ಜೈನಮುನಿ ಹತ್ಯೆ ಪ್ರಕರಣ | ನಾವ್ಯಾರೂ ಈ ಸಮಾಜದಲ್ಲಿ ಬದುಕಲು ಅರ್ಹರಿಲ್ಲ: ಬೊಮ್ಮಾಯಿ

Date:

  • ರಾಜ್ಯ ಸರ್ಕಾರ ಜೈನಮುನಿ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲಿ
  • ಜೈನಮುನಿ ಹತ್ಯೆ ಪೂರ್ವ ನಿಯೋಜಿತ ಕೊಲೆ: ಬೊಮ್ಮಾಯಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ ಎಂಬುದನ್ನು ತೋರಿಸಲು ಸರ್ಕಾರ ಜೈನಮುನಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಇಲ್ಲದಿದ್ದರೆ ಸಮಾಜಘಾತಕ ಶಕ್ತಿಗಳು ತಾವು ಏನು ಮಾಡಿದರೂ ರಕ್ಷಣೆಗೆ ಇದ್ದಾರೆ ಎಂದು ಭಯವಿಲ್ಲದೆ ಓಡಾಡುತ್ತಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

- Advertisement -

ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪವಾದ ಸಂದರ್ಭದಲ್ಲಿ ಮಾತನಾಡಿದ ಅವರು, “ಸಾಮಾನ್ಯವಾಗಿ ಕೊಲೆಗಡುಕ ಕೊಲೆ ಮಾಡಿ ಓಡಿ ಹೋಗುತ್ತಾರೆ. ಈ ಕೊಲೆ ಮಾಡಿದ ವ್ಯಕ್ತಿ ಅವರನ್ನು ಪೈಶಾಚಿಕವಾಗಿ ಹತ್ಯೆ ಮಾಡಿದ್ದಾರೆ.
ಜೈನ ಮುನಿಗಳು ಸಾಮಾನ್ಯವಾಗಿ ಯಾರ ಮನಸಿಗೂ ನೋವಾಗದಂತೆ ಮಾತನಾಡುತ್ತಾರೆ‌. ಯಾರ ಬಗ್ಗೆಯೂ ಕೆಟ್ಟದಾಗಿ ಮಾತನಾಡುವುದಿಲ್ಲ. ಇಂತಹ ಮುನಿಗಳ ಹತ್ಯೆಯಾಗಿದ್ದು ನೋಡಿದರೆ ನಾವ್ಯಾರೂ ಈ ಸಮಾಜದಲ್ಲಿ ಬದುಕಲು ಅರ್ಹರಿಲ್ಲ ಅನಿಸುತ್ತದೆ” ಎಂದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪೂರ್ವ ನಿಯೋಜಿತ ಕೊಲೆಯಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಇದು ಕೋಲ್ಡ್ ಬ್ಲಡೆಡ್ ಮರ್ಡರ್ ಆಗಿದೆ. ಅವರು ಕರೆಂಟ್ ಶಾಕ್ ಕೊಟ್ಟು ಹತ್ಯೆ ಮಾಡಲು ಎಷ್ಟು ಸಮಯ ಆಲೋಚನೆ ಮಾಡಿರಬಹುದು. ಇದು ಮುನಿಗಳಿಗೆ ಹತ್ತಿರ ಇದ್ದವರೇ ಮಾಡಿದ್ದಾರೆ. ಹಣಕಾಸಿನ ವ್ಯವಹಾರಕ್ಕೂ ಮುನಿಗೂ ಯಾವುದೇ ಸಂಬಂಧ ಇಲ್ಲ. ಮುನಿಗಳ ಹತ್ಯೆ ಯಾಕೆ ಆಯಿತು ಅಂತ ಪೊಲಿಸರು ಹೇಳುತ್ತಿಲ್ಲ. ಪ್ರಕರಣ ಬೇಗ ಭೇದಿಸಿದ್ದು ಸರಿ ಆದರೆ, ಪೊಲಿಸರು ಅಷ್ಟು ಬೇಗ ಪ್ರಕರಣ ಮುಕ್ತಾಯ ಮಾಡುವ ರೀತಿ ಮಾತನಾಡಿದ್ದಾರೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಸೌಜನ್ಯ ಪ್ರಕರಣ | ಅಲ್ಲಿ ಎಲ್ಲೆಲ್ಲೂ ಸೌಜನ್ಯಳೇ ಕಾಣಸಿಗುತ್ತಾಳೆ…

“ಜೈನಮುನಿ ಅವರು ಕೊಲೆ ಮಾಡಿ ಅಲ್ಲಿಂದ ಸಾಗಿಸಲು ಕೇವಲ ಇಬ್ಬರು ಮಾತ್ರ ಇರಲು ಸಾಧ್ಯವಿಲ್ಲ. ಅಲ್ಲಿಂದ ಸಾಗಿಸಲು ಯಾವ ವಾಹನ ಬಳಸಿದರು. ಅವರು ಹೆಣ ತುಂಡು ಹೇಗೆ ಮಾಡಿದರು. ಜೈನ ಧರ್ಮ ಯಾವುದೇ ಪ್ರಚೋದನೆ ಮಾಡುವುದಿಲ್ಲ. ಅಂತಹ ಮುನಿಗಳ ಹತ್ಯೆಯಾಗಿದೆ ಅಂದರೆ ಇದರ ಹಿಂದೆ ದೊಡ್ಡ ಶಕ್ತಿ ಇದೆ” ಎಂದು ಅನುಮಾನ ವ್ಯಕ್ತಪಡಿಸಿದರು.

ಕಲಬುರ್ಗಿಯಲ್ಲಿ ಮರಳು ಮಾಫಿಯಾದವರು ಹೆಡ್ ಕಾನ್ ಸ್ಟೇಬಲ್ ಹತ್ಯೆ ಮಾಡುತ್ತಾರೆ. ನಂಜನಗೂಡಿನಲ್ಲಿ ನಡೆದ ಹತ್ಯೆ, ಬೀದರ್ ನಲ್ಲಿ ಹಣ ವಸೂಲಿಗೆ ಏಜೆಂಟ್ ಗೆ ಒತ್ತಡ ಇದೆ ಅಂತ ಆರೋಪ ಮಾಡಿದ್ದಾನೆ. ಈ ಬಗ್ಗೆ ಎಫ್ ಐ ಆರ್ ಕೂಡ ಆಗಿದೆ. ಕಲಬುರ್ಗಿಯಲ್ಲಿ ಒಬ್ಬ ಪೊಲಿಸ್ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಷ್ಟು ಬೇಗ ಹದಗೆಟ್ಟಿದೆ. ಜೈನ ಮುನಿಗಳ ಸಾವಿಗೆ ನ್ಯಾಯ ಕೊಡಬೇಕಾದರೆ, ಈ ವಿಚಾರದಲ್ಲಿ ಆಕಡೆ ಈ‌ಕಡೆ ಅನ್ನದೆ ಸರ್ಕಾರ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದೆ ಅಂತ ತೋರಿಸಬೇಕಾದರೆ ಸಿಬಿಐ ತನಿಖೆಗೆ ಒಪ್ಪಿಸಬೇಕು.‌ ಇಲ್ಲದಿದ್ದರೆ ರಾಜ್ಯದ ಜನತೆ ಪ್ರತಿಭಟನೆ ನಡೆಸುತ್ತಾರೆ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...