ಕಲಬುರಗಿ | ಟೆಕ್ನಿಕಲ್ ಅಸಿಸ್ಟಂಟ್‌ ವಿಕಾಸ ಸವದಿ ವರ್ಗಾವಣೆ ರದ್ದತಿಗೆ ಆಗ್ರಹ

Date:

Advertisements

ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕು ಪಂಚಾಯತಿಯ ಟೆಕ್ನಿಕಲ್ ಅಸಿಸ್ಟಂಟ್‌ (ಟಿ.ಎ) ಆಗಿ ಕಾರ್ಯನಿರ್ವಾಹಿಸುತ್ತಿರುವ ವಿಕಾಸ ಸವದಿ ಅವರ ವರ್ಗಾವಣೆಯನ್ನು ರದ್ದುಗೊಳಿಸಿ, ಅವರು ಶಹಾಬಾದ ತಾಲೂಕಿನಲ್ಲೇ ಕೆಲಸ ಮುಂದುವರೆಸುವಂತೆ ಮಾಡಬೇಕೆಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (AIAWU) ಒತ್ತಾಯಿಸಿದೆ.

ಕಲಬುರಗಿ ಜಿಲ್ಲಾ ಪಂಚಾಯತಿ ಎದುರು ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಕಾರ್ಯನಿರ್ವಾಕ ಅಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಶಹಾಬಾದ ತಾಲೂಕಿನಲ್ಲಿ ಒಟ್ಟು ಏಳು ಗ್ರಾಮ ಪಂಚಾಯತಿಗಳಲ್ಲಿ ಮನರೇಗಾ ಯೋಜನೆ ಸಮರ್ಪಕವಾಗಿ ಜಾರಿ ಮಾಡುವಲ್ಲಿ ಟಿ.ಎ ವಿಕಾಸ ಸದವಿ ಅವರು ಶ್ರಮಿಸಿದ್ದಾರೆ. ಗುಣಮಟ್ಟದ ಕಾಮಗಾರಿಗಳನ್ನು ಮಾಡಿಸುವಲ್ಲಿ ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಾಸಿದ್ದಾರೆ. ಬಡ ಕೂಲಿ ಕಾರ್ಮಿಕರ ಪರವಾಗಿ ಕೆಲಸ ಮಾಡಿದ್ದಾರೆ. ಅವರನ್ನು ವರ್ಗಾವಣೆ ಮಾಡಬಾರದು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

“ಕೆಲ ಚುನಾಯಿತ ಪ್ರತಿನಿಧಿಗಳು ಹಾಗೂ ರಾಜಕಾರಣಿಗಳು ಅವರನ್ನು ಉದೇಶ ಪೂರ್ವಕಾವಾಗಿ ವರ್ಗಾವಣೆ ಮಾಡಿಸಲು ಮುಂದಾಗಿದ್ದಾರೆ. ವಿಕಾಸ್ ಅವರು ಮನರೇಗಾ ಯೋಜನೆಯ ಹಣ ಲೂಟಿ ಮಾಡಲು, ಬೇನಾಮಿ ಹೆಸರಿನಲ್ಲಿ ಹಣ ಪಾವತಿ ಮಾಡಲು ನಿರಾಕರಿಸಿದ ಕಾರಣಕ್ಕೆ ಅವರ ವಿರುದ್ಧ ಸುಳ್ಳು ಆರೋಪ ಮಾಡಿ, ರಾಜಕೀಯ ಒತ್ತಡ ತಂದು ವರ್ಗಾವಣೆ ಮಾಡಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

Advertisements

ಪ್ರತಿಭಟನೆಯಲ್ಲಿ ಚಂದ್ರಪ್ಪ ಹೊಸ್ಕರ್, ಶೇಖಮ ಕುರಿ, ಮಲಮ್ಮ ಕೂಡ್ಲಿ, ಕಾಶಿನಾಥ ಬಂಡಿ, ಸುನಿತಾ ರಂಗ,  ಶ್ರೀದೇವಿ ಬಟಗೇರ ಬಿ, ಗುರುನಂದೇಶ್, ಸಂತೋಷ ಕುಮಾರ್, ಹಣಮಂತ ಕೂಟರಕಿ, ಕವಿತಾ ಬಟಗೇರ.ಕೆ, ಪಾರ್ವತಿ ತರನಳಿ, ಸುನಂದಾ ತರನಳಿ, ಶಿಲ್ಪಾ ಮಲ್ಲು ಮುಗಳನಾಗವ್ ಇನ್ನಿತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X