ಕರಾವಳಿಯ ‘ಆಭರಣ’ ಚಿನ್ನದ ಮಳಿಗೆಗಳಿಗೆ ಬೆಳ್ಳಂಬೆಳಗ್ಗೆ ಐಟಿ ದಾಳಿ: ಹಲವೆಡೆ ತಪಾಸಣೆ

Date:

Advertisements

ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ‘ಆಭರಣ’ ಚಿನ್ನದ ಮಳಿಗೆಗಳಿಗೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವೆಡೆ ತಪಾಸಣೆ ನಡೆಸುತ್ತಿದ್ದಾರೆ.

ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಮಂಗಳೂರು, ಪುತ್ತೂರು ಸೇರಿದಂತೆ ಹಲವೆಡೆ ‘ಆಭರಣ’ ಚಿನ್ನದ ಮಳಿಗೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ‘ಆಭರಣ’ ಚಿನ್ನದ ಮಳಿಗೆಗಳ ಮೇಲೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇನ್ನೋವಾ ಕಾರಿನಲ್ಲಿ ಬೆಳ್ಳಂಬೆಳಗ್ಗೆ ಆಗಮಿಸಿದ್ದ ಅಧಿಕಾರಿಗಳು, ಮಂಗಳೂರಿನ ಶಿವಭಾಗ್, ಉಡುಪಿಯ ಕಾರ್ಪೊರೇಶನ್ ಬ್ಯಾಂಕ್ ಬಳಿ ಇರುವ ಶೋರೂಂ ಸೇರಿದಂತೆ ಎಲ್ಲ ಕಡೆಗೆ ದಾಳಿ ನಡೆಸಿದ್ದು, ಪ್ರವೇಶದ್ವಾರವನ್ನು ಬಂದ್ ಮಾಡಿ, ದಾಖಲೆಗಳನ್ನು ಐಟಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Advertisements

Abharan Jewellery

ಸುಭಾಷ್ ಕಾಮತ್ ಹಾಗೂ ಮಹೇಶ್ ಕಾಮತ್ ಮಾಲೀಕತ್ವದ ಆಭರಣ ಜ್ಯುವೆಲ್ಲರಿ, ರಾಜ್ಯದಲ್ಲಿ ಒಟ್ಟು 14 ಮಳಿಗೆಗಳು ಹಾಗೂ ಗೋವಾದಲ್ಲಿ ಒಂದು ಮಳಿಗೆ ಹೊಂದಿದೆ. ಎಲ್ಲ ಕಡೆಗಳಲ್ಲೂ ಏಕ ಕಾಲದಲ್ಲಿ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

1935ರಲ್ಲಿ ದಿವಂಗತ ಬುರ್ಡೆ ಸದಾನಂದ ಕಾಮತ್ ಎಂಬುವವರು ‘ನಿಯೋ ಜ್ಯುವೆಲ್ಲರಿ ಮಾರ್ಟ್’ ಎಂಬ ಸಂಸ್ಥೆಯನ್ನು ಉಡುಪಿಯಲ್ಲಿ ಪ್ರಾರಂಭಿಸಿದ್ದರು. ಆ ಬಳಿಕ ಸಂಸ್ಥಾಪಕರ ಪುತ್ರ ಮಧುಕರ್ ಎಸ್.ಕಾಮತ್ ಎಂಬವರು ಉಡುಪಿಯಲ್ಲಿ ‘ಆಭರಣ ಜ್ಯುವೆಲರ್ಸ್’ ಅನ್ನು ಪ್ರಾರಂಭಿಸಿದರು.

ಅಂದಿನಿಂದ ಮಧುಕರ್ ಎಸ್. ಕಾಮತ್ ಅವರ ಮಕ್ಕಳಾದ ಸುಭಾಸ್ ಎಂ.ಕಾಮತ್ ಮತ್ತು ಮಹೇಶ್ ಎಂ. ಕಾಮತ್ ಮತ್ತು ಅವರದ್ದೇ ಕುಟುಂಬಸ್ಥರು ಚಿನ್ನದ ಉದ್ಯಮವನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಇದೀಗ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ‘ಆಭರಣ ಜ್ಯುವೆಲ್ಲರ್ಸ್‌’ ಮಳಿಗೆಗಳು ತಲೆ ಎತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X