ಜನರ ಧ್ವನಿಯಾಗಬೇಕಾದದ್ದು ಪತ್ರಕರ್ತರ ಸಾಮಾಜಿಕ ಜವಾಬ್ದಾರಿ: ರಾಜ್‌ದೀಪ್ ಸರ್ದೇಸಾಯಿ

Date:

Advertisements

‘ರಾಜಕಾರಣಿಗಳ ಸುದ್ದಿಗಿಂತ ಜನರು ಪ್ರತಿನಿತ್ಯ ಎದುರಿಸುತ್ತಿರುವ ಸಮಸ್ಯೆಗಳನ್ನು ಮುನ್ನೆಲೆಗೆ ತರಬೇಕಾದದ್ದು ಪತ್ರಕರ್ತರಾದವರ ಕರ್ತವ್ಯ. ಪತ್ರಕರ್ತರು ತಮ್ಮ ಈ ಕರ್ತವ್ಯದ ಮೂಲಕವೇ ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಸಾಮಾಜಿಕ ಜವಾಬ್ದಾರಿ ಮೆರೆಯಬೇಕು’ ಎಂದು ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅಭಿಪ್ರಾಯಿಸಿದರು.

ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ತಮ್ಮ ಹೊಸ ಪುಸ್ತಕ ‘2024: The Election that Surprised India’ ಬಿಡುಗಡೆ ಕಾರ್ಯಕ್ರಮದಲ್ಲಿ ನಡೆಸಿದ ಸಂವಾದದ ವೇಳೆ ಅವರು ಮಾತನಾಡಿದರು.

‘ಸತ್ಯ ಎಷ್ಟೇ ಕಹಿಯಾಗಿದ್ದರೂ ಅದನ್ನು ಹೇಳಲೇಬೇಕಿದೆ. ಕೋವಿಡ್ ಸಂದರ್ಭದಲ್ಲಿ ಕೇವಲ 4 ಲಕ್ಷ ಮೃತಪಟ್ಟಿದ್ದಾರೆಂದು ಸರ್ಕಾರದ ವರದಿಗಳು ಹೇಳುತ್ತಿವೆ. ಕೆಲವೊಂದು ಖಾಸಗಿ ಸಂಸ್ಥೆಗಳು 40 ಲಕ್ಷ ಮೃತಪಟ್ಟರೆಂದು ವರದಿ ಮಾಡಿವೆ. ನಿಜಕ್ಕೂ ಎಷ್ಟು ಜನ ಮೃತಪಟ್ಟಿದ್ದಾರೆ ಎಂಬುದನ್ನು ಅರಿತುಕೊಳ್ಳುವ ಹಕ್ಕು ಈ ದೇಶದ ಪ್ರತಿಯೊಬ್ಬ ಜವಾಬ್ದಾರಿಯುವ ನಾಗರಿಕರಿಗೆ ಇದೆ. ಅದನ್ನು ಪತ್ರಕರ್ತ ಪ್ರಶ್ನಿಸಿದರೆ, ಆತ ಭಾರತ ವಿರೋಧಿ ಹೇಗಾಗುತ್ತಾನೆ?’ ಎಂದು ರಾಜ್‌ದೀಪ್ ಪ್ರಶ್ನಿಸಿದರು.

Advertisements

‘ನಮ್ಮ ದೇಶದ ವೈವಿಧ್ಯತೆಯೇ ಸುಭದ್ರವಾದ ಪಂಚಾಗ. 140 ಕೋಟಿ ಜನರು ವಾಸಿಸುತ್ತಿರುವುದೇ ದೊಡ್ಡ ಸಂಪತ್ತು. ಮುಂಬೈನ ಧಾರಾವಿಯ ಸ್ಲಂನಲ್ಲಿ ವಾಸಿಸುತ್ತಿರುವ ಜನರಿಗೂ, ಉದ್ಯಮಿ ಅಂಬಾನಿಗೂ ಇರುವ ಹಕ್ಕು ಮತದಾನವಾಗಿದೆ. ಸಂವಿಧಾನ ನಮಗೆ ನೀಡಿರುವ ಮತದಾನದ ಹಕ್ಕಿನ ಮೂಲಕ 2024ರ ಲೋಕಸಭಾ ಚುನಾವಣೆಯು ಈ ದೇಶದ ಜನರಿಗೆ ಏನು ಬೇಕು ಎಂಬುದನ್ನು ಸ್ಪಷ್ಟವಾಗಿ ತಿಳಿಸಿದರು. ಆ ಮೂಲಕ ‘ಚಾರ್ ಸೌ ಪಾರ್’ ಎನ್ನುತ್ತಿದ್ದವರನ್ನೂ ಸೇರಿಸಿ ಎಲ್ಲರ ರಾಜಕೀಯ ಲೆಕ್ಕಾಚಾರವು ಜನರು ಉಲ್ಟಾಪಲ್ಟಾ ಮಾಡಿದರು. 2024ರ ಚುನಾವಣಾ ಫಲಿತಾಂಶವೇ ನನ್ನನ್ನು ಈ ಪುಸ್ತಕ ಬರೆಯಲು ಪ್ರೇರೇಪಿಸಿತು’ ಎಂದು ತಿಳಿಸಿದರು.

‘ವಾಟ್ಸಾಪ್‌, ಫೇಸ್‌ಬುಕ್ ನಮ್ಮ ಜೀವನದ ನೆಮ್ಮದಿಯನ್ನು ಹಾಳುಗೆಡವುತ್ತಿದೆ. ಈ ಬಗ್ಗೆ ವಿದ್ಯಾರ್ಥಿ, ಯುವಕರು ಜಾಗೃತರಾಗಬೇಕಿದೆ. ನೈಜ ಯುನಿವರ್ಸಿಟಿಗಳಿಗಿಂತ ವಾಟ್ಸಾಪ್ ಯುನಿವರ್ಸಿಟಿಯಲ್ಲಿ ಕೋಟ್ಯಂತರ ಜನರಿದ್ದಾರೆ. ಎಐ ತಂತ್ರಜ್ಞಾನ ಬಂದಿರುವ ಇಂದಿನ ಆಧುನಿಕ ಸಮಯದಲ್ಲಿ ಸುಳ್ಳುಸುದ್ದಿಗಳ ಬಗ್ಗೆ ಜನರು ಜಾಗರೂಕರಾಗಿರಬೇಕು. ಪುಸ್ತಕ ಓದುವವರಾಗಬೇಕು. ಪುಸ್ತಕದಿಂದ ಜ್ಞಾನ ವೃದ್ಧಿಯಾಗುತ್ತದೆ’ ಎಂದು ರಾಜ್‌ದೀಪ್ ಸರ್ದೇಸಾಯಿ ತಿಳಿಸಿದರು.

ಇದನ್ನು ಓದಿದ್ದೀರಾ? ನಾಲ್ಕೈದು ವರ್ಷ ಬದುಕಿರುತ್ತೇನೆ; ನೀರಿಗಾಗಿ ಹೋರಾಟ ಮಾಡುತ್ತೇನೆ: ದೇವೇಗೌಡ

ಸಂವಾದ ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತೆ ಮಾಯಾ ಶರ್ಮಾ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಪ್ರೆಸಿಡೆನ್ಸಿ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ. ನಿಸಾರ್ ಅಹ್ಮದ್‌, ಕುಲಪತಿ ಪ್ರೊ.ವಿಜಯನ್ ಇಮ್ಯಾನುಯೆಲ್, ಉಪಕುಲಪತಿಗಳಾದ ಡಾ. ವಿದ್ಯಾ ಶೆಟ್ಟಿ,ಡಾ. ಸಮೀರುದ್ದೀನ್ ಖಾನ್, ರಿಜಿಸ್ಟ್ರಾರ್ ಡಾ. ಸಮೀನಾ ನೂರ್ ಅಹ್ಮದ್, ಡಾ. ನಫೀಸಾ ಅಹ್ಮದ್, ಲಿಟ್ಲ್ ಫ್ಲವರ್ ಶಾಲೆಯ ಚೇರ್‌ಮೆನ್ ಇಕ್ಬಾಲ್ ಅಹ್ಮದ್ ಅಹ್ಮದ್ ಸೇರಿದಂತೆ ಪ್ರೆಸಿಡೆನ್ಸಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X