ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಮೋಟಾರು ವಾಹನ ವಿಮೆ ಹಾಗೂ ಕೌಟುಂಬಿಕ ಪ್ರಕರಣಗಳು ಸೇರಿದಂತೆ ಒಟ್ಟು 179 ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.
ಹೈಕೋರ್ಟ್ ಪೀಠದ ನ್ಯಾಯಾಧೀಶರಾದ ನ್ಯಾ. ಅಶೋಕ್ ಎಸ್. ಕಿಣಗಿ ಹಾಗೂ ನ್ಯಾ. ಶೃಂಗೇಶ್ ಎಂ. ಅವರ ಸಮ್ಮುಖದಲ್ಲಿ ನಡೆದ ಲೋಕ ಅದಾಲತ್ನಲ್ಲಿ ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ವಿಲೇವಾರಿ ಮಾಡಲಾಯಿತು.
ಇತ್ಯರ್ಥಗೊಂಡ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಒಟ್ಟು ₹4.93 ಕೋಟಿ ಪರಿಹಾರ ನೀಡುವಂತೆ ನ್ಯಾಯಾಧೀಶರು ಆದೇಶಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್
ಲೋಕ ಅದಾಲತ್ ಮೂಲಕ ಪ್ರಕರಣಗಳನ್ನು ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸುವುದರಿಂದ ಕಕ್ಷಿದಾರರಿಗೆ ಸಮಯ ಮತ್ತು ಹಣದ ಉಳಿತಾಯವಾಗುವುದರ ಜತೆಗೆ, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸಹಕಾರಿಯಾಗುತ್ತದೆ.





