ಉಡುಪಿ | ಸಹೋದರತೆಯೇ ಪ್ರವಾದಿ ಮುಹಮ್ಮದ್ (ಸ) ರ ಸಂದೇಶ – ಮೌಲಾನ ಅಬ್ದುಲ್ ಘನಿ ಜಾಮಯೀ

Date:

ಮುಸ್ಲಿಮರು ಆರಾಧನೆಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತಾರೆಯೋ ಅಷ್ಟೇ ಪ್ರಾಮುಖ್ಯತೆ ಸಮಾಜಮುಖಿ ಕೆಲಸಕ್ಕೆ, ಸೌಹಾರ್ದತೆಗೆ, ಸಹೋದರತೆಗೆ, ಮಾನವೀಯತೆಗೆ ಕೊಡಬೇಕು. ದೇವ ಭಯ ಯಾವ ಮನುಷ್ಯನಲ್ಲಿ ಹೆಚ್ಚು ಇರುತ್ತದೋ, ಆತನು ದೇವನ ಬಳಿ ಹೆಚ್ಚು ಶ್ರೇಷ್ಠ ವ್ಯಕ್ತಿಯಾಗಿ ಪರಿಗಣಿಸಲ್ಪಡುತ್ತಾನೆ. ಓರ್ವ ಮುಸ್ಲಿಮನು ಸಮಾಜದಲ್ಲಿರುವ ಇತರ ಜನರ ಹಿತಾಕಾಂಕ್ಷಿ ಆಗಿರಬೇಕು. ಅವರ ಕಷ್ಟ ಸುಖದಲ್ಲಿ ಭಾಗಿಯಾಗಿರಬೇಕು. ಅವರೊಂದಿಗೆ ಉತ್ತಮ ಸಂಭಂದ ಇಟ್ಟುಕೊಳ್ಳಬೇಕು. ಇದು ಕೂಡಾ ಆರಾಧನೆ ಆಗಿರುತ್ತದೆ. ಎಂದು ತೋನ್ಸೆ ಅಬುಲ್ಲೈಸ್ ಮಸ್ಜಿದ್ ನ ಖತೀಬ್ ವ ಇಮಾಮರಾದ ಮೌಲಾನ ಅಬ್ದುಲ್ ಘನಿ ಜಾಮಯೀ ಯವರು ಹೇಳಿದರು.

- Advertisement -

ಅವರು ಕಾಪು, ಚಂದ್ರನಗರದ ಅಹ್ಯಾ ಉಲ್ ಉಲೂಮ್ ಮದ್ರಸಾದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಕಾಪು ವರ್ತುಲವು ಪ್ರವಾದಿ ಮುಹಮ್ಮದ್ (ಸ) ಜೀವನ ಮತ್ತು ಸಂದೇಶ ಎಂಬ ಶೀರ್ಷಿಕೆಯ ಮೇಲೆ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತಾಡಿದರು. ಮುಂದುವರಿಯುತ್ತಾ ಅವರು, ಪ್ರಸಕ್ತ ಸಮಾಜದಲ್ಲಿ ಕುರ್ ಆನ್ ನ ಬಗ್ಗೆ, ಪ್ರವಾದಿ ಮುಹಮ್ಮದ್ (ಸ ) ರ ಬಗ್ಗೆ, ಮುಸ್ಲಿಮರ ಬಗ್ಗೆ ತಪ್ಪು ಕಲ್ಪನೆ ಇರಲು ಕಾರಣ, ನಾವು ಅವರಿಗೆ ಇದರ ಪರಿಚಯ ಮಾಡಿ ಕೊಡದೆ ಇರುವುದು, ಅವರಿಂದ ಅಂತರ ಕಾಪಾಡಿಕೊಂಡು ಇರುವುದು, ಅವರೊಂದಿಗೆ ಬೆರೆಯದಿರುವುದು ಆಗಿರುತ್ತದೆ. ಆದ್ದರಿಂದ ನಾವು ಸಮಾಜದಲ್ಲಿರುವ ದೇಶಬಾಂಧವ ಸಹೋದರರರೊಂದಿಗೆ ಉತ್ತಮ ಸಂಪರ್ಕ ಇಟ್ಟು ಕೊಳ್ಳಬೇಕು ಮತ್ತು ಉತ್ತಮವಾಗಿ ವ್ಯವಹರಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಜಮಾಅತೆ ಇಸ್ಲಾಮೀ ಹಿಂದ್ ಕಾಪು ವರ್ತುಲದ ಅಧ್ಯಕ್ಷರಾದ ಅನ್ವರ್ ಅಲಿ ಯವರು, ಪ್ರವಾದಿ ಮುಹಮ್ಮದ್ (ಸ) ರವರನ್ನು ಸ್ರಷ್ಟಿಕರ್ತನು ಕೇವಲ ಮುಸ್ಲಿಮರಿಗೆ ಮಾತ್ರ ಪ್ರವಾದಿಯಾಗಿ ನೇಮಿಸಿಲ್ಲ. ಬದಲಾಗಿ ಅವರನ್ನು ವಿಶ್ವದ ಸಕಲ ಲೋಕದ ಜನರಿಗಾಗಿ ಪ್ರವಾದಿಯನ್ನಾಗಿ ನೇಮಿಸಿರುವನು. ಮುಸ್ಲಿಮ್ ಆಗಿದ್ದವನು ಸೃಷ್ಟಿಕರ್ತನು ಅವತ್ತೀರ್ಣ ಗೊಳಿಸಿದ ಕುರ್ ಆನ್ ನ ಆದೇಶವನ್ನು ಮತ್ತು ಪ್ರವಾದಿ ಮುಹಮ್ಮದ್ (ಸ) ರವರು ತೋರಿಸಿಕೊಟ್ಟ ಮಾರ್ಗದರ್ಶನದಂತೆ ಜೀವಿಸುತ್ತಾ ಸಮಾಜದಲ್ಲಿ ಜನರಿಗೆ ಮಾದರಿಯಾಗಿರಬೇಕು ಎಂದು ಪ್ರಾಸ್ತವಿಕ ಭಾಷಣ ಮಾಡಿ ಸ್ವಾಗತಿಸಿದರು. ಸಯ್ಯದ್ ಝಹೀನ್ ರವರ ಕುರ್ ಆನ್ ಪಠಣದೊಂದಿಗೆ ಸಭೆಯು ಪ್ರಾರಂಭವಾಯಿತು. ಮುಹಮ್ಮದ್ ಶರೀಫ್ ಶೇಕ್ ರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...