- ಕಳೆದ ತಿಂಗಳು ರೂಹಿಣಿ-ರೂಪ ನಡುವೆ ಸಂಘರ್ಷ ನಡೆದಿತ್ತು
- ರೂಪ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದ ರೂಹಿಣಿ
ಕಳೆದ ತಿಂಗಳು ರಾಜ್ಯದ ಹೆಸರಾಂತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಾದ ರೋಹಿಣಿ ಸಿಂದೂರಿ ಮತ್ತು ಡಿ ರೂಪ ನಡುವೆ ಸಾಮಾಜಿಕ ಜಾಲಾತಾಣದಲ್ಲಿ ನಡೆದಿದ್ದ ಸಂಘರ್ಷಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಷಯವಾಗಿ ಐಪಿಎಸ್ ಅಧಿಕಾರಿ ಡಿ ರೂಪಾ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂದೂರಿ ಅವರು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ “ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ತಮ್ಮ ಫೇಸ್ಬುಕ್ ಖಾತೆಯಿಂದ ಫೆ. 14 ಮತ್ತು 19 ರಂದು ನನ್ನ ವಿರುದ್ಧ ಕೀಳಾಗಿ ಬರೆದು ಆರೋಪ ಮಾಡಿದ್ದಾರೆ. ಇದರಿಂದ ಹಲವು ಮಾಧ್ಯಮಗಳು ನನ್ನ ಚಾರಿತ್ಯಕ್ಕೆ ವಿರುದ್ಧವಾದ ವಿಷಯಗಳನ್ನು ಪ್ರಸಾರ ಮಾಡಿರುವ ಕಾರಣ ನನ್ನ ವ್ಯಕ್ತಿತ್ವಕ್ಕೆ ಧಕ್ಕೆಯುಂಟು ಮಾಡಿದೆ” ಎಂದು ದೂರಿದ್ದರು.
“ನನ್ನ ತೇಜೋವಧೆ ಮಾಡುವ ಉದ್ದೇಶದಿಂದ ಡಿ ರೂಪಾ ಅವರು ಈ ಕೃತ್ಯವೆಸಗಿದ್ದಾರೆ. ಇದರಿಂದ ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದ್ದಲ್ಲದೇ ಮಾನಸಿಕವಾಗಿ ನೋವುಂಟಾಗಿದೆ” ಎಂದು ಆರೋಪಿಸಿ 1 ಕೋಟಿ ರೂ. ಪರಿಹಾರ ಹಾಗೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಪ್ರಕರಣ ದಾಖಲಿಸಿದ್ದರು.
ಇದರ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯವು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ಗೆ ಸಮನ್ಸ್ ಜಾರಿ ಮಾಡಿ ಆದೇಶ ಹೊರಡಿಸಿದೆ.