ಚಿಕ್ಕಮಗಳೂರು | ಕೆಎಸ್‌ಆರ್‌ಟಿಸಿ ಡಿಸಿಗೆ ಸಿಬ್ಬಂದಿಯಿಂದಲೇ  ಚಾಕು ಇರಿಯಲು ಯತ್ನ: ಜೀವಾಪಾಯದಿಂದ ಪಾರು

Date:

Advertisements

ಸಾರಿಗೆ ಸಿಬ್ಬಂದಿಯೇ ಕೆಎಸ್‌ಆರ್‌ಟಿಸಿ ಡಿಸಿಗೆ ಚಾಕು ಇರಿಯಲು ಯತ್ನಿಸಿರುವ ಘಟನೆ ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಗುರುವಾರ ನಡೆದಿದೆ.

ಘಟನೆಯಿಂದ ಗಾಯಗೊಂಡಿರುವ ಕೆಎಸ್‌ಆರ್‌ಟಿಸಿ ಡಿಸಿಯಾಗಿರುವ ಜಗದೀಶ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಾಕುವಿನಿಂದ ದಾಳಿ ಮಾಡಿರುವ ಸಾರಿಗೆ ಸಿಬ್ಬಂದಿಯನ್ನು ಜೂನಿಯರ್ ಅಸಿಸ್ಟೆಂಟ್ ರಿತೇಶ್ ಎಂದು ಗುರುತಿಸಲಾಗಿದೆ. ಗಾಯಗೊಳಿಸಿದ ನಂತರ ಸ್ಥಳದಿಂದ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.

Advertisements
1001650180
ಆರೋಪಿ ಸಿಬ್ಬಂದಿ ರಿತೇಶ್ ಹಾಗೂ ಗಾಯಗೊಂಡ ಅಧಿಕಾರಿಯ ಕೈಬೆರಳು

ರಿತೇಶ್ ಹಾಜರಾತಿ ಸರಿಯಿಲ್ಲ ಎಂದು ಕುಟುಂಬವನ್ನ ಕರೆಸಿ ಜಗದೀಶ್ ಕುಮಾರ್ ಅವರು ಕೌನ್ಸೆಲಿಂಗ್ ಮಾಡಿದ್ದರು. ಕುಟುಂಬದವರ ಮನವಿಯ ಮೇರೆಗೆ ಚಿಕ್ಕಮಗಳೂರಿನಿಂದ ಬೇಲೂರಿಗೆ ರಿತೇಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಇದರಿಂದ ಕುಪಿತಗೊಂಡಿದ್ದ ರಿತೇಶ್, ಇಂದು ಸಂಜೆ 7.30ರ ವೇಳೆಗೆ ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ.

ಚಾಕುವಿನಿಂದ ದಾಳಿ ಮಾಡುತ್ತಿದ್ದಾಗ ಕೈ ಅಡ್ಡ ಕೊಟ್ಟಿದ್ದರಿಂದ ಭಾರೀ ಅನಾಹುತ ತಪ್ಪಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ‌. ಘಟನೆಯಿಂದಾಗಿ ಕೆ.ಎಸ್.ಆರ್.ಟಿ.ಸಿ. ಡಿಸಿ ಜಗದೀಶ್ ಕುಮಾರ್ ಅವರ ಎಡಗೈನ ಎರಡು ಬೆರಳುಗಳಿಗೆ ಗಾಯವಾಗಿದೆ.

ಚಿಕ್ಕಮಗಳೂರು ಸರ್ಕಾರಿ ಬಸ್ ನಿಲ್ದಾಣದ ಒಳಗೆಯೇ ಈ ಘಟನೆ ನಡೆದಿರುವುದು ಅಧಿಕಾರಿಗಳಿಗೆ ಆಘಾತ ಉಂಟು ಮಾಡಿದೆ. ಚಾಕುವಿನಿಂದ ಹಲ್ಲೆ ನಡೆಸಿದ ಬಳಿಕ ಸಿಬ್ಬಂದಿ ರಿತೇಶ್ ನಾಪತ್ತೆಯಾಗಿದ್ದು, ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕೊಲೆಗಡುಕರಿಗೆ ಗಲ್ಲು ಶಿಕ್ಷೆಯನ್ನು ವಿದಿಸದಿದ್ದರೆ ಅಂತಹ ಸರ್ಕಾರದ ಆಡಳಿತದಲ್ಲಿ ನಾಗರೀಕರಿಗೆ ನೆಮ್ಮದಿ, ಶಾಂತಿ ಶಾಶ್ವತವಾಗಿ ಲಭಿಸದು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X