ಯಾವುದೇ ಪ್ರಕರಣವಿರಲಿ, ಸರ್ಕಾರ ಯಾರ ರಕ್ಷಣೆಗೂ ಮುಂದಾಗುವುದಿಲ್ಲ: ಸದನಕ್ಕೆ ಸಿಎಂ ಭರವಸೆ

Date:

Advertisements
  • ಈ ಪ್ರಕರಣ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ
  • ಸರ್ಕಾರ ಯಾರ ರಕ್ಷಣೆಗೂ ನಿಂತಿಲ್ಲ: ಸಿದ್ದರಾಮಯ್ಯ

ಜೈನಮುನಿ ಹತ್ಯೆ, ಟಿ ನರಸೀಪುರದಲ್ಲಿ ನಡೆದ ಹತ್ಯೆ ಹಾಗೂ ಕಲಬುರ್ಗಿ ಪ್ರಕರಣ ಸೇರಿ ಯಾವುದೇ ಪ್ರಕರಣವಿರಲಿ, ಸರ್ಕಾರ ಯಾರ ರಕ್ಷಣೆಗೂ ಮುಂದಾಗುವುದಿಲ್ಲ. ನಮ್ಮ ಪೊಲೀಸರಿಂದಲೇ ಎಲ್ಲ ಆಯಾಮಗಳಿಂದಲೂ ತನಿಖೆ ಮಾಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಮಂಗಳವಾರ ನಡೆದ ಏಳನೇ ದಿನದ ಕಲಾಪದಲ್ಲಿ ಜೈನಮುನಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕರು ಸದನದಲ್ಲಿ ಪಟ್ಟು ಹಿಡಿದಾಗ ಮಧ್ಯ ಪ್ರವೇಶಿಸಿ ಮಾತನಾಡಿದ ಅವರು, “ಯಾವುದೇ ಪ್ರಕರಣ ಇರಲಿ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ನಮ್ಮ ಪೊಲೀಸರು ಸಮರ್ಥರಿದ್ದಾರೆ. ಪ್ರಾಮಾಣಿಕವಾಗಿ ಯಾರೇ ತಪ್ಪಿತಸ್ಥರು ಇದ್ದರೂ ಅವರು ಎಷ್ಟೇ ದೊಡ್ಡವರು ಆಗಿರಲಿ ಅವರಿಗೆ ಶಿಕ್ಷೆ ಕೊಡಿಸುತ್ತೇವೆ” ಎಂದು ಭರವಸೆ ನೀಡಿದರು.

ಪರಮೇಶ್ವರ್‌ ಶ್ಲಾಘನೆ

Advertisements

ಚಿಕ್ಕೋಡಿಯ ನಂದಿಪರ್ವತದ ಜೈನಮುನಿ ಕಾಮಕುಮಾರ ನಂದಿ ಹತ್ಯೆ ಪ್ರಕರಣದಲ್ಲಿ ನಮ್ಮ ಪೊಲೀಸರ ಶ್ರಮವನ್ನು ನಾವು ಶ್ಲಾಘಿಸುತ್ತೇವೆ. ಕೇವಲ ಆರು ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿ, ಜೈನಮುನಿ ಅವರ ದೇಹವನ್ನು ಪತ್ತೆ ಮಾಡಿದ್ದಾರೆ. ಅವರ ಕಾರ್ಯವನ್ನು ನಾನು ನಮ್ಮ ಸರ್ಕಾರ ಶ್ಲಾಘಿಸಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ತಿಳಿಸಿದರು.

ಜೈನಮುನಿ ಹತ್ಯೆ, ಟಿ ನರಸೀಪುರದ ಯುವ ಬ್ರಿಗೇಡ್‌ ಕಾರ್ಯಕರ್ತನ ಹತ್ಯೆ ವಿಚಾರವಾಗಿ ನಡೆದ ಚರ್ಚೆಯಲ್ಲಿ ಪ್ರತಿಪಕ್ಷದ ನಾಯಕರಿಗೆ ಉತ್ತರಿಸಿದ ಗೃಹ ಸಚಿವರು, “ನಮ್ಮ ಪೊಲೀಸರು ಯಾವುದೇ ಮಾಹಿತಿ ಮುಚ್ಚಿಡುವ ಪ್ರಯತ್ನ ಮಾಡಿಲ್ಲ. ಅನೇಕ ವಿಚಾರಗಳು ಪೊಲೀಸರ ಬಳಿ ಇವೆ. ತನಿಖೆ ನಡೆಯುತ್ತಿರುವುದರಿಂದ ಅದನ್ನು ಸದನದಲ್ಲಿ ಹೇಳಲು ಸಾಧ್ಯವಿಲ್ಲ. ಅಪರಾಧಿಗಳಿಗೆ ಶಿಕ್ಷೆ ಕೊಡುತ್ತೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಜೈನಮುನಿ ಹತ್ಯೆ ಪ್ರಕರಣ | ಜುಲೈ 17ರವರೆಗೆ ಆರೋಪಿಗಳು ಪೊಲೀಸ್ ಕಸ್ಟಡಿಗೆ

“ಜೈನಮುನಿಯ ಬರ್ಬರ ಹತ್ಯೆ ನಾವು ಎಂದೂ ಕಂಡಿರಲಿಲ್ಲ. ನಿಜಕ್ಕೂ ನೋವು ತಂದಿದೆ. ಜೈನಮುನಿ ಸರ್ವವನ್ನೂ ತ್ಯಾಗ ಮಾಡಿ ಧರ್ಮದ ಸೇವೆಗೆ ಅರ್ಪಿಸಿಕೊಂಡವರನ್ನು ಭೂಮಿ ಮೇಲೆ ಬದುಕಲು ಬಿಡಲ್ಲ ಎಂದರೆ ಸಮಾಜ ಯಾವ ಕಡೆಗೆ ಹೋಗುತ್ತಿದೆ? ನಿಜಕ್ಕೂ ನನಗೆ ಭಯವಾಗುತ್ತಿದೆ” ಎಂದು ಪರಮೇಶ್ವರ್‌ ತಿಳಿಸಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, “ಜೈನ ಮುನಿಯ ಹತ್ಯೆ ಪ್ರಕರಣದಲ್ಲಿ ಕೆಲವರನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ. ಹೀಗಾಗಿ ನಾವು ಸಿಬಿಐಗೆ ಈ ಪ್ರಕರಣ ವಹಿಸುವಂತೆ ಕೋರುತ್ತಿದ್ದೇವೆ. ನಾವು ನಮ್ಮ ನಿಲುವಿನಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ನಾವು ಧರಣಿ ಕೈಗೊಳ್ಳುತ್ತೇವೆ” ಎಂದು ಸದನದ ಬಾವಿಗಿಳಿದರು.

ಸಭಾಧ್ಯಕ್ಷರು ಮಧ್ಯಪ್ರವೇಶಿಸಿ, ”ಬೆಳಗ್ಗೆಯಿಂದ ನೋಡುತ್ತಿರುವೆ, ಬಿಜೆಪಿ ಸದಸ್ಯರು ಸದನ ನಡೆಯಲು ಬಿಡುತ್ತಿಲ್ಲ. ಬರೀ ನೆಪಗಳನ್ನು ಹುಡುಕಿಕೊಂಡು ಸದನದ ಘನತೆ ಹಾಳು ಮಾಡುತ್ತಿದ್ದಾರೆ” ಎಂದು ಕಟುವಾಗಿಯೇ ಮಾತನಾಡಿ, ಸದನವನ್ನು 15 ನಿಮಿಷ ಮುಂದೂಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X