ಇದಾವುದು ಹೊಸ ಧರ್ಮ, ಸನಾತನ ಎಂದು ಪ್ರಶ್ನಿಸಿದ ಬಹುಭಾಷಾ ನಟ ಕಿಶೋರ್ ಕುಮಾರ್

Date:

  • ಒಳ್ಳೆಯ ಕೆಲಸ ಮಾಡುವುದಷ್ಟೇ ಧರ್ಮವೇ ಹೊರತು ಹಲವು ನಂಬಿಕೆಯ ಮೂಟೆಗಳಲ್ಲ
  • ಮನುಷ್ಯರನ್ನು ಮನುಷ್ಯರಾಗಿ ಕಾಣುವ, ಮನುಷ್ಯ ಧರ್ಮದವರಾಗುವ ಎಂದ ಕಿಶೋರ್

ಸನಾತನ ಧರ್ಮ ವಿವಾದ ದೇಶಾದ್ಯಂತ ಚರ್ಚೆ ಹುಟ್ಟುಹಾಕಿರುವ ಮಧ್ಯೆ ವಿವಾದಕ್ಕೆ ಎಂಟ್ರಿ ಕೊಟ್ಟಿರುವ ಬಹುಭಾಷಾ ನಟ ಕಿಶೋರ್ ಕುಮಾರ್, ಇದ್ಯಾವುದು ಹೊಸ ಧರ್ಮ? ಎಂದು ಪ್ರಶ್ನಿಸಿದ್ದಾರೆ.

- Advertisement -

ಈ ಬಗ್ಗೆ ಫೇಸ್‌ಬುಕ್ ನಲ್ಲಿ ಪೋಸ್ಟ್‌ ಹಾಕಿರುವ ಕಿಶೋರ್ ಕುಮಾರ್, “ಇಷ್ಟೂ ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ? ಹಾಗಾದರೆ ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ? ಸನಾತನ? ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿದ್ದ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರ ತಲೆ ಕಡಿಯಬೇಕು ಎಂದಿರುವ ಅಯೋಧ್ಯೆ ಸ್ವಾಮಿ ವಿರುದ್ಧ ಕಿಡಿಕಾರಿರುವ ನಟ, “ಮನುಷ್ಯರನ್ನು ಮನುಷ್ಯರಾಗಿ ಕಾಣುವ, ಮನುಷ್ಯ ಧರ್ಮದವರಾಗುವ, ವಿಶ್ವಮಾನವರಾಗುವ” ಎಂದು ಕರೆ ನೀಡಿದ್ದಾರೆ.

ಕೆಲಸ ಮಾಡಲು ಯೋಗ್ಯತೆಯಿಲ್ಲದೆ ಈ ಪದಗಳ ರಾಜಕೀಯ ಲಾಭ ಪಡೆಯಲು ತುದಿಗಾಲಲ್ಲಿ ನಿಂತಿರುವವರನ್ನು ಇದರ ಸಂಪೂರ್ಣ ನಿಖರ ಅರ್ಥ ಹೇಳಲು ಕೇಳಿಬಿಡಿ ಸಾಕು. ವಾಟ್ಸಾಪ್ ವಿಶ್ವವಿದ್ಯಾಲಯದಿಂದ ಹೊರಬಂದು, ಹಿಂದೂ ಪದದ ನಿಜ ಅರ್ಥ, ಮೂಲ, ಅದರ ಹಿಂದಿನ ದ್ವೇಷದ ರಾಜಕೀಯ ಪ್ರಚಲಿತವಾಗುತ್ತಿದ್ದಂತೆ ಅದನ್ನು ಬಿಟ್ಟು ಸನಾತನ ಪದ ಹಿಡಿದ ದ್ವೇಷದ ವರ್ತಕರು ಅದನ್ನೂ ರಾಜಕೀಯ ಲಾಭಕ್ಕಾಗಿ ಬಳಸಿದ್ದೇ ಈ ಅನವಶ್ಯಕ ಚರ್ಚೆಗೆ ಕಾರಣ ಎಂದು ಕಿಶೋರ್ ಕುಮಾರ್ ತಿಳಿಸಿದ್ದಾರೆ.

“ರಾಜಕೀಯದ ದೃಷ್ಟಿಯಿಂದ ಉದಯನಿಧಿಯವರ ಭಾಷಾ ಪ್ರಯೋಗದ ತೀಕ್ಷ್ಣತೆ ಸ್ವಲ್ಪ ಕಡಿಮೆಯಾಗಬಹುದಿತ್ತು ಎನಿಸಿದರೂ ಅವರು ಖಂಡಿಸಿದ್ದು ಇವರ ದ್ವೇಷದ, ಜಾತಿವಾದದ, ಅಸ್ಪೃಶ್ಯತೆಯ, ಅಸಮಾನತೆಯ ವೈದಿಕ ರಾಜಕೀಯವು ಕಿಡ್ನಾಪ್ ಮಾಡಿದ ಸನಾತನವನ್ನು, ಆದಿ ಅಂತ್ಯವಿಲ್ಲದ ಸನಾತನ ಪದವನ್ನಲ್ಲವೆಂಬುದು ಸ್ಪಷ್ಟ” ಎಂದು ಬಹುಭಾಷಾ ನಟ ಕಿಶೋರ್ ಕುಮಾರ್ ಉಲ್ಲೇಖಿಸಿದ್ದಾರೆ.

ಇದನ್ನು ಓದಿದ್ದೀರಾ? ಹೊಸ ಸಂಸತ್ ಕಟ್ಟಡ ಉದ್ಘಾಟನೆಗೆ ರಾಷ್ಟ್ರಪತಿ ಆಹ್ವಾನಿಸದ್ದು ಜಾತಿ ತಾರತಮ್ಯದ ಉತ್ತಮ ಉದಾಹರಣೆ: ಉದಯನಿಧಿ

“ಉದಯನಿಧಿಯವರ ಹೇಳಿಕೆಯನ್ನು ಸನಾತನಿಗಳ ಮಾರಣಹೋಮಕ್ಕೆ ಹೋಲಿಸಿದ ಇವರ ದ್ವೇಷದ ವಕ್ತಾರನಿಗೆ ಇವರ ಪಕ್ಷದ ಪ್ರಧಾನಿ ಊರಲ್ಲೆಲ್ಲ ಕಾಂಗ್ರೆಸ್ ಮುಕ್ತವೆಂದು ಕೂಗಾಡುತ್ತ ತಿರುಗಿದಾಗ ಕಾಂಗ್ರೆಸಿಗರ ಮಾರಣಹೋಮಕ್ಕೆ ಕರೆ ನೀಡಿದ್ದರೇ ಕೇಳಬೇಕಲ್ಲ” ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧವೂ ನಟ ಕಿಡಿಕಾರಿದ್ದಾರೆ.

“ಧರ್ಮವೆನ್ನುವುದು ಅಧರ್ಮದ ವಿರುದ್ಧ ಪದವಾದರೆ, ಅಧರ್ಮವೆನ್ನುವುದು ಕೆಟ್ಟ ಕೆಲಸವೆಂದಾದರೆ, ಒಳ್ಳೆಯ ಕೆಲಸ ಮಾಡುವುದಷ್ಟೇ ಧರ್ಮವೇ ಹೊರತು ಹಲವು ನಂಬಿಕೆಯ ಮೂಟೆಗಳಲ್ಲ. ಈ ದಾರಿತಪ್ಪಿಸುವ ಧರ್ಮಾಂಧ ರಾಜಕೀಯದಲ್ಲಿ ನಮ್ಮ ಜ್ವಲಂತ ಸಮಸ್ಯೆಗಳು, ಜಾತಿವಾದದ, ರಾಜಕೀಯ, ಆರ್ಥಿಕ, ಸಾಮಾಜಿಕ ಕ್ರೌರ್ಯದ, ಅಸಮಾನತೆಯ ಸಮಸ್ಯೆಗಳೆಲ್ಲ ಕೊಚ್ಚಿ ಹೋಗುವ ಮುನ್ನ ಎಚ್ಚರಗೊಳ್ಳುವ” ಎಂದು ಬಹುಭಾಷಾ ನಟ ಕಿಶೋರ್ ಕುಮಾರ್ ಜನತೆಗೆ ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....