ಕಲಬುರಗಿ | ಅಮಾನವೀಯವಾಗಿ ಕಾರ್ಮಿಕನ ಮೃತ ದೇಹ ಎಳೆದೊಯ್ದ ಪ್ರಕರಣ; ಸಿಪಿಐಎಂ ಖಂಡನೆ

Date:

Advertisements

ಕಲಬುರಗಿಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ಬಳಿ ಸಿಮೆಂಟ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಕಾರ್ಮಿಕನ ಮೃತ ದೇಹವನ್ನು ಪ್ರಾಣಿಯ ರೀತಿ ಅಮಾನವೀಯವಾಗಿ ಎಳೆದೊಯ್ದಿರುವುದು ಅತ್ಯಂತ ಖಂಡನೀಯ ಎಂದು ಭಾರತ ಕಮ್ಯುನಿಸ್ಟ್‌ ಪಕ್ಷ ಮಾರ್ಕ್ಸ್‌ವಾದಿ (ಸಿಪಿಐಎಂ) ಜಿಲ್ಲಾ ಕಾರ್ಯದರ್ಶಿ ಕೆ ನೀಲಾ ಅಭಿಪ್ರಾಯಪಟ್ಟರು.

ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವಾಗಲೇ ಅನಾರೋಗ್ಯದಿಂದ ಬಳಲುತ್ತಿದ್ದ ಚಂದನಸಿಂಗ್ (34) ಎಂಬ ಕಾರ್ಮಿಕ ಲೋ ಬಿಪಿಯಾಗಿ ಹೃದಯಾಘಾತದಿಂದ ಮೃತಪಟ್ಟಿಟ್ಟಿದ್ದ. ಅವನ ದೇಹವನ್ನು ರಸ್ತೆಯ ಮೇಲಿನಿಂದ ಪ್ರಾಣಿಗಳ ದೇಹದಂತೆ ಎಳೆದೊಯ್ಯಲಾಗಿದೆ. ಮೃತ ದೇಹವನ್ನು ಗೌರವಯುತವಾಗಿ ಸಾಗಿಸಬೇಕಾದ ವ್ಯವಸ್ಥೆ ಮಾಡಬೇಕಾಗಿರುವುದು ಆಡಳಿತ ಮಂಡಳಿಯ ಜವಾಬ್ದಾರಿಯಾಗಿದೆ. ತನ್ನ ಜವಾಬ್ದಾರಿ ನಿಭಾಯಿಸದ ಆಡಳಿತ ಮಂಡಳಿಯು ಇಂತಹ ಅಮಾನವೀಯತೆಗೆ ಕಾರಣವಾಗಿದೆ. ಸಿಪಿಐಎಂ ಪಕ್ಷ ಈ ಅಮಾನವೀಯತೆಯನ್ನು ತೀವ್ರವಾಗಿ ಖಂಡಿಸುತ್ತದೆ. ಸಿಮೆಂಟ್ ಕಾರ್ಖಾನೆಯ ಮಾಲಿಕರ ಕಾರ್ಮಿಕ ವಿರೋಧಿ ನಡೆ ಕ್ರೌರ್ಯದ ಧೋರಣೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ಕಲಬುರಗಿ | ಕಾರ್ಮಿಕನ ಮೃತದೇಹವನ್ನು ಪ್ರಾಣಿ ರೀತಿ ಎಳೆದೊಯ್ದು ವಿಕೃತಿ ಮೆರೆದ ಸಿಮೆಂಟ್ ಕಂಪನಿ

Advertisements

ಕಾರ್ಮಿಕ ನೀತಿ ವಿರುದ್ಧವಾಗಿ ನಡೆದುಕೊಂಡಿರುವ ಶ್ರೀ ಸಿಮೆಂಟ್‌ ಕಾರ್ಖಾನೆಯ ಮಾಲಿಕರನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು. ಹಾಗೂ ಮೃತ ಕಾರ್ಮಿಕನ ಕುಟುಂಬಕ್ಕೆ ರೂ.50 ಲಕ್ಷ ಪರಿಹಾರಧನ ಒದಗಿಸಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ಜಿಲ್ಲಾ ಆಡಳಿತ ಮತ್ತು ಕಾರ್ಮಿಕ ಇಲಾಖೆಯು ಕ್ರಮವಹಿಸಬೇಕು” ಎಂದು ಆಗ್ರಹಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X