ಉದ್ಯೋಗ ಮಾಹಿತಿ | ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ಹುದ್ದೆ; ಅರ್ಜಿ ಸಲ್ಲಿಕೆಗೆ ಫೆ.3 ಕೊನೆದಿನ

Date:

Advertisements

ಕರ್ನಾಟಕ ಲೋಕೋಪಯೋಗಿ ಇಲಾಖೆ(ಕೆಪಿಎಸ್‌ಸಿ)ಯಲ್ಲಿ ಖಾಲಿಯಿರುವ ಸಹಾಯಕ ಕಾರ್ಯಪಾಲಕ ಎಂಜಿನಿಯರ್(ಗ್ರೇಡ್‌-1) ಗ್ರೂಪ್‌-ಎ ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನಿಸಿದ್ದು, 2024ರ ಸೆಪ್ಟೆಂಬರ್‌ 18ರಂದು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿಗಳನ್ನು ಸ್ವೀಕಾರ ಮಾಡಲಾಗಿತ್ತು. ಆದರೆ ಇದೀಗ ಇದೇ ಉದ್ಯೋಗಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಮತ್ತೆ ಅರ್ಜಿಗಳನ್ನು ಆಹ್ವಾನ ಮಾಡಿದೆ.

ಕೆಪಿಎಸ್‌ಸಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್(ಗ್ರೇಡ್‌-1) ಗ್ರೂಪ್‌-ಎ 30 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಇದರಲ್ಲಿ 29 ಹುದ್ದೆಗಳು ಮುಕ್ತ ಸ್ಪರ್ಧೆ ಅಭ್ಯರ್ಥಿಗಳು ಹಾಗೂ 01 ಕೆಲಸಕ್ಕೆ ಸೇವಾನಿರತ(ಈಗಾಗಲೇ ಕೆಲಸದಲ್ಲಿ ಇರುವವರು) ಸ್ಪರ್ಧೆ ಅಭ್ಯರ್ಥಿಯನ್ನು ಭರ್ತಿ ಮಾಡಲಾಗುತ್ತಿದೆ. ಈ ಉದ್ಯೋಗಗಳನ್ನು ವರ್ಗೀಕರಣ ಮಾಡಲಾಗಿದೆ.

ಹುದ್ದೆಗಳ ವರ್ಗೀಕರಣ

Advertisements

ಸಾಮಾನ್ಯ ವರ್ಗ- 13
ಪರಿಶಿಷ್ಟ ಜಾತಿ- 05
ಪರಿಶಿಷ್ಟ ಪಂಗಡ- 02
ಪ್ರವರ್ಗ1- 01
ಪ್ರವರ್ಗ-2ಎ- 05
ಪ್ರವರ್ಗ-2ಬಿ- 01
ಪ್ರವರ್ಗ-3ಎ- 01
ಪ್ರವರ್ಗ-3ಬಿ- 01
ಸೇವಾನಿರತ (ಎಸ್​ಸಿ)- 01
ಒಟ್ಟು- ಉದ್ಯೋಗಗಳು- 30

ವಿದ್ಯಾರ್ಹತೆ : ಎಂಜಿನಿಯರಿಂಗ್ ಪದವಿ-ಸಿವಿಲ್ ಎಂಜಿನಿಯರ್, ಕನ್​ಸ್ಟ್ರಕ್ಷನ್ ಟೆಕ್ನಲಾಜಿ, ಬಿಲ್ಡಿಂಗ್ ಅಂಡ್ ಕನ್‌ಸ್ಟ್ರಕ್ಷನ್ ಟೆಕ್ನಾಲಜಿ, ಸಿವಿಲ್ ಟೆಕ್ನಾಲಜಿ ಕನ್‌ಸ್ಟ್ರಕ್ಷನ್ ಟೆಕ್ನಾಲಜಿ, ಕನ್‌ಸ್ಟ್ರಕ್ಷನ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಜಿಯೋಮೆಕಾನಿಕ್ಸ್‌ ಮತ್ತು ಸ್ಟ್ರಕ್ಚರ್ಸ್‌, ಸ್ಟ್ರಕ್ಚರಲ್ ಅಂಡ್ ಫೌಂಡೇಷನ್ ಎಂಜಿನಿಯರಿಂಗ್, ಸ್ಟ್ರಕ್ಚರಲ್ ಎಂಜಿನಿಯರಿಂಗ್ ಹಾಗೂ ಕನ್‌ಸ್ಟ್ರಕ್ಷನ್ ಪದವಿ ಸೇರಿದಂತೆ ಇವುಗಳಲ್ಲಿ ಯಾವುದಾದರೂ ಒಂದನ್ನು ಪೂರ್ಣಗೊಳಿಸಿರಬೇಕು.

ಮಾಸಿಕ ವೇತನ ಶ್ರೇಣಿ- ₹83,700 ದಿಂದ ₹1,55,200

ಇತರೆ ಅರ್ಹತೆ :

ಈ ಸುದ್ದಿ ಓದಿದ್ದೀರಾ? ಗದಗ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿವಿಧ ಹುದ್ದೆಗಳು: ಜನೆವರಿ 27 ರಂದು ನೇರ ಸಂದರ್ಶನ

ಸೇವಾನಿರತ ಹುದ್ದೆ: ಸೇವಾನಿರತ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್(ಗ್ರೇಡ್-1) ಅಥವಾ ಸಹಾಯಕ ಎಂಜಿನಿಯರ್(ಗ್ರೇಡ್‌-2) ಅಥವಾ ಕಿರಿಯ ಎಂಜಿನಿಯರ್ ಆಗಿರಬೇಕು. ಯಾವುದೇ ಕೇಡರ್‌ನಲ್ಲಿ ಕನಿಷ್ಠ 5 ವರ್ಷ ಕೆಲಸ ಮಾಡಿರಬೇಕು. ಇಲಾಖೆ ವಯಸ್ಸು ನಿಗದಿಪಡಿಸಿಲ್ಲ. ಸೇವಾನಿರತ ಅಭ್ಯರ್ಥಿ, ಸಹ ಮುಕ್ತ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಇರುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ₹600, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹300, ಎಸ್​ಸಿ/ಎಸ್​ಟಿ, ಪ್ರ-01, ಮಾಜಿ ಸೈನಿಕ, ವಿಶೇಷ ಚೇತನರಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ

2025ರ ಜನವರಿ 20ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಫೆಬ್ರವರಿ 3 ರೊಳಗೆ ಅರ್ಜಿ ಸಲ್ಲಿಸಬೇಕಾಗಿ ಲೋಕೋಪಯೋಗಿ ಇಲಾಖೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X