸುವೋ ಮೋಟೋ ಪ್ರಕರಣ ದಾಖಲು
“ಭದ್ರತಾ ವೈಫಲ್ಯವಾಗಿರುವ ಅನುಮಾನ ಇದೆ. ಈ ಗಲಯ ಹಿಂದೆ ಯಾರಿದ್ದಾರೆ ಎಂಬುದರ ಕುರಿತೂ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದರು.
“ನನಗಿರುವ ಮಾಹಿತಿ ಪ್ರಕಾರ ಸಾಮೂಹಿಕ ಗಣಪತಿ ಮೆರವಣಿಗೆಗೆ ನಾಲ್ಕೈದು ಗಣಪತಿಗಳು ಮಾತ್ರ ಇದ್ದವು. ಬಿಜೆಪಿ–ಜೆಡಿಎಸ್ನವರು ಬೆಂಗಳೂರಿನಿಂದ ಖರೀದಿ ಮಾಡಿ ತಂದು ಗಣಪತಿಗಳ ಸಂಖ್ಯೆಯನ್ನು ಜಾಸ್ತಿ ಮಾಡಿಕೊಳ್ಳುವ ಪ್ರಯತ್ನವನ್ನು ಮಾಡಿದರು” ಎಂದರು.