ಜುಲೈನಲ್ಲಿ ಇಸ್ರೋ ಚಂದ್ರಯಾನ-3: ಉಡಾವಣೆಗೆ ಸಜ್ಜಾದ ಬಾಹ್ಯಾಕಾಶ ನೌಕೆ

Date:

Advertisements

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಜುಲೈ ಮಧ್ಯದಲ್ಲಿ ಉಡಾವಣೆ ಮಾಡಲು ನಿರ್ಧರಿಸಿದೆ. ಬಹುಶಃ ಜುಲೈ 12 ರಂದು ಚಂದ್ರಯಾನ-3ರ ರಾಕೆಟ್ ಉಡ್ಡಯನವಾಗುವ ನಿರೀಕ್ಷೆಯಿದೆ. ಬಾಹ್ಯಾಕಾಶ ನೌಕೆಯು ಆರ್ಬಿಟರ್, ಸಾಫ್ಟ್ ಲ್ಯಾಂಡರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ಅನ್ನು ಹೊತ್ತೊಯ್ಯಲಿದೆ ಎಂದು ಇಸ್ರೋ ಹೇಳಿದೆ.

ಚಂದ್ರಯಾನ-2 ಮಿಷನ್ ಸಮಯದಲ್ಲಿ ಸಾಫ್ಟ್ ಲ್ಯಾಂಡರ್ ವಿಫಲವಾಗಿತ್ತು. ಅದು ಸಾಫ್ಟ್‌ವೇರ್ ದೋಷಕ್ಕೆ ಕಾರಣವಾಗಿತ್ತು. ಇದೀಗ, ಚಂದ್ರಯಾನ-3 ಸಾಫ್ಟ್ ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್‌ನ ಸಾಮರ್ಥ್ಯಗಳನ್ನು ಪ್ರದರ್ಶಿಸುವ ಮತ್ತೊಂದು ಪ್ರಯತ್ನವಾಗಿದೆ.

“ಮಿಷನ್‌ಅನ್ನು ಜುಲೈ 12ರಂದು ಉಡಾಯಿಸುವ ಗುರಿಯನ್ನು ಹೊಂದಿದ್ದೇವೆ. ಬಾಹ್ಯಾಕಾಶ ನೌಕೆಯು ಆಗಸ್ಟ್ 23 ರಂದು ಚಂದ್ರನ ದಕ್ಷಿಣ ಧ್ರುವದ ಬಳಿ ಇಳಿಯಲಿದೆ. ನೌಕೆಯು ಜುಲೈ 13ರಂದು ಉಡಾವಣೆಗೊಳ್ಳುವ ರಷ್ಯಾದ ಲೂನಾ-25ರೊಂದಿಗೆ ಸ್ಪರ್ಧಿಸಲಿದೆ” ಎಂದು ಇಸ್ರೋ ಅಧಿಕಾರಿಗಳು ತಿಳಿಸಿದ್ದಾರೆ.

Advertisements

“ಚಂದ್ರಯಾನ-3 ಉಡಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. ಮಾರ್ಚ್ ಅಂತ್ಯದಲ್ಲಿ ಎಲ್ಲ ಅಗತ್ಯ ಪರೀಕ್ಷೆಗಳನ್ನು ಪೂರ್ಣಗೊಂಡಿವೆ. ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಚಂದ್ರನ ಮೇಲ್ಮೈಯ ಮಾದರಿಗಳನ್ನು ಸಂಗ್ರಹಿಸಲು ಸಜ್ಜುಗೊಂಡಿದೆ. ಚಂದ್ರನಲ್ಲಿನ ಭೂಕಂಪನ ಚಟುವಟಿಕೆ, ಪರಿಸರ ಮತ್ತು ಧಾತುರೂಪ ಕುರಿತ ಮಾಹಿತಿಗಳನ್ನು ಸಂಗ್ರಹಿಸುತ್ತದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮೇ 21ಕ್ಕೆ ‘ವಿಶ್ವ ದಿನದ ಅಂತ್ಯ’ | ಇಲ್ಲಿದೆ ಆಚರಣೆಯ ಹಿಂದಿರುವ ಅಸಲೀ ಕಾರಣ

“ಕುತೂಹಲಕಾರಿಯಾಗಿ, ಮೂರನೇ ಮಿಷನ್ ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ಅನ್ನು ಹೊಂದಿರುತ್ತದೆ. ಪ್ರೊಪಲ್ಷನ್ ಮಾಡ್ಯೂಲ್ ಸಂವಹನ ಉಪಗ್ರಹವಾಗಿಯೂ ಕಾರ್ಯನಿರ್ವಹಿಸುತ್ತದೆ” ಎಂದು ಹೇಳಿದ್ದಾರೆ. ಚಂದ್ರಯಾನ-2 ಆರ್ಬಿಟರ್, ಲ್ಯಾಂಡರ್ ಮತ್ತು ರೋವರ್ ಅನ್ನು ಹೊಂದಿತ್ತು.

“ಚಂದ್ರಯಾನ-3 ಚಂದ್ರನ ಮೇಲೆ ಬಾಹ್ಯಾಕಾಶ ನೌಕೆಯನ್ನು ಇಳಿಸುವಲ್ಲಿ ಇಸ್ರೋದ ಸಾಮರ್ಥ್ಯಗಳನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ. ನಿರ್ದಿಷ್ಟವಾಗಿ ಪ್ರಸ್ತಾವಿತ ಚಂದ್ರನ ಧ್ರುವ ಪರಿಶೋಧನೆ ಮಿಷನ್‌ನಲ್ಲಿ ಜಪಾನ್‌ನ ಸಹಯೋಗ ನೀಡಿದೆ. ಉಭಯ ದೇಶಗಳು ಚಂದ್ರನ ವಸ್ತುಗಳ ಸಂಗ್ರಹ, ಮಾದರಿ ಮತ್ತು ವಿಶ್ಲೇಷಣೆಯಲ್ಲಿ ಕೆಲಸ ಮಾಡಲಿವೆ. ಲೂನಾರ್ ಪೋಲಾರ್ ಎಕ್ಸ್‌ಪ್ಲೋರೇಶನ್ ಮಿಷನ್ ಅಥವಾ ಚಂದ್ರಯಾನ-4, 2025ರ ವೇಳೆಗೆ ಉಡಾವಣೆಯಾಗುವ ನಿರೀಕ್ಷೆಯಿದೆ. ಅಲ್ಲಿ ಲ್ಯಾಂಡರ್ ಮತ್ತು ರೋವರ್ ಚಂದ್ರನ ದಕ್ಷಿಣ ಧ್ರುವವನ್ನು ಅನ್ವೇಷಿಸಲು ಪ್ರಯತ್ನಿಸುತ್ತವೆ” ಎಂದು ಇಸ್ರೋ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X