ಚಿಕ್ಕಮಗಳೂರು | ಜಮೀನು ವಿವಾದ; ಎರಡು ಕುಟುಂಬಗಳ ನಡುವೆ ಮಾರಾಮಾರಿ

Date:

Advertisements

ಜಮೀನು ವಿವಾದದಲ್ಲಿ ಎರಡು ಕುಟುಂಬಗಳ ನಡುವೆ ಜಗಳವಾಗಿದ್ದು, ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಚಟ್ಟನಪಾಳ್ಯ ಗ್ರಾಮದ ಶಿವಣ್ಣ ಎಂಬುವರ ಹೆಸರಿನಲ್ಲಿ 3/4 ಎಕರೆ ಅಡಿಕೆ ತೋಟವಿದ್ದು, ಅದರ ಪಹಣಿ ಮಾತ್ರ ಆತನ ಸಹೋದರನ ಹೆಸರಿನಲ್ಲಿತ್ತು. ಶಿವಣ್ಣ ಕುಟುಂಬ 1960ರಿಂದಲೂ ತೋಟದ ಫಸಲನ್ನು ಕೋಯ್ದು ಮಾರಾಟ ಮಾಡಿ, ಜೀವನ ನಡೆಸುತ್ತಿತ್ತು.

ಆದರೆ, ಖಾತೆ ಮತ್ತು ಪಹಣಿ ವಿಚಾರದಲ್ಲಿ ಶಿವಣ್ಣ ಮತ್ತು ಅವರ ಸಹೋದರನ ಕುಟುಂಬದ ನಡುವೆ ಜಗಳ ನಡೆಯುತ್ತಲೇ ಇತ್ತು. ಜಗಳವು ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಆ ಬಳಿಕವೂ, ಜಗಳ ಮುಂದುವರೆದಿತ್ತು.

Advertisements

ಇತ್ತೀಚೆಗೆ, ಶಿವಣ್ಣನ ಕುಟುಂಬಸ್ಥರು ಅಡಿಕೆ ಕೊಯ್ಯುವಾಗ ತೋಟದಲ್ಲೇ ಎರಡು ಕುಟುಂಬದ ನಡುವೆ ಜಗಳವಾಗಿದೆ. ಜಗಳ ತಾರಕಕ್ಕೇರಿ, ಮಾರಕಾಸ್ತ್ರ ಹಿಡಿದು ಹೊಡೆದಾಡಿಕೊಂಡಿದ್ದಾರೆ.

ಶಿವಣ್ಣನ ಸಹೋದರನ ಮಗ ಮಚ್ಚು ಹಿಡಿದು ಹಲ್ಲೆಗೆ ಯತ್ನಿಸಿದ್ದಾನೆ. ಶಿವಣ್ಣ ಕೂಡ ಕುಡುಗೋಲು ಹಿಡಿದು ಗಲಾಟೆ ಮಾಡಿದ್ದಾರೆ. ಸಖರಾಯಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X